AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನಲ್ಲಿ ಮುಂದುವರಿದ ವರುಣಾರ್ಭಟ; ದುಬಾರೆ ಪ್ರವಾಸಿ ತಾಣಕ್ಕೆ ಎಂಟ್ರಿ ಬಂದ್

ಕೊಡಗು ಜಿಲ್ಲಾದ್ಯಂತ ವರುಣಾರ್ಭಟ ಮುಂದುವರೆದಿದ್ದು, ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಈ ಹಿನ್ನೆಲೆ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ಬಳಿ ಇರುವ ದುಬಾರೆ ಪ್ರವಾಸಿ ತಾಣಕ್ಕೆ ಅರಣ್ಯ ಇಲಾಖೆ ನಿಷೇಧ ಹೇರಿದೆ. ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಈ ಕ್ರಮಕೈಗೊಳ್ಳಲಾಗಿದೆ.

ಕೊಡಗಿನಲ್ಲಿ ಮುಂದುವರಿದ ವರುಣಾರ್ಭಟ; ದುಬಾರೆ ಪ್ರವಾಸಿ ತಾಣಕ್ಕೆ ಎಂಟ್ರಿ ಬಂದ್
ದುಬಾರೆ ಪ್ರವಾಸಿ ತಾಣಕ್ಕೆ ಎಂಟ್ರಿ ಬಂದ್
Gopal AS
| Edited By: |

Updated on: Jun 27, 2024 | 3:59 PM

Share

ಕೊಡಗು, ಜೂ.27: ಮಳೆಗಾಲ ಶುರುವಾಗುತ್ತಲೇ ಜಿಲ್ಲೆಯ ಜನರಲ್ಲಿ ಆತಂಕ ಶುರುವಾಗಿದೆ. ಹೌದು, ಮಡಿಕೇರಿ(Madikeri) ನಗರದ ಹೃದಯ ಭಾಗದಲ್ಲಿಯೇ ಮುಖ್ಯ ರಸ್ತೆಯೊಂದು ಕುಸಿಯುತ್ತಿದೆ. ಇತ್ತ ಮುಂದುವರೆದ ಮಳೆ(Rain)ಯ ಆರ್ಭಟಕ್ಕೆ ಕಾವೇರಿ ನದಿ ಪ್ರವಾಹ ಹಿನ್ನೆಲೆ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ಬಳಿ ಇರುವ ದುಬಾರೆ ಪ್ರವಾಸಿ ತಾಣಕ್ಕೆ ಅರಣ್ಯ ಇಲಾಖೆ ನಿಷೇಧ ಹೇರಿದೆ. ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಈ ಕ್ರಮಕೈಗೊಳ್ಳಲಾಗಿದೆ.

ಭಾಗಮಂಡಲ ತ್ರಿವೇಣಿ ಸಂಗಮ‌ಜಲಾವೃತ

ಕೊಡಗಿನಾದ್ಯಂದ ಭಾರೀ ವರ್ಷ ಧಾರೆ ಹಿನ್ನೆಲೆ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ಮಡಿಕೇರಿ ತಾಲೂಕಿನ ಭಾಗಮಂಡಲ ತ್ರಿವೇಣಿ ಸಂಗಮ‌ ಸಂಪೂರ್ಣ ಜಲಾವೃತವಾಗಿದ್ದು, ಪ್ರವಾಹದಲ್ಲಿ‌ ಸ್ನಾನ ಘಟ್ಟ ಮುಳುಗಡೆಯಾಗಿದೆ. ಇದರಿಂದ ಸ್ನಾನಘಟ್ಟದಲ್ಲಿ ಪವಿತ್ರ ಸ್ನಾನ ಮಾಡಲಾಗದೆ ಭಕ್ತರು ಪರದಾಟ ನಡೆಸಿದ್ದಾರೆ. ಜೊತೆಗೆ ಭಾಗಮಂಡಲ – ನಾಪೋಕ್ಲು ರಸ್ತೆ ಜಲಾವೃತವಾದರೂ ಮೇಲ್ಸೇತುವೆ ಇರುವುದರಿಂದ‌ ವಾಹನ ಸಂಚಾರಕ್ಕೆ ಯಾವುದೇ ತೊಂದರೆಯಿಲ್ಲ.

ಇದನ್ನೂ ಓದಿ:ಮಳೆ..ಮಳೆ..ಕರಾವಳಿ ಭಾಗಕ್ಕೆ ರೆಡ್​, ಮಲೆನಾಡಿಗೆ ಆರೆಂಜ್ ಅಲರ್ಟ್: ಬೆಂಗಳೂರಿನಲ್ಲಿ ವಾತಾವರಣ ಬದಲಾವಣೆ

ಇನ್ನು ಭಾರಿ ಮಳೆಗೆ ಮಡಿಕೇರಿಯ ತ್ಯಾಗರಾಜ ಕಾಲೋನಿಯಲ್ಲಿ ಮೂರು ಮನೆಗಳಿಗೆ ಹಾನಿಯಾಗಿದ್ದು, ಮಳೆಯಿಂದ ಮನೆಯ ತಡೆಗೋಡೆ ಸಂಪೂರ್ಣ ಕುಸಿತವಾಗಿದೆ. ಇತ್ತ ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಮಳೆ ಹೀಗೆ ಮುಂದುವರೆದರೆ ನಾಳೆಯ ವೇಳೆಗೆ ಸಂಗಮ ಜಲಾವೃತವಾಗುವ ಸಾಧ್ಯತೆಯಿದೆ. ಹಾಗೆಯೇ ಮಡಿಕೇರಿ ತಾಲ್ಲೂಕಿನ ಮೂರ್ನಾಡು ಗ್ರಾಮದ ಬಲಮುರಿಯಲ್ಲಿ ಹಳೆಯ ಸೇತುವೆ ಮುಳಗಡೆಯಾಗಿದೆ. ಸಂಚಾರಕ್ಕೆ ಹೊಸ ಸೇತುವೆ ಇರುವುದರಿಂದ ಸದ್ಯ ಜನರಿಗೆ ಯಾವುದೇ ಅಪಾಯವಿಲ್ಲ. ಇನ್ನು ಜಿಲ್ಲಾಡಳಿತ ನದಿ ತೀರದ ನಿವಾಸಿಗಳಿಗೆ ಎಚ್ಚರಿಕೆಯಿಂದ ಇರುವಂತೆ ಮುನ್ನೆಚ್ಚರಿಕೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Gopal AS
Gopal AS
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!