AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಸಾವು, ಕೊಡಗು ಜಿಲ್ಲೆಯ ಹಲವು ಶಾಲೆಗಳಿಗೆ ಇಂದು ರಜೆ ಘೋಷಣೆ

Elephant Attack Death: ಮಡಿಕೇರಿ ತಾಲೂಕಿನ ಅರೆಕಾಡು ಗ್ರಾಮದಲ್ಲಿ ನಿನ್ನೆ ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಕಟ್ಟೆಮಾಡು ದೇವಪ್ಪ ಬಲಿಯಾಗಿದ್ದರು. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಸಾವು, ಕೊಡಗು ಜಿಲ್ಲೆಯ ಹಲವು ಶಾಲೆಗಳಿಗೆ ಇಂದು ರಜೆ ಘೋಷಣೆ
ಟ್ರ್ಯಾಕ್ಟರ್
ಗೋಪಾಲ್​ ಸೋಮಯ್ಯ
| Edited By: ಆಯೇಷಾ ಬಾನು|

Updated on:Aug 14, 2023 | 7:50 AM

Share

ಕೊಡಗು, ಆ.14: ಆನೆ ದಾಳಿಗೆ(Elephant Attack) ಟ್ರ್ಯಾಕ್ಟರ್ ಚಾಲಕ ಕಟ್ಟೆಮಾಡು ದೇವಪ್ಪ ಅವರು ಬಲಿಯಾಗಿದ್ದಾರೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೊಡಗು(Kodagu) ಜಿಲ್ಲೆಯ ಹಲವು ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಸೋಮವಾರಪೇಟೆ ತಾಲೂಕಿನ ನೆಲ್ಲಿಹುದಿಕೇರಿ, ಅಭ್ಯತ್​ ಮಂಗಲ, ಮಡಿಕೇರಿ ತಾಲೂಕಿನ ಹೊಸ್ಕೇರಿ, ಮುರಗೋಡ, ಕಟ್ಟೆಮಾಡು, ಅರೆಕಾಡು, ಗುಯ್ಯ, ಸಿದ್ದಾಪುರದ ಶಾಲೆಗಳಿಗೆ ಇಂದು ರಜೆ ಘೋಷಿಸಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.

ಮಡಿಕೇರಿ ತಾಲೂಕಿನ ಅರೆಕಾಡು ಗ್ರಾಮದಲ್ಲಿ ನಿನ್ನೆ ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಕಟ್ಟೆಮಾಡು ದೇವಪ್ಪ ಬಲಿಯಾಗಿದ್ದರು. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಮಧ್ಯಾಹ್ನದ ವೇಳೆ ದೇವಪ್ಪ ಕೆಲಸದ ಮೇಲೆ ಟ್ರ್ಯಾಕ್ಟರ್ ಚಾಲನೆ ಮಾಡಿಕೊಂಡು ಅರೆಕಾಡು ಗ್ರಾಮದ ಬಳಿ ತೆರಳಿದ್ದರು. ಈ ವೇಳೆ ಕಾಡಾನೆಯೊಂದು ದಾಳಿ ನಡೆಸಿದ್ದು ದೇವಪ್ಪ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಇನ್ನು ಈ ಘಟನೆ ನಡೆಯುವ ಮುನ್ನ ಅರಣ್ಯ ಇಲಾಖೆ ಸಿಬ್ಬಂದಿ ಕಾಫಿ ತೋಟಕ್ಕೆ ಬಂದಿದ್ದ ಕಾಡಾನೆಗಳ ಹಿಂಡನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ನಡೆಸಿದ್ದರು. ಹೀಗಾಗಿ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆರೋಪ ಮಾಡಿದ್ದಾರೆ. ಜನರಿಗೆ ಯಾವುದೇ ಮಾಹಿತಿ ನೀಡದೆ ಕಾರ್ಯಾಚರಣೆ ನಡೆಸಿದ್ದಾರೆ. ಇದರಿಂದಾಗಿ ಟ್ರ್ಯಾಕ್ಟರ್ ಚಾಲಕನ ಮೇಲೆ ಕಾಡಾನೆ ದಾಳಿ ನಡೆಸಿದೆ ಎಂದು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದರು. ಸದ್ಯ ಈಗ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯ ಹಲವು ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Elephant Census: ಆನೆಗಳಿಗೂ ಬಂಡೀಪುರ ಅಂದ್ರೆ ಪಂಚಪ್ರಾಣ!

ಬಹು ಅಂಗಾಂಗ ವೈಫಲ್ಯದಿಂದ ಆನೆ ಸಾವು

ನಾಗರಹೊಳೆ ಅರಣ್ಯ ಪ್ರದೇಶದ ಆನೆಚೌಕೂರಿನ ಮತ್ತಿಗೋಡು ಸಾಕಾನೆ ಶಿಬಿರದಲ್ಲಿ ಪಳಗಿಸಲಾಗುತ್ತಿದ್ದ 50 ವರ್ಷದ ಸುಬ್ರಹ್ಮಣ್ಯ ಎಂಬ ಆನೆ ಮೃತಪಟ್ಟಿದೆ. ಪಶು ವೈದ್ಯಾಧಿಕಾರಿಗಳು ಅಗತ್ಯ ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದೆ. ಆರ್ಥ್ರೈಟಿಸ್ ನಿಂದ ಬಳಲುತ್ತಿದ್ದ ಸುಬ್ರಹ್ಮಣ್ಯ ಸೋಂಕಿನಿಂದ ಮೃತಪಟ್ಟಿದೆ ಎಂದು ಮರಣೋತ್ತರ ಪರೀಕ್ಷೆ ವೇಳೆ ಮಾಹಿತಿ ಸಿಕ್ಕಿದೆ.

ಆನೆಯು ಬಹು ಅಂಗಾಂಗ ವೈಫಲ್ಯ ಕಾಯಿಲೆ (ಆರ್ಥ್ರೈಟಿಸ್)ಯಿಂದ ಸೆಪ್ಟಿಸೀಮಿಯಾ (ಇನ್‌ಫೆಕ್ಷನ್)ನಿಂದ ಬಳಲಿ ಮೃತಪಟ್ಟಿರುವುದಾಗಿ ಪಶುವೈದ್ಯರ ತಂಡ ಮಾಹಿತಿ ನೀಡಿದೆ. ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ಆನೆಯ ಶವವನ್ನು ಮಣ್ಣಲ್ಲಿ ಹೂತಿರುವುದಾಗಿ ಡಿಸಿಎಫ್ ತಿಳಿಸಿದರು.

ಕೊಡಗು ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:26 am, Mon, 14 August 23

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ