AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Talacauvery Theerthodbhava: ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ ಕಾವೇರಿ

ಕರ ಲಗ್ನದಲ್ಲಿ ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ ನೀಡಿದ್ದಾಳೆ. ಬ್ರಹ್ಮ ಕುಂಡಿಕೆ ಬಳಿ‌ ಭಕ್ತರ ಮಂತ್ರಘೋಷ ಮುಗಿಲು‌ ಮುಟ್ಟಿದೆ. ಸಹಸ್ರಾರು ಭಕ್ತರು ಕಾವೇರಿ ದರ್ಶನ ಮಾಡಿ ಪುನೀತರಾಗಿದ್ದಾರೆ.

Talacauvery Theerthodbhava: ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ ಕಾವೇರಿ
ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ ಕಾವೇರಿ
TV9 Web
| Edited By: |

Updated on:Oct 17, 2021 | 2:01 PM

Share

ಕೊಡಗು: ಜಿಲ್ಲೆಯ ಮಡಿಕೇರಿ ತಾಲೂಕಿನ ಪುಣ್ಯಕ್ಷೇತ್ರ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವವಾಗಿದೆ. ಮಕರ ಲಗ್ನದಲ್ಲಿ ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ ನೀಡಿದ್ದಾಳೆ. ಬ್ರಹ್ಮ ಕುಂಡಿಕೆ ಬಳಿ‌ ಭಕ್ತರ ಮಂತ್ರಘೋಷ ಮುಗಿಲು‌ ಮುಟ್ಟಿದೆ. ಸಹಸ್ರಾರು ಭಕ್ತರು ಕಾವೇರಿ ದರ್ಶನ ಮಾಡಿ ಪುನೀತರಾಗಿದ್ದಾರೆ. ತೀರ್ಥೋದ್ಭವವಾಗುತ್ತಿದ್ದಂತೆ ಅರ್ಚಕ ವೃಂದ ತಿರ್ಥ ಪ್ರೋಕ್ಷಣೆ ಮಾಡಿಕೊಂಡಿದ್ದಾರೆ.

ಹತ್ತಕ್ಕೂ ಅಧಿಕ‌ ಅರ್ಚಕರು ಬ್ರಹ್ಮ ಕುಂಡಿಕೆಗೆ ಮಹಾಪೂಜೆ ಸಲ್ಲಿಸಿದ್ದಾರೆ. ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಚಾಮರಾಜನಗರ, ತಮಿಳುನಾಡು, ಕೇರಳದಿಂದ ಸಹಸ್ರಾರು ಭಕ್ತರು ಆಗಮಿಸಿ ಜೀವನದಿ ಕಾವೇರಿ ತೀರ್ಥೋದ್ಭವ ಕಣ್ತುಂಬಿಕೊಂಡಿದ್ದಾರೆ.

ಅಗಸ್ತ್ಯ ಮುನಿಯ ಪತ್ನಿಯಾಗಿದ್ದ ಕಾವೇರಿ ಲೋಕಕಲ್ಯಾಣಕ್ಕಾಗಿ ನದಿಯಾಗಿ ಹರಿಯುತ್ತಿದ್ದಾಳೆ ಅನ್ನೋದು ಪ್ರತೀತಿ. ಇಂದು ಮಧ್ಯಾಹ್ನ ಮಕರ ಲಗ್ನದಲ್ಲಿ 1.12ಕ್ಕೆ ಕಾವೇರಿಯ ಉಗಮ ಸ್ಥಾನವಾದ ತಲಕಾವೇರಿಯಲ್ಲಿ ತೀರ್ಥರೂಪಿಣಿಯಾಗಿ ಕಾವೇರಿ ಹರಿದಿದ್ದಾಳೆ. ಈ ಬಾರಿ ಮಧ್ಯಾಹ್ನದ ವೇಳೆ ತೀರ್ಥೋದ್ಭವ ಆಗಿರೋದ್ರಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಕೊವಿಡ್-19 ಹಿನ್ನೆಲೆ ಈ ಬಾರಿ ಹಲವು ನಿರ್ಬಂಧಗಳನ್ನು ಹೇರಿದ್ದು ತೀರ್ಥೋದ್ಭವ ವೇಳೆ ಪುಣ್ಯಸ್ನಾನಕ್ಕೆ ಅವಕಾಶವಿಲ್ಲ. ಭಕ್ತರು ಯಾವುದೇ ಕಾರಣಕ್ಕೂ ಕಲ್ಯಾಣಿಗೆ ಇಳಿದು ಪುಣ್ಯ ಸ್ನಾನ ಮಾಡುವಂತಿಲ್ಲ. ಸದ್ಯ ಬ್ರಹ್ಮ‌ಕುಂಡಿಕೆ ಬಳಿ‌ ನೆರೆದಿದ್ದ ಭಕ್ತರಿಗೆ ತೀರ್ಥ ಪ್ರೋಕ್ಷಣೆ ಮಾಡಲಾಗಿದೆ.

ಕಾವೇರಿ ಮಾತೆ ಉದ್ಭವವಾಗುವ ಸಮಯ ಗೊತ್ತಾಗುವುದು ಹೇಗೆ? ಕಾವೇರಿ ಮಾತೆ ಇದೇ ಕ್ಷಣದಲ್ಲಿಯೇ ಉದ್ಭವವಾಗುತ್ತಾಳೆ ಅನ್ನೋದನ್ನ ಹೇಗೆ ಕಂಡು ಹಿಡಿಯಲಾಗುತ್ತೆ? ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ. ಸಾಮಾನ್ಯವಾಗಿ ನಮ್ಮ ಭಾರತದಲ್ಲಿ ಧಾರ್ಮಿಕವಾಗಿ ನಡೆಯುವ ಕಾರ್ಯಕ್ರಮಗಳ ಲೆಕ್ಕಾಚಾರವನ್ನ ಭಾರತೀಯ ಪಂಚಾಂಗದಲ್ಲಿರೋ ಜ್ಯೋತಿಷ್ಯ ಶಾಸ್ತ್ರ ಆಧರಿಸಿಯೇ ನಿರ್ಣಯಿಸುತ್ತಾರೆ. ಇಲ್ಲಿಯೂ ಕೂಡ ಕಾವೇರಿ ತೀರ್ಥೋಧ್ಭವದ ಸಮಯವನ್ನು ಜ್ಯೋತಿಷ್ಯ ಶಾಸ್ತ್ರದ ಪ್ರಕಾರವೇ ಲೆಕ್ಕಾಚಾರ ಹಾಕಲಾಗುತ್ತದೆ. ಸೂರ್ಯ ಕನ್ಯಾರಾಶಿಯಿಂದ ತುಲಾ ರಾಶಿಗೆ ಪ್ರವೇಶ ಮಾಡುವ ಆ ಘಳಿಗೆಯೇ ಕಾವೇರಿ ತೀರ್ಥೋದ್ಭವವಾಗುವ ಸಮಯ ಅಂತ ನಿಗಧಿ ಮಾಡಲಾಗುತ್ತದೆ. ತಲಕಾವೇರಿ ಮತ್ತು ಭಾಗಮಂಡಲ ದೇವಸ್ಥಾನದ ಪ್ರಮುಖ ಅರ್ಚಕರು ಸೇರಿ ಜ್ಯೋತಿಷ್ಯ ನೋಡಿ ಈ ಘಳಿಗೆಯನ್ನ ನಿರ್ಧಾರ ಮಾಡ್ತಾರೆ.

ಇದನ್ನೂ ಓದಿ: ನಾಳೆ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ; ಕೊರೊನಾ ಕಾರಣದಿಂದ ಹಲವು ನಿರ್ಬಂಧ: ಇಲ್ಲಿದೆ ವಿವರ

Published On - 1:31 pm, Sun, 17 October 21

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ