AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramiah: ಕೋಳಿ ಸಾರು ತಿಂದು ದೇಗುಲಕ್ಕೆ ಸಿದ್ದರಾಮಯ್ಯ ಭೇಟಿ ನೀಡಿದ ಆರೋಪ: ವಿಡಿಯೊ ವೈರಲ್

ಮಡಿಕೇರಿಯ ಅತಿಥಿ ಗೃಹದಲ್ಲಿ‌ ಮಧ್ಯಾಹ್ನ ಕೋಳಿ ಸಾರು‌ ಸವಿದಿದ್ದ ಸಿದ್ದರಾಮಯ್ಯ, ಮಧ್ಯಾಹ್ನದ ಬಳಿಕ ಕೊಡ್ಲಿಪೇಟೆಯ ಬಸವೇಶ್ವರ ದೇವಸ್ಥಾನಕ್ಕೆ‌ ಭೇಟಿ ನೀಡಿದ್ದಾರೆ ಎನ್ನಲಾಗುತ್ತಿದೆ.

Siddaramiah: ಕೋಳಿ ಸಾರು ತಿಂದು ದೇಗುಲಕ್ಕೆ ಸಿದ್ದರಾಮಯ್ಯ ಭೇಟಿ ನೀಡಿದ ಆರೋಪ: ವಿಡಿಯೊ ವೈರಲ್
ಸಾಮಾಜಿಕ‌ ಜಾಲತಾಣದಲ್ಲಿ ವೈರಲ್‌ ಆದ ಫೋಟೋ.
TV9 Web
| Edited By: |

Updated on:Aug 21, 2022 | 12:24 PM

Share

ಮಡಿಕೇರಿ: ನಾಟಿ ಕೋಳಿ ಸಾರು ತಿಂದು ದೇಗುಲಕ್ಕೆ ಸಿದ್ದರಾಮಯ್ಯ (Siddaramaiah) ಭೇಟಿ ನೀಡಿದ್ದಾರೆ ಎನ್ನಲಾಗುವ ಫೋಟೋ, ವಿಡಿಯೋ ಸಾಮಾಜಿಕ‌ ಜಾಲತಾಣದಲ್ಲಿ ವೈರಲ್‌ ಆಗಿವೆ. ಹಾಗಾಗಿ ಕೊಡಗಿನಲ್ಲಿ ಮತ್ತೊಂದು ವಿವಾದಕ್ಕೆ ಸಿದ್ದರಾಮಯ್ಯ ಸಿಲುಕಿದರಾ ಎನ್ನುವ ಅನುಮಾನಗಳು ಹುಟ್ಟಿಕೊಂಡಿವೆ. ಮಡಿಕೇರಿಯ ಅತಿಥಿ ಗೃಹದಲ್ಲಿ‌ ಮಧ್ಯಾಹ್ನ ಕೋಳಿ ಸಾರು‌ ಸವಿದಿದ್ದ ಸಿದ್ದರಾಮಯ್ಯ, ಮಧ್ಯಾಹ್ನದ ಬಳಿಕ ಕೊಡ್ಲಿಪೇಟೆಯ ಬಸವೇಶ್ವರ ದೇವಸ್ಥಾನಕ್ಕೆ‌ ಭೇಟಿ ನೀಡಿದ್ದಾರೆ ಎನ್ನಲಾಗುತ್ತಿದೆ. ಮಾಂಸ ತಿಂದು ದೇಗುಲಕ್ಕೆ ತೆರಳಿದ್ದಾರೆ ಎನ್ನಲಾದ ವಿಡಿಯೋ ಸದ್ಯ ವೈರಲ್ ಆಗುತ್ತಿದೆ.

ಇದನ್ನೂ ಓದಿ; ಹಿಂದೂಗಳ ಬಗ್ಗೆ ಸಿದ್ದರಾಮಯ್ಯ ಕೊಟ್ಟಿದ್ದ ಹೇಳಿಕೆಗಳಿಗೆ ಬೇಸತ್ತು ಮೊಟ್ಟೆ ಎಸೆದೆ: ಸಂಪತ್

ಸಿದ್ದರಾಮಯ್ಯ ತಪ್ಪು ಮಾಡಿದ್ದರೆ ಆ ದೇವರೇ ಶಿಕ್ಷೆ ಕೊಡುತ್ತಾನೆ: ಶಾಸಕ ಕೆ.ಜಿ.ಬೋಪಯ್ಯ 

ಈ ವಿಚಾರವಾಗಿ ಟಿವಿ9ಗೆ ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಪ್ರತಿಕ್ರಿಯೆ ನೀಡಿದ್ದು, ಹಿಂದೂ ಪದ್ಧತಿಯಲ್ಲಿ ಮಾಂಸ ತಿಂದು ದೇಗುಲಕ್ಕೆ ಹೋಗಲ್ಲ. ಮಾಂಸ ಸೇವಿಸಿ ಯಾರೂ ದೇವಸ್ಥಾನಕ್ಕೆ ಹೋಗುವುದಿಲ್ಲ. ಆದರೆ ಸಿದ್ದರಾಮಯ್ಯ ಮಾಂಸ ತಿಂದು ಹೋಗಿದ್ದರೆ ಖಂಡನೀಯ. ಸಿದ್ದರಾಮಯ್ಯ ತಪ್ಪು ಮಾಡಿದ್ದರೆ ಆ ದೇವರೇ ಶಿಕ್ಷೆ ಕೊಡುತ್ತಾನೆ. ಮಾಂಸ ಸೇವಿಸಿಲ್ಲ ಎನ್ನುವುದಾದರೆ ದೇವರೇ ನೋಡಿಕೊಳ್ಳುತ್ತಾನೆ ಎಂದು ಹೇಳಿದರು.

ಇದನ್ನೂ ಓದಿ: ಸಿದ್ಧರಾಮಯ್ಯ ಪ್ರತಿಯೊಂದು ಊರಲ್ಲಿ ಪಾಕಿಸ್ತಾನ ನಿರ್ಮಾಣ ಮಾಡುವ ಕನಸು ಕಾಣುತ್ತಿದ್ದಾರೆ: ಶಾಸಕ ಅಭಯ್ ಪಾಟೀಲ್

ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾದ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ: ನಗರದ ಕೆ.ವಿ.ಕ್ಯಾಂಪಸ್​​ ಬಳಿ ನಡೆಯುತ್ತಿರುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ. ದಸಂಸ, ಶೋಷಿತ ಸಮುದಾಯಗಳ ಅಭಿವೃದ್ಧಿ ಟ್ರಸ್ಟ್​ ಆಯೋಜನೆ ಮಾಡಿದ್ದು, ದಾಂಪತ್ಯ ಜೀವನಕ್ಕೆ ಕಾಲಿಟ್ಟ 42 ಜೋಡಿಗಳಿಗೆ ಶುಭ ಹಾರೈಸಿದರು. ಮಾಜಿ ಸಚಿವರಾದ ಡಾ.ಮಹದೇವಪ್ಪ, ಕೆ.ಆರ್.ರಮೇಶ್​ ಕುಮಾರ್, ಶಾಸಕ ಎನ್.ಹೆಚ್.ಶಿವಶಂಕರರೆಡ್ಡಿ, ನಿಡುಮಾಮಿಡಿ ಸ್ವಾಮೀಜಿ ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 12:14 pm, Sun, 21 August 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ