ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಮೂವರು ಸಾವು
ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆನೆಕಾಡು ಬಳಿ ಪಿಕ್ಅಪ್ ಜೀಪ್, ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟು, ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ. ಅಪಘಾತಕ್ಕೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ.

ಮಡಿಕೇರಿ, ಸೆಪ್ಟೆಂಬರ್ 20: ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ. ಕುಶಾಲನಗರ ತಾಲೂಕಿನ ಆನೆಕಾಡು ಬಳಿ ಪಿಕ್ಅಪ್ ಜೀಪ್, ಕಾರು ಮತ್ತು ಬೈಕ್ ಮಧ್ಯೆ ಸರಣಿ ಅಪಘಾತ ನಡೆದಿದ್ದು, ಮೃತರನ್ನು ಬೈಕ್ ಚಾಲಕ ಕುಮಾರ, ಕಾರು ಚಾಲಕ ರತನ್ ಮತ್ತು ಸಹ ಪ್ರಯಾಣಿಕ ಆದರ್ಶ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಕುಶಾಲನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: 5 ತಿಂಗಳ ಬಳಿಕ ಪ್ರವಾಸಿಗರಿಗೆ ಓಪನ್ ಆಯ್ತು ಹಾರಂಗಿ, ಮತ್ತಿಗೋಡು ಆನೆ ಶಿಬಿರ: ಕಟ್ಟುನಿಟ್ಟಿನ ರೂಲ್ಸ್ ಜಾರಿ!
ಅಪಘಾತದ ತೀವ್ರತೆಗೆ ಗಾಯಾಳುಗಳು ರಸ್ತೆಯಲ್ಲಿ ಬಿದ್ದು ನರಳಾಡಿದ್ದು, ಕೂಡಲೇ ಸ್ಥಳೀಯರು ಅವರ ನೆರವಿಗೆ ಧಾವಿಸಿ ಮಾನವೀಯತೆ ಮೆರೆದಿದ್ದಾರೆ. ಅಪಘಾತದಲ್ಲಿ ಒಟ್ಟು 7 ಮಂದಿಗೆ ಗಾಯಗಳಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸುವಿನ್, ಚಂದ್ರಶೇಖರ್, ಆದರ್ಶ್ ಮತ್ತು ಅಜಯ್ ತೀವ್ರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 11:27 pm, Sun, 20 September 26




