AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಜಪೇಟೆ: ಹುಲಿ ದಾಳಿಗೆ ವಿದೇಶಿ ನಾಯಿಗಳು ಬಲಿ, ಕಾಫಿ ತೋಟದಲ್ಲಿ ಕಾಡಾನೆ ಕಳೇಬರ ಪತ್ತೆ

ಹೊಸಕೋಟೆ ಗ್ರಾಮ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಹತ್ತಾರು ಸಂಖ್ಯೆಯಲ್ಲಿ ಕಾಡಾನೆಗಳು ಬೀಡು ಬಿಟ್ಟಿದ್ದು, ಇವುಗಳ ಕಾಟದಿಂದ ಗ್ರಾಮಸ್ಥರು ಹೈರಾಣಾಗಿದ್ದಾರೆ. ಇವುಗಳನ್ನು ಸೆರೆ ಹಿಡಿದು ನೆಮ್ಮದಿ ನೀಡುವಂತೆ ಗ್ರಾಮಸ್ಥ ರಾಹುಲ್ ಆಗ್ರಹಿಸಿದ್ದಾರೆ.

ವಿರಾಜಪೇಟೆ: ಹುಲಿ ದಾಳಿಗೆ ವಿದೇಶಿ ನಾಯಿಗಳು ಬಲಿ, ಕಾಫಿ ತೋಟದಲ್ಲಿ ಕಾಡಾನೆ ಕಳೇಬರ ಪತ್ತೆ
ಕಾಫಿ ತೋಟದಲ್ಲಿ ಕಾಡಾನೆ ಕಳೇಬರ ಪತ್ತೆ
Gopal AS
| Edited By: |

Updated on: May 25, 2024 | 5:16 PM

Share

ವಿರಾಜಪೇಟೆ, ಮೇ 25: ಕೊಡಗು (Kodagu) ಜಿಲ್ಲೆಯಲ್ಲಿ ವನ್ಯ ಮೃಗಗಳ ಹಾವಳಿ ಮಿತಿ ಮೀರಿದೆ. ಕಾಡು ಪ್ರಾಣಿಯ ದಾಳಿಗೆ ಎರಡು ವಿದೇಶೀ ತಳಿಯ ಶ್ವಾನಗಳು ಬಲಿಯಾಗಿವೆ. ವಿರಾಜಪೇಟೆ (Virajapet) ತಾಲ್ಲೂಕಿನ ಕುಟ್ಟಂದಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಕೆಕೆ ಗ್ರೂಪ್ ಆಫ್ ಎಸ್ಟೇಟ್​​ಗೆ (KK Group of Estate) ಸೇರಿದ ಎರಡು ನಾಯಿಗಳು ಸಾವನ್ನಪ್ಪಿವೆ. ಇವು ಸೈಬೀರಿಯನ್ ಹಸ್ಕಿ ಹಾಗೂ ಪಿಟ್ ಬುಲ್ ತಳಿಯ ನಾಯಿಗಳಾಗಿವೆ. ಎಸ್ಟೇಟ್ ಸಮೀಪ ಹುಲಿಯ ಹೆಜ್ಜೆಗಳು ಪತ್ತೆಯಾಗಿದ್ದು ಬಹುಶಃ ವ್ಯಾಘ್ರ ದಾಳಿಯಿಂದಲೇ ಈ ಶ್ವಾನಗಳು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.

ಕಾಫಿ ತೋಟದಲ್ಲಿ ಕಾಡಾನೆ ಕಳೇಬರ ಪತ್ತೆ

ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ ಸಮೀಪದ ಹೊಸ ಕೋಟೆ ಗ್ರಾಮದ ಕಾಫಿ ತೋಟವೊಂದರಲ್ಲಿ ಕಾಡಾನೆ ಕಳೇಬರ ಪತ್ತೆಯಾಗಿದೆ. ಅಂದಾಜು 20 ವರ್ಷ ಪ್ರಾಯದ ಮಕಾನ್ ಆನೆ ಇದಾಗಿದ್ದು ಸಾವಿಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಹಿರಿಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ.

ಇದನ್ನೂ ಓದಿ: 70 ವರ್ಷಗಳಲ್ಲಿ ಮೊದಲ ಬಾರಿಗೆ ಬತ್ತಿ ಹೋಗಿದ್ದ ಕಾವೇರಿ ನದಿ ಮತ್ತೆ ಗತವೈಭವಕ್ಕೆ ಮರಳುತ್ತಿದೆ! ಇಲ್ಲಿದೆ ಚಿತ್ರಣ

ಹೊಸಕೋಟೆ ಗ್ರಾಮ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಹತ್ತಾರು ಸಂಖ್ಯೆಯಲ್ಲಿ ಕಾಡಾನೆಗಳು ಬೀಡು ಬಿಟ್ಟಿದ್ದು, ಇವುಗಳ ಕಾಟದಿಂದ ಗ್ರಾಮಸ್ಥರು ಹೈರಾಣಾಗಿದ್ದಾರೆ. ಇವುಗಳನ್ನು ಸೆರೆ ಹಿಡಿದು ನೆಮ್ಮದಿ ನೀಡುವಂತೆ ಗ್ರಾಮಸ್ಥ ರಾಹುಲ್ ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ