AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿ ಆಸ್ಪತ್ರೆಯಲ್ಲಿದ್ದ ರೋಗಿ ಮೇಲೆ ಹಲ್ಲೆ! ಪೊಲೀಸ್ ಕಾನ್ಸ್​ಟೇಬಲ್ ವಿರುದ್ಧ ದೂರು ದಾಖಲು

ಕಾನ್ಸ್​ಟೇಬಲ್ ಶಿವಪ್ಪ ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ವೇಳೆ ರೋಗಿಯೊಬ್ಬ ವಾರ್ಡ್​ನಿಂದ ಹೊರಬಂದು ಆಸ್ಪತ್ರೆಯ ಕಂಪ್ಯೂಟರ್ ಆನ್ ಮಾಡಲು ಯತ್ನಿಸುತ್ತಿದ್ದನಂತೆ.

ಮಡಿಕೇರಿ ಆಸ್ಪತ್ರೆಯಲ್ಲಿದ್ದ ರೋಗಿ ಮೇಲೆ ಹಲ್ಲೆ! ಪೊಲೀಸ್ ಕಾನ್ಸ್​ಟೇಬಲ್ ವಿರುದ್ಧ ದೂರು ದಾಖಲು
ಹಲ್ಲೆಗೊಳಗಾದ ರೋಗಿ
TV9 Web
| Edited By: sandhya thejappa|

Updated on: Sep 13, 2021 | 8:52 AM

Share

ಕೊಡಗು: ಆಸ್ಪತ್ರೆಯಲ್ಲಿದ್ದ ರೋಗಿ ಮೇಲೆ ಪೊಲೀಸ್ ಕಾನ್ಸ್​ಟೇಬಲ್ (Police Constable) ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಕಾನ್ಸ್​ಟೇಬಲ್ ಲಾಠಿ ಏಟಿನಿಂದ ರೋಗಿಗೆ ಗಂಭೀರ ಗಾಯವಾಗಿದ್ದು, ಕೊಡಗು ಜಿಲ್ಲೆಯ ಮಡಿಕೇರಿಯ ಅಶ್ವಿನಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ರಾತ್ರಿ ವೇಳೆ ರೋಗಿ ವಾರ್ಡ್​ನಿಂದ ಹೊರಬಂದು ಆಸ್ಪತ್ರೆಯಲ್ಲಿ ಅಸಂಬದ್ಧವಾಗಿ ವರ್ತಿಸಿದ ಹಿನ್ನೆಲೆ ಕಾನ್ಸ್​ಟೇಬಲ್ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಕಾನ್ಸ್​​ಟೇಬಲ್ ಶಿವಪ್ಪ ಎಂಬುವವರು ರೋಗಿಯ ಮೇಲೆ ಲಾಠಿಯಲ್ಲಿ ಹಲ್ಲೆಗೈದಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಶಿವಪ್ಪ ವಿರುದ್ಧ ರೋಗಿ ಸಂಬಂಧಿಕರು ಎಸ್​ಪಿಗೆ ದೂರು ನೀಡಿದ್ದಾರೆ.

ಕಾನ್ಸ್​ಟೇಬಲ್ ಶಿವಪ್ಪ ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ವೇಳೆ ರೋಗಿಯೊಬ್ಬ ವಾರ್ಡ್​ನಿಂದ ಹೊರಬಂದು ಆಸ್ಪತ್ರೆಯ ಕಂಪ್ಯೂಟರ್ ಆನ್ ಮಾಡಲು ಯತ್ನಿಸುತ್ತಿದ್ದನಂತೆ. ಅಲ್ಲದೇ ಸ್ವಾಗತ ವಿಭಾಗದಲ್ಲಿ ಏನೇನೋ ತಡಕಾಡುತ್ತಿದ್ದನಂತೆ. ಹೀಗಾಗಿ ರೋಗಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹಲ್ಲೆಗೊಳಗಾದ ರೋಗಿಗೆ ಗಂಭೀರ ಗಾಯವಾಗಿದ್ದು, ಕಾನ್ಸ್​ಟೇಬಲ್ ವಿರುದ್ಧ ಜಿಲ್ಲಾ ಎಸ್​ಪಿ ಕ್ಷಮಾ ನಿಶ್ರಾಗೆ ರೋಗಿ ಸಂಬಂಧಿಕರು ಮೌಕಿಕ ದೂರು ನೀಡಿದ್ದಾರೆ.

ಪತ್ನಿಯಿಂದಲೇ ಪತಿ ಹತ್ಯೆ ತುಮಕೂರು: ಪತಿ ಮೇಲೆ ಪೆಟ್ರೋಲ್ ಸುರಿದು ಪತ್ನಿ ಹತ್ಯೆಗೈದಿರುವ ಘಟನೆ ತುಮಕೂರಿನ ಬಡ್ಡಿಹಳ್ಳಿಯಲ್ಲಿ ಸಂಭವಿಸಿದೆ. 52 ವರ್ಷದ ನಾರಾಯಣ ಎಂಬುವವರು ಕೊಲೆಯಾದ ವ್ಯಕ್ತಿ. ಮನೆಯಲ್ಲಿ ಗಂಡ- ಹೆಂಡತಿ ಪ್ರತಿದಿನ ಜಗಳ ಆಡುತ್ತಿದ್ದರಂತೆ. ಕಳೆದ 8 ವರ್ಷಗಳಿಂದ ಪ್ರತಿನಿತ್ಯ ಜಗಳವಾಗುತ್ತಿದ್ದರಂತೆ. ಪತ್ನಿ ಅನ್ನಪೂರ್ಣಗೆ ಅಕ್ರಮ ಸಂಬಂಧ ಇತ್ತು ಎನ್ನಲಾಗಿದೆ. ನೆಲಮಂಗಲ ಬಳಿಯ ಟೋಲ್​ನಲ್ಲಿ ನಾರಾಯಣ ಕೆಲಸ ಮಾಡಿಕೊಂಡಿದ್ದರಂತೆ.

ಇದನ್ನೂ ಓದಿ

ಯಾದಗಿರಿ ಜಿಲ್ಲೆಯಲ್ಲೊಂದು ಅಮಾನವೀಯ ಘಟನೆ? ಮಹಿಳೆ ನಗ್ನಗೊಳಿಸಿ ಅಂಗಾಂಗ ಮುಟ್ಟಿ ಪೈಶಾಚಿಕ ಕೃತ್ಯ

Health Tips: ಒಮ್ಮೆ ಮಾಡಿಟ್ಟ ಚಹಾ ಮತ್ತೆ ಮತ್ತೆ ಬಿಸಿ ಮಾಡಿ ಕುಡಿಯುವುದು ಒಳ್ಳೆಯದಲ್ಲ; ಕಾರಣ ತಿಳಿದುಕೊಳ್ಳಿ

(Police Constable Attack on Patient at Madikeri hospital)

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ