Crime News: ಯುವತಿ ವಿಚಾರಕ್ಕೆ ವಿದ್ಯಾರ್ಥಿಗೆ ಚಾಕು ಇರಿತ, ಮೊಬೈಲ್ ಬಳಕೆ ಕಡಿಮೆ ಮಾಡಲು ಹೇಳಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

ಮೊಬೈಲ್‌ ಬಳಕೆ ಹೆಚ್ಚಾಗಿ ಮಾಡುತ್ತಿದ್ದಾನೆ ಅಂತ ಪೋಷಕರು ಮೊಬೈಲ್ ವಾಪಾಸ್ ಪಡೆದಿದ್ದರು. ಪ್ರತಿಷ್ಠಿತ ಸ್ಪರ್ಶ್ ಆಸ್ಪತ್ರೆಯ ಅರವಳಿಕೆ ತಜ್ಞರ ಪುತ್ರ ಆದಿತ್ಯ ಪಟೇಲ್ ಮೃತಪಟ್ಟಿದ್ದಾರೆ. ಹೆಬ್ಬಗೋಡಿ ಪೊಲೀಸರಿಂದ ಸ್ಥಳ ಪರಿಶೀಲನೆ ನಡೆಸಲಾಗಿದೆ.

Crime News: ಯುವತಿ ವಿಚಾರಕ್ಕೆ ವಿದ್ಯಾರ್ಥಿಗೆ ಚಾಕು ಇರಿತ, ಮೊಬೈಲ್ ಬಳಕೆ ಕಡಿಮೆ ಮಾಡಲು ಹೇಳಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ
ಸಾಂಕೇತಿಕ ಚಿತ್ರ
Follow us
| Updated By: ganapathi bhat

Updated on: Feb 08, 2022 | 4:24 PM

ಮಡಿಕೇರಿ: ಯುವತಿ ವಿಚಾರಕ್ಕೆ ಜಗಳವಾಗಿ ವಿದ್ಯಾರ್ಥಿಗೆ ಚಾಕು ಇರಿತವಾದ ಘಟನೆ ಕೊಡಗು ಜಿಲ್ಲೆ ಕುಶಾಲನಗರದ ಸರ್ಕಾರಿ ಕಾಲೇಜಿನಲ್ಲಿ ನಡೆದಿದೆ. ಸರ್ಕಾರಿ ಪ್ರಥಮ‌ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿ ಸಂದೀಪ್​​ಗೆ ಚಾಕು ಇರಿತವಾಗಿದೆ. ಪ್ರಥಮ ವರ್ಷದ ವಿದ್ಯಾರ್ಥಿಗಳಾದ ಧನುಷ್, ವಿಕಾಸ್​ನಿಂದ ಕೃತ್ಯ ನಡೆದಿದೆ ಎಂದು ಹೇಳಲಾಗಿದೆ. ಕುಶಾಲನಗರ ಟೌನ್ ಪೊಲೀಸ್​​​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಹುಬ್ಬಳ್ಳಿ: ಮನೆಯೊಂದರಲ್ಲಿ 1.50 ಲಕ್ಷ ನಗದು ಕಳವು

ನಗರದ ಅಶ್ವಮೇಧ ಪಾರ್ಕ್ ಪ್ರದೇಶದ ಮನೆಯೊಂದರಲ್ಲಿ 1.50 ಲಕ್ಷ ನಗದು ಕಳವು ಮಾಡಲಾಗಿದೆ. ಗಣಪತಿ ಎಂಬುವರ ಮನೆಯ ಬೀಗ ಮುರಿದು ಕೃತ್ಯ ಎಸಗಲಾಗಿದೆ. ಗಣಪತಿ ಧಾರವಾಡಕ್ಕೆ ಹೋಗಿ ವಾಪಸ್ ಬರುವುದರೊಳಗಾಗಿ ಕಳ್ಳರ ಕೈಚಳಕ ನಡೆದಿದೆ. ಇದಕ್ಕೂ ಮುನ್ನ ಗಣಪತಿ ಅವರ ಪಕ್ಕದ ಮನೆಯಲ್ಲಿಯೂ ಕಳ್ಳತನಕ್ಕೆ ಯತ್ನಿಸಲಾಗಿದೆ ಎಂದು ಹೇಳಲಾಗಿದೆ. ಏನೂ ಸಿಗದಿದ್ದರಿಂದ ಪಕ್ಕದ ಮನೆಯಲ್ಲಿ ಕಳ್ಳತನ ಮಾಡಲಾಗಿದೆ.

ಮೈಸೂರು: ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೈಸೂರಿನ ಯಾದವಗಿರಿ ಸೇತುವೆ ಬಳಿ ಘಟನೆ ನಡೆದಿದೆ. ಘಟನೆಯಲ್ಲಿ ವ್ಯಕ್ತಿಯ ರುಂಡ ಮುಂಡ ಬೇರ್ಪಟ್ಟಿದೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಮೃತನ ವಿವರ ಕಲೆ ಹಾಕುತ್ತಿದ್ದಾರೆ. ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಚಿಕ್ಕಮಗಳೂರು: ಅಡಿಕೆ ಕೊಯ್ಲು ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

ಮೂಡಿಗೆರೆ ತಾಲೂಕಿನ ಕಲ್ಲಕ್ಕಿ ಗ್ರಾಮದಲ್ಲಿ ಅಡಿಕೆ ಕೊಯ್ಲು ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿದ್ದರಿಂದ ಆಯತಪ್ಪಿ ಮರದಿಂದ ಬಿದ್ದು ನಾರಾಯಣ (42) ಎಂಬವರು ಸಾವನ್ನಪ್ಪಿದ್ದಾರೆ. ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಆನೇಕಲ್: ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನೇಕಲ್‌ ತಾಲೂಕಿನ‌‌ ಹೆಬ್ಬಗೋಡಿಯ ಕಮ್ಮಸಂದ್ರದಲ್ಲಿ ನಡೆದಿದೆ. SSLC ಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಆದಿತ್ಯಪಟೇಲ್ (15) ಮೃತಪಟ್ಟಿದ್ದಾರೆ. ಬೊಮ್ಮನಹಳ್ಳಿ ಬೇಗೂರಿನ ಟ್ರಿಮೀಸ್ ಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ನಾಲ್ಕು ಅಂತಸ್ತುಗಳ ಮಹಡಿಯಿಂದ ಮೇಲಿಂದ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಮೇಲಿಂದ ಬಿದ್ದ ಕಾರಣ ತಲೆ ಭಾಗ ಛಿದ್ರಗೊಂಡಿದೆ. ಮೊಬೈಲ್‌ ಬಳಕೆ ಹೆಚ್ಚಾಗಿ ಮಾಡುತ್ತಿದ್ದಾನೆ ಅಂತ ಪೋಷಕರು ಮೊಬೈಲ್ ವಾಪಾಸ್ ಪಡೆದಿದ್ದರು. ಪ್ರತಿಷ್ಠಿತ ಸ್ಪರ್ಶ್ ಆಸ್ಪತ್ರೆಯ ಅರವಳಿಕೆ ತಜ್ಞರ ಪುತ್ರ ಆದಿತ್ಯ ಪಟೇಲ್ ಮೃತಪಟ್ಟಿದ್ದಾರೆ. ಹೆಬ್ಬಗೋಡಿ ಪೊಲೀಸರಿಂದ ಸ್ಥಳ ಪರಿಶೀಲನೆ ನಡೆಸಲಾಗಿದೆ.

ಕಾರವಾರ: ಲಾರಿ ಓವರ್ ಟೆಕ್ ಮಾಡಲು ಹೋಗಿ ಒರ್ವ ಬೈಕ್ ಸವಾರ ಸಾವು

ಲಾರಿ ಓವರ್ ಟೆಕ್ ಮಾಡಲು ಹೋಗಿ ಒರ್ವ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಉತ್ತರ ಜಿಲ್ಲೆಯ ಮುಂಡಗೋಡ ತಾಲೂಕಿನ ಕೊಪ್ಪ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಇನ್ನೋರ್ವ ಗಂಭೀರ ಗಾಯಗೊಂಡಿದ್ದಾನೆ. ಲಾರಿ ಓವರ್ ಟೆಕ್ ಮಾಡಲು ಹೋಗಿ ಬೈಕ್ ಸ್ಕಿಡ್ ಆಗಿ ಲಾರಿ ಅಡಿ ಸಿಲುಕಿ ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬೈಕ್ ಸವಾರ ಷರೀಫ್ (25) ಲಾರಿ ಅಡಿ ಸಿಲುಕಿ ಸಾವನ್ನಪ್ಪಿದ್ದಾರೆ. ಇನ್ನೋರ್ವ ವಿಶ್ವನಾಥ ಸವಣೂರ (28) ಗಂಭೀರ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕೋಡಿ: ತಲವಾರ್ ಹಿಡಿದುಕೊಂಡು ಕಳ್ಳತನಕ್ಕೆ ಬಂದ ಖತರ್ನಾಕ್ ಗ್ಯಾಂಗ್

ತಲವಾರ್ ಹಿಡಿದುಕೊಂಡು ಕಳ್ಳತನಕ್ಕೆ ಬಂದ ಖತರ್ನಾಕ್ ಗ್ಯಾಂಗ್ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹತ್ತಕ್ಕೂ ಹೆಚ್ಚು ಮನೆಗಳಿಂದ ಲಕ್ಷಾಂತರ ಹಣ ದೊಚಿದ ಕಳ್ಳ ಖದೀಮರ ಗ್ಯಾಂಗ್, ತಲವಾರ್ ಹಿಡಿದುಕೊಂಡು ಓಡಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಕೃಷ್ಣಾ ಕಿತ್ತೂರ ಗ್ರಾಮದಲ್ಲಿ ನಸುಕಿನ ವೇಳೆ ನಡೆದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೃಷ್ಣಾ ಕಿತ್ತೂರ ಗ್ರಾಮದಲ್ಲಿ ಘಟನೆ ನಡೆದಿದೆ. ಸುಮಾರು ರಾತ್ರಿ ಒಂದು ಗಂಟೆ ಸುಮಾರಿಗೆ ನಡೆದ ಘಟನೆಯಲ್ಲಿ ಬಳಿಕ ಖದೀಮರು ಗ್ರಾಮಸ್ಥರನ್ನ ಕಂಡು ಪರಾರಿಯಾಗಿದ್ದಾರೆ. ವಿಷಯ ಗೊತ್ತಾಗುತ್ತಿದ್ದಂತೆ ಗ್ರಾಮಸ್ಥರು ಬೆನ್ನು ಹತ್ತಿದ್ದಾರೆ. ಆದರೆ, ಗ್ರಾಮಸ್ಥರ ಕೈಗೆ ಸಿಗದೆ ಕಬ್ಬಿನ ಗದ್ದೆಯಲ್ಲಿ ಪರಾರಿ ಆಗಿದ್ದಾರೆ. ಕಳ್ಳರ ಎರಡು ಬೈಕ ವಶಪಡಿಸಿಕೊಳ್ಳಲಾಗಿದೆ. ಹೆಚ್ಚುವರಿ ಪೋಲಿಸ್ ಉಪಾಧೀಕ್ಷಕರಾದ ಮಹಾನಿಂಗ್ ನಂದಗಾಂವಿ ಭೇಟಿ ನೀಡಿ ಡಾಗ್ ಸ್ಕಾಡ್ ಮೂಲಕ ಪರೀಶಿಲನೆ ನಡೆಸಿದ್ದಾರೆ. ಕಾಗವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Crime News: ಬೆಂಗಳೂರಿನಲ್ಲಿ ವರನಟ ಡಾ. ರಾಜ್​​ಕುಮಾರ್ ಪುತ್ಥಳಿ ಕಳವು; ಇಲ್ಲಿದೆ ಕ್ರೈಂ ಅಪ್ಡೇಟ್ಸ್

ಇದನ್ನೂ ಓದಿ: Crime News: ಎಂಥಾ ಕ್ರೌರ್ಯ: ಪ್ರಿಯಕರನ ಮದುವೆ ನಿಲ್ಲಿಸಲು ಬಾಲಕನ ಹತ್ಯೆಗೈದ ಪ್ರಿಯತಮೆ..!

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ