AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಶ್ವರಪ್ಪ ಟಿಕೆಟ್ ತ್ಯಜಿಸಿ ಹರ್ಷನ ತಂಗಿಗೆ, ಎಂಪಿ ಟಿಕೆಟ್ ತಾಯಿಗೆ ಕೊಡಲಿ -ಅವಿರೋಧವಾಗಿ ಆಯ್ಕೆ ಮಾಡಿಸೋಣ ಎಂದ ಇಬ್ರಾಹಿಂ

CM Ibrahim: 26 ವರ್ಷದ ತೇಜಸ್ವಿ ಸೂರ್ಯ ಪಾರ್ಲಿಮೆಂಟ್ ಗೆ ಹೋದ.ಅದೇ ವಯಸ್ಸಿನ ಹರ್ಷ ಸ್ಮಶಾನ ಸೇರಿದ. ಕಂಡವರ ಮಕ್ಕಳನ್ನ ಬಾವಿಗೆ ತಳ್ಳಿ, ಆಳ ನೋಡೋ ಮುಂ.. ಮಕ್ಕಳು ಬಿಜಿಪಿ ಅವರು ಎಂದು ಸಿಎಂ ಇಬ್ರಾಹಿಂ ಟೀಕಾ ಪ್ರಹಾರ ನಡೆಸಿದರು.

ಈಶ್ವರಪ್ಪ ಟಿಕೆಟ್ ತ್ಯಜಿಸಿ ಹರ್ಷನ ತಂಗಿಗೆ, ಎಂಪಿ ಟಿಕೆಟ್ ತಾಯಿಗೆ ಕೊಡಲಿ -ಅವಿರೋಧವಾಗಿ ಆಯ್ಕೆ ಮಾಡಿಸೋಣ ಎಂದ ಇಬ್ರಾಹಿಂ
ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ
TV9 Web
| Edited By: |

Updated on:Mar 01, 2022 | 4:50 PM

Share

ಶಿವಮೊಗ್ಗ: ಶಿವಮೊಗ್ಗದಲ್ಲಿ ಇತ್ತೀಚೆಗೆ ನಡೆದ ಬಜರಂಗ ದಳ ಕಾರ್ಯಕರ್ತ ಹರ್ಷ (Bhajarangadal Harsha) ಹತ್ಯೆ ವಿಚಾರವಾಗಿ ಮಾಜಿ ಕೇಂದ್ರ ಸಚಿವ ಸಿ ಎಂ ಇಬ್ರಾಹಿಂ ಕೊಡಗಿನ ಮಡಿಕೇರಿ ಸಮೀಪದ ಸುಂಟಿಕೊಪ್ಪದಲ್ಲಿ ಹೇಳಿಕೆ ನೀಡಿದ್ದಾರೆ. ಸಚಿವರಾಗಿರುವ ಸ್ಥಳೀಯ ಶಾಸಕ ಕೆ ಎಸ್​ ಈಶ್ವರಪ್ಪ (KS Eshwarappa) ತಮ್ಮ ಟಿಕೆಟ್ ತ್ಯಜಿಸಿ ಮೃತಪಟ್ಟ ಹರ್ಷನ ತಂಗಿಗೆ ಎಂಎಲ್ಎ ಟಿಕೆಟ್ ನೀಡಲಿ. ತಂಗಿಗೆ ಟಿಕೆಟ್ ನೀಡಿದರೆ ನಾವು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಅವಿರೋಧವಾಗಿ ಆಕೆಯನ್ನು ವಿಧಾನ ಸಭೆಗೆ ಕಳುಹಿಸುತ್ತೇವೆ. ಹಾಗೆಯೇ, ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರ ಮಗ ಬಿವೈ ರಾಘವೇಂದ್ರ ಸಹ (BY raghavendra) ಎಂಪಿ ಸ್ಥಾನ ತ್ಯಜಿಸಲಿ. ಹರ್ಷ ಅವರ ತಾಯಿಗೆ ಎಂಪಿ ಸ್ಥಾನಕ್ಕೆ ಟಿಕೆಟ್ ಕೊಡಲಿ. ಇದರಿಂದ ಹಿಂದೂ ಸಂಸ್ಕೃತಿಗೆ ನಿಜವಾದ ಗೌರವ ಸಿಕ್ಕಂತಾಗುತ್ತದೆ ಎಂದು ಸಿ ಎಂ ಇಬ್ರಾಹಿಂ ತಮ್ಮ ಆಶಯ ವ್ಯಕ್ತಪಡಿಸಿದ್ದಾರೆ.

26 ವರ್ಷದ ತೇಜಸ್ವಿ ಸೂರ್ಯ ಪಾರ್ಲಿಮೆಂಟ್ ಗೆ ಹೋದ. ಅದೇ ವಯಸ್ಸಿನ ಹರ್ಷ ಸ್ಮಶಾನ ಸೇರಿದ. ಕಂಡವರ ಮಕ್ಕಳನ್ನ ಬಾವಿಗೆ ತಳ್ಳಿ, ಆಳ ನೋಡೋ ಮುಂ.. ಮಕ್ಕಳು ಬಿಜಿಪಿ ಅವರು ಎಂದು ಸಿಎಂ ಇಬ್ರಾಹಿಂ ಟೀಕಾ ಪ್ರಹಾರ ನಡೆಸಿದರು.

ರಷ್ಯಾ ದಾಳಿಗೆ ಉಕ್ರೇನ್​​ನಲ್ಲಿದ್ದ ಕರ್ನಾಟಕದ ವಿದ್ಯಾರ್ಥಿ ದುರ್ಮರಣ ರಷ್ಯಾ ದಾಳಿಗೆ ತುತ್ತಾಗಿರುವ ಉಕ್ರೇನ್​​ನಲ್ಲಿ ಕರ್ನಾಟಕದ ವಿದ್ಯಾರ್ಥಿ ನವೀನ್​ ಎಂಬುವರು ಮೃತಪಟ್ಟಿದ್ದಾರೆ (Karnataka Student Killed In Ukraine . ಈ ಬಗ್ಗೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆ ಮಾಹಿತಿ ನೀಡಿದೆ. ನವೀನ್​ ಹಾವೇರಿಯವರಾಗಿದ್ದು, 4ವರ್ಷಗಳಿಂದ ಉಕ್ರೇನ್​​ನಲ್ಲಿ ನೆಲೆಸಿದ್ದರು. ಬೆಳಗ್ಗೆ 11.30ಕ್ಕೆ (ಭಾರತೀಯ ಕಾಲಮಾನ) ಕೊನೇ ಬಾರಿ ಸಂಪರ್ಕಕ್ಕೆ ಸಿಕ್ಕಿದ್ದರು. ಅವರೀಗ ಮೃತಪಟ್ಟಿದ್ದು ದೃಢಪಟ್ಟಿದೆ.

ಉಕ್ರೇನ್​ನಲ್ಲಿ ರಷ್ಯಾ ನಡೆಸಿದ ದಾಳಿಗೆ ಭಾರತದ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದನ್ನು ತಿಳಿಸಲು ವಿಷಾದಿಸುತ್ತೇವೆ. ವಿದ್ಯಾರ್ಥಿಯ ಕುಟುಂಬಕ್ಕೆ ನಮ್ಮ ಸಾಂತ್ವನಗಳು ಎಂದು ವಿದೇಶಾಂಗ ವ್ಯವಹಾರಗಳ ಇಲಾಖೆ ವಕ್ತಾರ ಅರವಿಂದ್ ಬಾಗ್ಚಿ ಟ್ವೀಟ್ ಮಾಡಿದ್ದರು. ಭಾರತದ ವೈದ್ಯಕೀಯ ವಿದ್ಯಾರ್ಥಿ ಸಾವಿನ ಸುದ್ದಿ ಕೇಳಿ ಬರುತ್ತಿದ್ದಂತೆ ರಷ್ಯಾ ಮತ್ತು ಉಕ್ರೇನ್​ ರಾಯಭಾರ ಕಚೇರಿ ಅಧಿಕಾರಿಗಳಿಗೆ ಭಾರತದ ಸರ್ಕಾರ ಬುಲಾವ್ ನೀಡಿದೆ.

ಇದನ್ನೂ ಓದಿ: ಅವಳಿ ಮಕ್ಕಳ ತಾಯಾದ ಅಮೂಲ್ಯ: ಫೋಟೋ ಹಂಚಿಕೊಂಡ ಪತಿ, ಸೆಲೆಬ್ರಿಟಿಗಳಿಂದ ಶುಭಾಶಯ

ಇದನ್ನೂ ಓದಿ: ಸಿದ್ದರಾಮಯ್ಯ ಅಪ್ಪನಾಣೆ ಮೋದಿ PM ಆಗಲ್ಲ ಎಂದಿದ್ರು; ನಾನು ಹೇಳ್ತೇನೆ, ಅಪ್ಪನಾಣೆ ಸಿದ್ದರಾಮಯ್ಯ ಮತ್ತೆ CM ಆಗಲ್ಲ- ಸಿ.ಟಿ.ರವಿ

Published On - 4:38 pm, Tue, 1 March 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?