AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವು ತಿಂಗಳುಗಳಿಂದ ಪಾವತಿಯಾಗಿಲ್ಲ ವೇತನ: ಮಡಿಕೇರಿಯಲ್ಲಿ ಕೆಎಸ್​ಆರ್​ಟಿಸಿ ಬಸ್ ಚಾಲಕರಿಂದ ಪ್ರತಿಭಟನೆ

ಕೆಎಸ್​ಆರ್​ಟಿಸಿ ನೌಕರರ ಸಂಕಷ್ಟ ಮುಗಿಯುತ್ತಲೇ ಇಲ್ಲ. ಇದೀಗ, ಸಂಬಳವೇ ಕೊಡುತ್ತಾ ಇಲ್ಲ ಎಂದು ಮಡಿಕೇರಿ ಡಿಪೋದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಕೆಎಸ್​ಆರ್​ಟಿಸಿ ಬಸ್ ಚಾಲಕರು ಪ್ರತಿಭಟನೆಗೆ ಇಳಿದಿದ್ದಾರೆ. ಬಸ್​ಗಳಿಲ್ಲದೆ ಕೊಡಗು ಜಿಲ್ಲೆಯಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ.

ಕೆಲವು ತಿಂಗಳುಗಳಿಂದ ಪಾವತಿಯಾಗಿಲ್ಲ ವೇತನ: ಮಡಿಕೇರಿಯಲ್ಲಿ ಕೆಎಸ್​ಆರ್​ಟಿಸಿ ಬಸ್ ಚಾಲಕರಿಂದ ಪ್ರತಿಭಟನೆ
ಮಡಿಕೇರಿಯಲ್ಲಿ ಕೆಎಸ್​ಆರ್​ಟಿಸಿ ಬಸ್ ಚಾಲಕರಿಂದ ಪ್ರತಿಭಟನೆ
Gopal AS
| Updated By: Ganapathi Sharma|

Updated on:Sep 14, 2024 | 4:53 PM

Share

ಮಡಿಕೇರಿ, ಸೆಪ್ಟೆಂಬರ್ 14: ಕೊಡಗು ಜಿಲ್ಲೆಯ ಮಡಿಕೇರಿ ಡಿಪೋದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಕೆಎಸ್​ಆರ್​ಟಿಸಿ ಬಸ್ ಚಾಲಕರು ಶನಿವಾರ ಬೀದಿಗಿಳಿದು, ಮೌನ ಪ್ರತಿಭಟನೆ ಮಾಡುತ್ತಿದ್ದಾರೆ. ಮಡಿಕೇರಿ ಡಿಪೋದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಇವರೆಲ್ಲರಿಗೂ ಕಳೆದ ಕೆಲವು ತಿಂಗಳಿನಿಂದ ಸರಿಯಾಗಿ ವೇತನ ಪಾವತಿಯಾಗಿಲ್ಲ. ಹಾಗಾಗಿ ಬೆಳಗ್ಗಿನಿಂದಲೇ ಕೆಲಸಕ್ಕೆ ಹಾಜರಾಗದೆ ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ.

ಇವರನ್ನು ಈ ಮೊದಲು ಬೇರೆಯೊಂದು ಸಂಸ್ಥೆ ಗುತ್ತಿಗೆ ಮೇಲೆ ನೇಮಕ ಮಾಡಿಕೊಂಡಿತ್ತು. ಆದರೆ, ಇದೀಗ ಕಳೆದ ಎರಡು ತಿಂಗಳಿನಿಂದ ಬಹುತೇಕ ಚಾಲಕರ ವೇತನವನ್ನು ಕಾರಣವೇ ಇಲ್ಲದೆ 8 ರಿಂದ 10 ಸಾವಿರ ರೂಪಾಯಿವರೆಗೆ ಕಡಿತ ಮಾಡಲಾಗಿದೆ. ಇವರ ಖಾತೆಗೆ ಇಎಫ್ ಹಣ ಕೂಡ ವರ್ಗಾವಣೆಯಾಗಿಲ್ಲ. ಇದರ ಬಗ್ಗೆ ಕೇಳಿದರೆ ‘‘ಪೂಜ್ಯಾಯ ಸಂಸ್ಥೆ’’ ಉಡಾಫೆಯ ಉತ್ತರ ನೀಡುತ್ತಿದೆ ಎಂಬುದು ಚಾಲಕರ ಆರೋಪವಾಗಿದೆ.

ಅಲ್ಪ ಮೊತ್ತವಷ್ಟೇ ಜಮೆ ಮಾಡುತ್ತಿದ್ದಾರೆ: ಚಾಲಕರ ಆರೋಪ

ಚಾಲಕರಿಗೆ 25 ಸಾವಿರ ರೂ. ಸಂಬಳದಲ್ಲಿ 2 ಸಾವಿರ ರೂ. ಪಿಎಫ್ ಕಡಿತ ಮಾಡಿ ಉಳಿದ 23 ಸಾವಿರ ರೂ. ಹಣ ಅಕೌಂಟ್​ಗೆ ಹಾಕಬೇಕು. ಆದರೆ 23 ಸಾವಿರ ರೂ. ಬದಲು 10 ಸಾವಿರ, 14 ಸಾವಿರ ಹೀಗೆ ಅಲ್ಪ ಮೊತ್ತವನ್ನ ಜಮೆ ಮಾಡಲಾಗುತ್ತಿದೆ ಎಂಬುದು ಚಾಲಕರ ವಾದ. ಈ ಬಗ್ಗೆ ಡಿಪೋ ಡಿಸಿ ಬಳಿ ಪ್ರಶ್ನಿಸಿದಾಗ, ಸಮಸ್ಯೆ ಬಗೆಹರಿಸುತ್ತೇವೆ ಎನ್ನುತ್ತಾರೆ. ಹಾಗೆ ಹೇಳುವುದು ಬಿಟ್ಟರೆ ಈವರೆಗೆ ಸಮಸ್ಯೆ ಪರಿಹಾರವಾಗಿಲ್ಲ ಎಂಬುದು ಚಾಲಕರ ದೂರಾಗಿದೆ.

ಎಷ್ಟೋ ಚಾಲಕರು ತಿಂಗಳಿಗೆ 30 ಗಂಟೆಗೂ ಅಧಿಕ ಒಟಿ ಮಾಡಿದ್ದಾರೆ. ಅದರ ಹಣ ಕೂಡ ಕೊಟ್ಟಿಲ್ಲ. ಅಲ್ಲದೆ, ಒಂದು ದಿನ ರಜೆ ಹಾಕಿದ್ರೆ 250 ರೂ. ಕಡಿತ ಮಾಡಲಾಗುತ್ತಿದೆ. ಈ ತಿಂಗಳು ಹಬ್ಬಕ್ಕಾದ್ರೂ ವೇತನ ಕೊಡಿ ಎಂದು ಮನವಿ ಮಾಡಿದರೂ ಹಣ ಕೊಡದೆ ಸತಾಯಿಸಿದ್ದಾರಂತೆ. ಹಾಗಾಗಿ ಈ ಎಲ್ಲಾ ಸಮಸ್ಯೆಗಳ ಬಗ್ಗೆ ಕಳೆದ ಹಲವು ದಿನಗಳಿಂದ ಪೂಜ್ಯಾಯ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದರೂ ಪ್ರಯೋಜನವಾಗಿಲ್ಲ. ಹಾಗಾಗಿ ಬೇರೆ ದಾರಿ ಇಲ್ಲದೆ, ಇದೀಗ ಪ್ರತಿಭಟನೆಗೆ ಇಳಿದಿರುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಎಚ್‌ಎಸ್‌ಆರ್‌ಪಿಗೆ ನಾಳೆಯೇ ಗಡುವು: ಸ್ವಲ್ಪ ದಿನಗಳ ಮಟ್ಟಿಗೆ ಇದೆ ಗುಡ್ ನ್ಯೂಸ್!

ಉಚಿತ ಪ್ರಯಾಣ ಯೋಜನೆಯೇ ಕಾರಣವೇ?

ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಈ ಸಮಸ್ಯೆಯ ಮೂಲ ರಾಜ್ಯ ಸರ್ಕಾರವೇ ಎಂದು ಸಾರ್ವಜನಿಕ ವಲಯದಲ್ಲಿ ಶಂಕೆ ಮೂಡಿದೆ. ಮಹಿಳೆಯರಿಗೆ ಉಚಿತ ಬಸ್ ಹೊರೆಯಿಂದಾಗಿ ಸರ್ಕಾರದಿಂದ ಸಾರಿಗೆ ಸಂಸ್ಥೆಯ ಗುತ್ತಿಗೆದಾರರಿಗೆ ನೀಡಲು ಹಣವಿಲ್ಲದೆ ಸರ್ಕಾರವೇ ಎಡವಟ್ಟು ಮಾಡಿದೆಯಾ ಎಂಬ ಬಗ್ಗೆ ಚರ್ಚೆಯಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 4:49 pm, Sat, 14 September 24

ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್