AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

70 ವರ್ಷಗಳಲ್ಲಿ ಮೊದಲ ಬಾರಿಗೆ ಬತ್ತಿ ಹೋಗಿದ್ದ ಕಾವೇರಿ ನದಿ ಮತ್ತೆ ಗತವೈಭವಕ್ಕೆ ಮರಳುತ್ತಿದೆ! ಇಲ್ಲಿದೆ ಚಿತ್ರಣ

ಈ ಬಾರಿ ಅವಧಿಗೆ ಮೊದಲೇ ಜಿಲ್ಲೆಗೆ ಮುಂಗಾರು ಎಂಟ್ರಿ ಕೊಟ್ಟಿದೆ. ಜೂನ್ ಒಂದರಿಂದ ಮುಂಗಾರು ಅಧಿಕೃತವಾಗಿ ಅಬ್ಬರಿಸಲಾರಂಭಿಸುವ ನಿರೀಕ್ಷೆ ಇದೆ. ಕಳೆದ ವರ್ಷ ಮಳೆಯೇ ಇಲ್ಲದೆ ಅಂತರ್ಜಲ ಬರಿದಾಗಿದೆ. ಎಲ್ಲೆಡೆ ನೀರಿನ ಹಾಹಾಕಾರ ತಲೆದೋರಿತ್ತು. ಆದ್ರೆ ಈ ವರ್ಷ ಉತ್ತಮ ಮಳೆಯ ನಿರೀಕ್ಷೆ ಇದ್ದು, ಕೊಡಗು ಜಿಲ್ಲೆ ಎಂದಿನ ಮಳೆಗಾಲದ ವೈಭವಕ್ಕೆ ಮರಳುವ ಸಂಭವವಿದೆ.

70 ವರ್ಷಗಳಲ್ಲಿ ಮೊದಲ ಬಾರಿಗೆ ಬತ್ತಿ ಹೋಗಿದ್ದ ಕಾವೇರಿ ನದಿ ಮತ್ತೆ ಗತವೈಭವಕ್ಕೆ ಮರಳುತ್ತಿದೆ! ಇಲ್ಲಿದೆ ಚಿತ್ರಣ
70 ವರ್ಷದಲ್ಲಿ ಮೊದಲ ಬಾರಿಗೆ ಬತ್ತಿ ಹೋಗಿದ್ದ ಕಾವೇರಿ ನದಿ ಮತ್ತೆ ಗತವೈಭವ
Follow us
Gopal AS
| Updated By: ಸಾಧು ಶ್ರೀನಾಥ್​

Updated on:May 20, 2024 | 11:32 AM

ಸುಮಾರು 70 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭರ್ತಿ ಬತ್ತಿ ಹೋಗಿದ್ದ ಕಾವೇರಿ (Cauvery) ಮತ್ತೆ ತನ್ನ ಗತವೈಭವಕ್ಕೆ ಮರಳುತ್ತಿದೆ. ತೀವ್ರ ಬರದಿಂದಾಗಿ ಹರಿಯುವಿಕೆಯನ್ನೇ ನಿಲ್ಲಿಸಿದ್ದ ಜೀವನದಿ ಕಾವೇರಿ ಮತ್ತೆ ಮೈದುಂಬಿಕೊಳ್ಳುತ್ತಿದೆ. ಇದು ಕಾವೇರಿ ಕೊಳ್ಳದ ಜನ ವರ್ಗದಲ್ಲಿ ಸಂತಸ ತಂದಿದೆ. ಕಳೆದ ಕೆಲವು ದಿನಗಳಿಂದ ಕೊಡಗಿನಲ್ಲಿ (Kodagu) ಉತ್ತಮ ಮಳೆಯಾಗ್ತಾ (Madikeri Rain) ಇರೋದ್ರಿಂದ ಕಾವೇರಿ ಮಾತ್ರವಲ್ಲ ಕೊಡಗಿನ ಎಲ್ಲಾ ನದಿ ತೊರೆಗಳು ಜೀವ ಪಡೆದುಕೊಂಡಿವೆ. ಎಲ್ಲೆಡೆ ಮತ್ತೆ ಹಸಿರು ನಳನಳಿಸುತ್ತಿದೆ.

# #Kodagu #Madikeri #Rain #MadikeriRain

ಅದು ಏಪ್ರಿಲ್ ಮೊದಲ … ಎಲ್ಲೆಲ್ಲೂ ಸುಡು ಬಿಸಿಲು.. ಭೀಕರ ಬರ.. ಪರಿಣಾಮ ಕೊಡಗಿನಲ್ಲಿ ಜೀವ ನದಿ ಹರಿಯುವಿಕೆ ನಿಲ್ಲಿಸಿ ಬಟಾಬಯಲಾಗಿದ್ದ ಭೀಕರ ದೃಶ್ಯವದು.. ಎಲ್ಲಿ ನೋಡಿದರೂ ಬರೀ ಬಂಡೆಗಲ್ಲುಗಳು.. ನೀರಿನ ಸುಳಿವೇ ಇಲ್ಲ.. ಕಾವೇರಿಯನ್ನ ನೀರಿಗಾಗಿ ಆಶ್ರಯಿಸಿದ್ದ ಹಳ್ಳಿಗಳು, ಪಟ್ಟಣಗಳು, ನಗರಗಳಂತೂ ಹನಿ ಹನಿ ನೀರಿಗೂ ತತ್ವಾರ ಪಡುವಂತಾಗಿತ್ತು.

ಆದ್ರೆ ಈಗಿನ ದೃಶ್ಯ ಹೇಗಿದೆಯೆಂದರೆ ಜೀವನದಿ ಮತ್ತೆ ಜೀವ ಪಡೆದುಕೊಂಡಿದೆ. ಉತ್ತಮ ಎನಿಸುವಷ್ಟರ ಮಟ್ಟಿಗೆ ಸರಾಗವಾಗಿ ನದಿ ಹರಿಯುತ್ತಿದೆ. ಕೊಡಗಿನ ದುಬಾರೆ, ವಾಲ್ನೂರು, ತೆಪ್ಪದಕಂಡಿ, ಕುಶಾಲನಗರ ವ್ಯಾಪ್ತಿಯಲ್ಲಿ ಕಾವೇರಿ ನದಿ ಭರ್ತಿ 50 ದಿನಗಳ ಬಳಿಕ ಹರಿಯುವಿಕೆ ಶುರು ಮಾಡಿದೆ. ಸುಮಾರು 70 ವರ್ಷ ಗಳ ಹಿಂದೆ ಕಾವೇರಿ ನದಿ ಭೀಕರ ಬರಗಾಲಕ್ಕೆ ತುತ್ತಾಗಿ ಹರಿಯುವಿಕೆ ನಿಲ್ಲಿಸಿತ್ತು. ಅದಾದ ಬಳಿಕ ಈ ವರ್ಷವೇ ಇಷ್ಟೊಂದು ಕನಿಷ್ಟ ಮಟ್ಟಕ್ಕೆ ನದಿ ಇಳಿದಿತ್ತು. ಜಲಚರಗಳ ಮಾರಣಹೋಮವಾಗಿತ್ತು. ಆದ್ರೆ ಕೊಡಗಿನ ಹಲವೆಡೆ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಇದರಿಂದ ಪಶ್ಚಿಮ ಘಟ್ಟದ ಹಳ್ಳಕೊಳ್ಳಗಳು ನದಿ ತೊರೆಗಳಲ್ಲಿ ನೀರು ಹರಿದು ಅದು ಕಾವೇರಿ ಒಡಲು ಸೇರುತ್ತಿದೆ. ಪರಿಣಾಮ ಕಾವೇರಿಯು ನಿಧಾನವಾಗಿ ಮೈದುಂಬಿಕೊಳ್ಳುತ್ತಿದೆ ಎನ್ನುತ್ತಾರೆ ಚಂದ್ರಮೋಹನ್, ಕಾವೇರಿ ನದಿ ಬಚಾವೋ ಆಂದೋಲನ ಸಂಚಾಲಕ.

ಇದನ್ನೂ ಓದಿ: ಕೊಡಗಿನಲ್ಲಿ ಉತ್ತಮ‌ ಮಳೆ – ಮತ್ತೆ ಜೀವ ಪಡೆದುಕೊಂಡ ಕಾವೇರಿ ನದಿ, ನೀರಿನ ಬವಣೆ ದೂರ

ಇನ್ನು ಕಾವೇರಿ ಮೈ ದುಂಬಿಕೊಂಡಿರುವುದು ಕಾವೇರಿ ಕೊಳ್ಳದ ಜನರಲ್ಲಿ ಹರ್ಷ ಮೂಡಿಸಿದೆ. ವಿಶೇಷವಾಗಿ ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಎರಡು ತಿಂಗಳು ಕುಡಿಯುವ ನೀರಿಗಾಗಿ ಇನ್ನಿಲ್ಲದ ಬವಣೆ ಪಡುವಂತಾಗಿತ್ತು. ಆದ್ರೆ ಇದೀಗ ಕಾವೇರಿಯಲ್ಲಿ ನೀರು ಹರಿಯುತ್ತಿರುವುದು ಸದ್ಯ ನೀರಿನ ಬವಣೆ ದೂರವಾಗುವಂತೆ ಮಾಡಿದೆ. ಇದು ಸ್ಥಳೀಯ ಜನರಲ್ಲಿ ಹರ್ಷ ಮೂಡಿಸಿದೆ ಎನ್ನುತ್ತಾರೆ ವನಿತಾ ಸಿಎಂ, ಕುಶಾಲನಗರ ನಿವಾಸಿ.

ಈ ಬಾರಿ ಅವಧಿಗೆ ಮೊದಲೇ ಜಿಲ್ಲೆಗೆ ಮುಂಗಾರು ಎಂಟ್ರಿ ಕೊಟ್ಟಿದೆ. ಜೂನ್ ಒಂದರಿಂದ ಮುಂಗಾರು ಅಧಿಕೃತವಾಗಿ ಅಬ್ಬರಿಸಲಾರಂಭಿಸುವ ನಿರೀಕ್ಷೆ ಇದೆ. ಕಳೆದ ವರ್ಷ ಮಳೆಯೇ ಇಲ್ಲದೆ ಅಂತರ್ಜಲ ಬರಿದಾಗಿದೆ. ಎಲ್ಲೆಡೆ ನೀರಿನ ಹಾಹಾಕಾರ ತಲೆದೋರಿತ್ತು. ಆದ್ರೆ ಈ ವರ್ಷ ಉತ್ತಮ ಮಳೆಯ ನಿರೀಕ್ಷೆ ಇದ್ದು, ಕೊಡಗು ಜಿಲ್ಲೆ ಎಂದಿನ ಮಳೆಗಾಲದ ವೈಭವಕ್ಕೆ ಮರಳುವ ಸಂಭವವಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published On - 11:29 am, Mon, 20 May 24

11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?