AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು: ಬೆಟ್ಟದ ಮೇಲಿನ ಕಾಡಿನಲ್ಲಿ, ದಾರಿ ತಪ್ಪಿ 4 ದಿನ ಪೊದೆಯಲ್ಲೇ ಸಿಲುಕಿದ್ದ ಅಜ್ಜಿ ಕೊನೆಗೂ ರಕ್ಷಣೆ

ಬೆಟ್ಟದ ಮೇಲಿನ‌ ಪೊದೆಯಲ್ಲಿ ಸಿಲುಕಿದ್ದ ವೃದ್ಧೆಯನ್ನು ರಕ್ಷಣೆ ಮಾಡಿರುವ ಘಟನೆ ಮಡಿಕೇರಿ ತಾಲೂಕಿನ ಬಲ್ಲಮಾವಟಿ ಗ್ರಾಮದಲ್ಲಿ ನಡೆದಿದೆ.

ಕೊಡಗು: ಬೆಟ್ಟದ ಮೇಲಿನ ಕಾಡಿನಲ್ಲಿ, ದಾರಿ ತಪ್ಪಿ 4 ದಿನ ಪೊದೆಯಲ್ಲೇ ಸಿಲುಕಿದ್ದ ಅಜ್ಜಿ ಕೊನೆಗೂ ರಕ್ಷಣೆ
ವೃದ್ಧೆ ಸೀತಮ್ಮ‌
TV9 Web
| Edited By: ವಿವೇಕ ಬಿರಾದಾರ|

Updated on:Aug 01, 2022 | 8:14 PM

Share

ಕೊಡಗು: ಬೆಟ್ಟದ ಮೇಲಿನ‌ ಪೊದೆಯಲ್ಲಿ ಸಿಲುಕಿದ್ದ ವೃದ್ಧೆಯನ್ನು ರಕ್ಷಣೆ ಮಾಡಿರುವ ಘಟನೆ ಮಡಿಕೇರಿ (Madikeri) ತಾಲೂಕಿನ ಬಲ್ಲಮಾವಟಿ ಗ್ರಾಮದಲ್ಲಿ ನಡೆದಿದೆ. ಸೀತಮ್ಮ‌ (80) ರಕ್ಷಣೆಯಾದ ಅಜ್ಜಿ. ಅಜ್ಜಿ ಸಂಬಂಧಿಕರ‌ ಮನೆಗೆ ತೆರಳುತ್ತಿದ್ದಾಗ ದಾರಿ ತಪ್ಪಿ ಕಾಡು ಪಾಲಾಗಿದ್ದಳು. ಈ ಸಂಬಂಧ ಕುಟುಂಬಸ್ಥರು ನಾಲ್ಕು ದಿನಗಳ‌ ಕಾಲ ಹುಡಕಾಟ ನಡೆಸಿದ್ದರು.

ಅಜ್ಜಿ ಮನೆಯಿಂದ‌ 2 ಕಿಮಿ ದೂರ ಬೆಟ್ಟದ ಮೇಲಿನ ಕಾಡಿನಲ್ಲಿ ನಾಲ್ಕು ದಿನಗಳ ಕಾಲ‌ ಪೊದೆಯಲ್ಲೇ ಆಶ್ರಯ ಪಡೆದಿದ್ದಳು. ಇಂದು (ಆಗಸ್ಟ್ 1) ಪತ್ತೆಯಾಗಿದ್ದಾಳೆ. ಅಸ್ವಸ್ಥ ಅಜ್ಜಿ ಸೀತಮ್ಮಾಗೆ ನಾಪೋಕ್ಲು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಕ್ರಮ ಸಂಬಂಧ ಆರೋಪ ವ್ಯಕ್ತಿಯ ಕೊಲೆ ಬೆಂಗಳೂರು: ಅಕ್ರಮ ಸಂಬಂಧ ಆರೋಪದಡಿ ವ್ಯಕ್ತಿ ಕೊಲೆಯಾಗಿರುವ ಘಟನೆ ಬೆಂಗಳೂರಿನ ಕಾಟನ್ ಪೇಟೆಯ ಭಕ್ಷಿ ಗಾರ್ಡನ್​ನಲ್ಲಿ ನಡೆದಿದೆ. ಶ್ರೀನಿವಾಸ್ ಕೊಲೆಯಾದ ವ್ಯಕ್ತಿ. ಮೃತ ಶ್ರೀನಿವಾಸ್, ಸಂತೋಷ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಅನ್ನೋ ಆರೋಪ ಕೇಳಿಬಂದಿತ್ತು.

ಇದೇ ವಿಚಾರಕ್ಕೆ ಹಲವು ಬಾರಿ ಇಬ್ಬರ ಮಧ್ಯೆ ಗಲಾಟೆಗಳು ನಡೆದಿತ್ತು. ನಿನ್ನೆ (ಜುಲೈ 31) ಸಂತೋಷ‌ ಏಕಾಏಕಿ ಶ್ರೀನಿವಾಸ್​ಗೆ ದೊಣ್ಣೆಯಿಂದ ಹಲ್ಲೆ ಮಾಡಿದ್ದನು. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಶ್ರೀನಿವಾಸ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

ಪೊಲೀಸರು ಆರೋಪಿ ಸಂತೋಷನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್ ಹಾಗೂ ಕಾರ್ ನಡುವೆ ಅಪಘಾತ ; ಓರ್ವ ಸಾವು

ಶಿವಮೊಗ್ಗ: ಖಾಸಗಿ ಪ್ರವಾಸಿಗರ ಬಸ್ ಹಾಗೂ ಮಾರುತಿ ಈಕೋ ಕಾರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರ್ ಚಾಲಕ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ತಾಳಗುಪ್ಪ ಬಳಿಯ ಅಲಳ್ಳಿ ಶಿರೂರು ಬಳಿ ನಡೆದಿದೆ. ಚನ್ನಗಿರಿಯ ಶಹಬಾಜ್(26) ಮೃತ ವ್ಯಕ್ತಿ. ಕಾರಿನಲ್ಲಿದ್ದ ರಿಹಾನ್ (14) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ತಬಸ್ಸುಮ್(23),  ಶಿಫಾ(27), ಖಮರುನ್ನಿಸಾ(45), ಜಬ್ರುನ್(55), ಮಹಮ್ಮದ್ ಉಸ್ಮಾನ್(25) ಆರು ಮಂದಿಗೂ ಗಂಭೀರ ಗಾಯಗಳಾಗಿವೆ.

ಅವರನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರೆಲ್ಲರೂ ಒಂದೇ ಕುಟುಂಬದವರಾಗಿದ್ದು,ಜೋಗ ಜಲಪಾತ ವೀಕ್ಷಿಸಿ ವಾಪಸ್ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೋಲೀಸರು ಭೇಟಿ ಪರಿಶೀಲನೆ. ನಡೆಸಿದ್ದಾರೆ

ಇನ್ನೂ ಬಸ್​ನಲ್ಲಿದ್ದ ಚಾಲಕ ಸಮೇತ ಎಲ್ಲ ಪ್ರಯಾಣಿಕರು ಪರಾರಿಯಾಗಿದ್ದಾರೆ. ಜನರು ದಾವಣಗೆರೆ ಸಿದ್ದರಾಮೋತ್ಸವಕ್ಕೆ ಬಂದಿದ್ದರು. ಜನರು ದಾವಣಗೆರೆಯಿಂದ ಜೋಗ್ ನೋಡಲು ಬಂದಿದ್ದರು. ಸಾಗರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 4:44 pm, Mon, 1 August 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ