AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ವರ್ಷ ಎಸ್​ಎಸ್​ಎಲ್​ಸಿ ಪಾಸ್ ಆದ ಕೊಡಗಿನ ತಾಯಿ, ಮಗ!

ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಇಬ್ಬರಿಗೂ ಸಂತಸ ತಂದಿದ್ದು, ಇಬ್ಬರೂ ಉತ್ತಮ ಅಂಕ ಪಡೆದು ತೇರ್ಗಡೆಯಾಗಿದ್ದಾರೆ. ತಾಯಿ ಮತ್ತು ಮಗ ಇಬ್ಬರೂ ಒಂದೇ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿಡುವುದು ಹರ್ಷಕ್ಕೆ ಕಾರಣವಾಗಿದೆ.  

ಒಂದೇ ವರ್ಷ ಎಸ್​ಎಸ್​ಎಲ್​ಸಿ ಪಾಸ್ ಆದ ಕೊಡಗಿನ ತಾಯಿ, ಮಗ!
ಕುಸುಮಾವತಿ ಮತ್ತು ಅವರ ಮಗ ಗೌತಮ್
TV9 Web
| Updated By: guruganesh bhat

Updated on: Aug 10, 2021 | 5:52 PM

Share

ಮಡಿಕೇರಿ: ಎಸ್ಎಸ್ಎಲ್​ಸಿ ಫಲಿತಾಂಶ (SSLC Exam Results 2021)  ಈಗಾಗಲೇ ಘೋಷಣೆಯಾಗಿದೆ. ಈಬಾರಿಯೂ ಕೊವಿಡ್ ನಡುವೆಯೂ ಎದೆಗುಂದದೇ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದಾರೆ. ಈ ಬಾರಿಯ ಎಸ್ಎಸ್ಎಲ್​ಸಿ ಫಲಿತಾಂಶ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪಲು ಸಮೀಪದ ಕುಸುಮಾವತಿ ಚಂದ್ರಶೇಖರ್ ಮತ್ತು ಅವರ ಮಗ ಗೌತಮ್​ಗೆ ಎಲ್ಲರಿಗಿಂತ ಒಂದು ಗುಲಗಂಜಿ ಹೆಚ್ಚು ಖುಷಿಯನ್ನೇ ತಂದುಕೊಟ್ಟಿದೆ.

ಕುಸುಮಾವತಿ ಅವರಿಗೆ 18 ವರ್ಷಗಳ ಹಿಂದೆ, ಅಂದರೆ ಅವರು 9 ನೇ ತರಗತಿಯಲ್ಲಿ ಓದುತ್ತಿರುವಾಗ ವಿವಾಹವಾಗಿತ್ತು. ಹೀಗಾಗಿ ಅವರು ಆಗ ತಮ್ಮ ವಿದ್ಯಾಭ್ಯಾಸವನ್ನು 9ನೇ ತರಗತಿಗೆ ಮೊಟಕುಗೊಳಿಸಿಬಿಟ್ಟಿದ್ದರು. ಹಿಂದಿನ ವರ್ಷ ಅವರ ಮಗ ಗೌತಮ್ ಎಸ್ಎಸ್ಎಲ್​ಸಿ ಓದುತ್ತಿದ್ದ. ಆದರೆ ಹಿಂದಿನ ವರ್ಷದ ಎಸ್ಎಸ್ಎಲ್​ಸಿ ಪರೀಕ್ಷೆಯಲ್ಲಿ ಗಣಿತ ವಿಷಯದಲ್ಲಿ ಗೌತಮ್ ಅನುತ್ತೀರ್ಣನಾಗಿದ್ದ. ಹೀಗಾಗಿ ಈ ವರ್ಷ ಗಣಿತ ವಿಷಯವನ್ನು ಗೌತಮ್ ಮತ್ತೆ ಬರೆದಿದ್ದ. ಜತೆಗೆ ಗೌತಮ್ ತಾಯಿ ಕುಸುಮಾವತಿ ಅವರೂ ಎಸ್ಎಸ್ಎಲ್ಸಿಯ ಎಲ್ಲ 6 ವಿಷಯಗಳಿಗೂ ಈ ಬಾರಿ ಪರೀಕ್ಷೆ ಕಟ್ಟಿದ್ದರು. ಅವರೂ ತಮ್ಮ ಮಗ ಗೌತಮ್ ಜತೆ ಪರೀಕ್ಷೆ ಬರೆದಿದ್ದರು. ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಇಬ್ಬರಿಗೂ ಸಂತಸ ತಂದಿದ್ದು, ಇಬ್ಬರೂ ಉತ್ತಮ ಅಂಕ ಪಡೆದು ತೇರ್ಗಡೆಯಾಗಿದ್ದಾರೆ. ತಾಯಿ ಮತ್ತು ಮಗ ಇಬ್ಬರೂ ಒಂದೇ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿಡುವುದು ಹರ್ಷಕ್ಕೆ ಕಾರಣವಾಗಿದೆ.

ಹೀಗೆ ವಿದ್ಯಾಭ್ಯಾಸಕ್ಕೆ ವಯಸ್ಸು ಮುಖ್ಯವಲ್ಲ ಎಂದು ಸಾಬೀತುಪಡಿಸಿರುವ ಕೊಡಗಿನ ಕುಸುಮಾವತಿ ಚಂದ್ರಶೇಖರ್  ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಪ್ರಶಂಸೆ ವ್ಯಕ್ತವಾಗಿದೆ.

ಇದನ್ನೂ ಓದಿ:  ಕೊನೆ ಅರ್ಧ ಗಂಟೆ ಪರೀಕ್ಷೆ ಆಕ್ಸಿಜನ್ ಸಪೋರ್ಟ್ ಮೇಲಿದ್ದು ಬರೆದ ಈ ತಾಂಡಾ ಹುಡುಗಿ ಎಲ್ಲ 625 ಅಂಕ ಬಾಚಿಕೊಂಡಳು!

ಎಸ್​ಎಸ್​ಎಲ್​ಸಿ ಪರೀಕ್ಷೆ ಹಿಂದಿನ ದಿನವೇ ಕೊವಿಡ್ ಖಚಿತ; ಅಂಜದೇ ಅಳುಕದೇ ಪರೀಕ್ಷೆ ಬರೆದ ವಿದ್ಯಾರ್ಥಿ ಇಂದು ಸಾಧಕ

(SSLC Results 2021 Mother and son pass at 10th class the same time in Madikeri Kodagu )

ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!