AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲಕಾವೇರಿ ಸನ್ನಿಧಿಯಲ್ಲಿ ಯುವತಿಯರ ಡಾನ್ಸ್; ವಿವಾದ ಸೃಷ್ಟಿಸಿದ ವಿಡಿಯೋ ಇಲ್ಲಿದೆ

ವಿಶೇಷವಾಗಿ ಕೊಡಗಿನ ಸಂಪ್ರದಾಯವಾದಿಗಳು ದೇವಸ್ಥಾನದ ಆವರಣದಲ್ಲಿ ಈ ರೀತಿ ನೃತ್ಯ ಮಾಡಿರುವುದು ಖಂಡನೀಯ ಅಂತ ಟೀಕಿಸಿದ್ದಾರೆ. ಪ್ರವಾಸಿಗರಿಂದ ಧಾರ್ಮಿಕ ಸ್ಥಳದ ಪಾವಿತ್ರ್ಯತೆಗೆ ಧಕ್ಕೆ ಬರುತ್ತಿದೆ ಅಂತ ಕುಟುಕಿದ್ದಾರೆ.

ತಲಕಾವೇರಿ ಸನ್ನಿಧಿಯಲ್ಲಿ ಯುವತಿಯರ ಡಾನ್ಸ್; ವಿವಾದ ಸೃಷ್ಟಿಸಿದ ವಿಡಿಯೋ ಇಲ್ಲಿದೆ
ಯುವತಿಯರು ಡ್ಯಾನ್ಸ್ ಮಾಡಿದ ವಿಡಿಯೋ ವಿವಾದಕ್ಕೆ ಕಾರಣವಾಗಿದೆ
TV9 Web
| Edited By: |

Updated on:Dec 01, 2021 | 1:28 PM

Share

ಮಡಿಕೇರಿ: ಜೀವನದಿ ಕಾವೇರಿಯ ಉಗಮ ಸ್ಥಾನ ಕೊಡಗಿನ ತಲಕಾವೇರಿಯಲ್ಲಿ ಮೂವರು ಯುವತಿಯರು ಡಾನ್ಸ್ ಮಾಡಿರುವ ದೃಷ್ಯವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವಿವಾದ ಸೃಷ್ಟಿಸಿದೆ. ಮೂವರು ಯುವತಿಯರು ತಲಕಾವೇರಿಯ ಮುಖ್ಯ ದ್ವಾರದ ಬಳಿ ಮಂಜು ಮುಸುಕಿದ ವಾತಾವರಣದಲ್ಲಿ ಕೆಲ ಸೆಕೆಂಡ್​ಗಳ ಕಾಲ ಡಾನ್ಸ್ ಮಾಡಿದ್ದಾರೆ. ನೃತ್ಯದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಆದರೆ ಈ ಡಾನ್ಸ್​ಗೆ ನೆಟ್ಟಿಗರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ವಿಶೇಷವಾಗಿ ಕೊಡಗಿನ ಸಂಪ್ರದಾಯವಾದಿಗಳು ದೇವಸ್ಥಾನದ ಆವರಣದಲ್ಲಿ ಈ ರೀತಿ ನೃತ್ಯ ಮಾಡಿರುವುದು ಖಂಡನೀಯ ಅಂತ ಟೀಕಿಸಿದ್ದಾರೆ. ಪ್ರವಾಸಿಗರಿಂದ ಧಾರ್ಮಿಕ ಸ್ಥಳದ ಪಾವಿತ್ರ್ಯತೆಗೆ ಧಕ್ಕೆ ಬರುತ್ತಿದೆ ಅಂತ ಕುಟುಕಿದ್ದಾರೆ. ಯಾವಾಗ ತಮ್ಮ ಡಾನ್ಸ್ ವಿಡಿಯೋ ಟೀಕೆಗೆ ಗುರಿಯಾಯಿತೋ ಯುವತಿಯರು ತಮ್ಮ ಇನ್​​ಸ್ಟಾಗ್ರಾಮ್​ನಲ್ಲಿ ಡಿಲೀಟ್ ಮಾಡಿದ್ದಾರೆ. ಜೊತೆಗೆ ಮೂವರು ಪ್ರತ್ಯೇಕವಾಗಿ ಕ್ಷಮೆಯಾಚಿಸಿದ್ದಾರೆ.

ನಾವು ದೇವಾಲಯದ ಮುಂದೆ ನೃತ್ಯ ಮಾಡಿದಕ್ಕೆ ಕೊಡವ ಜನರಿಗೆ ನೋವಾಗಿದೆ. ಕೊಡಗಿನ ಮಂದಿಯ ಭಾವನೆಗೆ ಧಕ್ಕೆ ತರುವ ಉದ್ದೇಶ ತಮ್ಮದಾಗಿರಲಿಲ್ಲ. ನಿಮ್ಮ ಮನೆ ಮಕ್ಕಳು ಅಂಥ ಅಂದುಕೊಂಡು ದಯವಿಟ್ಟು ಕ್ಷಮಿಸಿ ಅಂತ ಕೈ ಮುಗಿದು ಕೇಳಿಕೊಂಡಿದ್ದಾರೆ.

ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸುವುದಿಲ್ಲ ಅಂತ ಭರವಸೆ ನೀಡಿದ್ದಾರೆ. ಯುವ ಜನತೆ ಇತ್ತೀಚೆಗೆ ಇನ್​​ಸ್ಟಾಗ್ರಾಮ್​ನಲ್ಲಿ ರೀಲ್ಸ್ ಮಾಡುತ್ತಿದ್ದಾರೆ. ಕೆಲವೊಂದು ವಿಡಿಯೋ ಟ್ರೆಂಡ್ ಸೃಷ್ಟಿಸುತ್ತಿರುತ್ತದೆ. ಆದರೆ ಈ ವಿಡಿಯೋ ಸದ್ಯ ವಿವಾದಕ್ಕೆ ಕಾರಣವಾಗಿದೆ.

ಇದನ್ನೂ ಓದಿ

ಪ್ಲಾಸ್ಟಿಕ್ ಬಾಟಲ್​ನಲ್ಲಿ ನೀರು ಕುಡಿಯುವ ಅಭ್ಯಾಸ ಇದೆಯೇ; ಅಡ್ಡಪರಿಣಾಮಗಳ ಬಗ್ಗೆ ಇರಲಿ ಎಚ್ಚರ

ಕಾವೇರಿದ ಪರಿಷತ್ ಚುನಾವಣೆ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಮ್ಮುಖದಲ್ಲಿ ಶಾಸಕರ ಮಧ್ಯೆ ಗಲಾಟೆ

Published On - 1:25 pm, Wed, 1 December 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್