AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಪಾತದಲ್ಲಿ ದುರ್ಮರಣಕ್ಕೀಡಾದ ಕೊಡಗಿನ ಯೋಧ ಅಲ್ತಾಫ್ ಪ್ರೇಮಿಗಳ ದಿನ‌, ಹಿಜಾಬ್​ ಬಗ್ಗೆ ಏನು ಹೇಳಿದ್ದರು? Viral Audio

Virajpet Soldier Althaf Ahmed Martyred: ಕೆಲ ವರ್ಷಗಳ ಹಿಂದೆ ಸೇನೆಯಿಂದ‌ ನಿವೃತ್ತಿಯಾಗಿದ್ದ ಅಲ್ತಾಫ್ ಮತ್ತೆ ದೇಶ ಸೇವೆಯ ಹಂಬಲದಲ್ಲಿ ಸೇನೆ ಸೇರಿದ್ದರು. ದೇಶ ಸೇವೆಯ ಹಂಬಲ ಅವರನ್ನು ಈ ಬಾರಿ ದೂರ ತೀರಕೆ ಕರೆದೊಯ್ದಿದೆ. ಯೋಧ ಅಲ್ತಾಫ್ ಬುಧವಾರ ಬೆಳಗ್ಗೆ 8.30ಕ್ಕೆ ವಿಡಿಯೋ ಕಾಲ್ ಮಾಡಿದ್ದರು. ಜಮ್ಮುವಿನಲ್ಲಿ ವಿಪರೀತ ಹಿಮಪಾತದ ಬಗ್ಗೆ ಹೇಳಿಕೊಂಡಿದ್ದರು. ಕುಟುಂಬದೊಂದಿಗೆ ಮಾತಾಡುತ್ತಲೇ ...

ಹಿಮಪಾತದಲ್ಲಿ ದುರ್ಮರಣಕ್ಕೀಡಾದ ಕೊಡಗಿನ ಯೋಧ ಅಲ್ತಾಫ್ ಪ್ರೇಮಿಗಳ ದಿನ‌, ಹಿಜಾಬ್​ ಬಗ್ಗೆ ಏನು ಹೇಳಿದ್ದರು? Viral Audio
ಹಿಮಪಾತದಲ್ಲಿ ದುರ್ಮರಣಕ್ಕೀಡಾದ ಕೊಡಗಿನ ಯೋಧ ಅಲ್ತಾಫ್ ಪ್ರೇಮಿಗಳ ದಿನ‌, ಹಿಜಾಬ್​ ಬಗ್ಗೆ ಏನು ಹೇಳಿದ್ದರು?
TV9 Web
| Edited By: ಸಾಧು ಶ್ರೀನಾಥ್​|

Updated on:Feb 24, 2022 | 1:07 PM

Share

ವಿರಾಜಪೇಟೆ (ಕೊಡಗು): ಶ್ರೀನಗರದಲ್ಲಿ ಕೊಡಗಿನ ಯೋಧ ಹುತಾತ್ಮ‌ರಾದ ಹಿನ್ನೆಲೆ ಯೋಧನ ವಿರಾಜಪೇಟೆ ಮನೆಯಲ್ಲಿ ಶೋಕ ಮಡುಗಟ್ಟಿದೆ. ಯೋಧ ಅಲ್ತಾಫ್ ನಿನ್ನೆ ಹಿಮಪಾತದಲ್ಲಿ ದುರ್ಮರಣಕ್ಕೀಡಾಗಿದ್ದಾರೆ. ಅಪ್ರತಿಮ ದೇಶ ಭಕ್ತರಾಗಿದ್ದ ಅಲ್ತಾಫ್ ಅಹಮ್ಮದ್ 19 ವರ್ಷದಿಂದ ದೇಶ ಸೇವೆ ಮಾಡುತ್ತಿದ್ದರು. ಪತ್ನಿ ಮತ್ತು ತಾಯಿಯೊಂದಿಗೆ ಕಾನ್ಫರೆನ್ಸ್ ವಿಡಿಯೋಕಾಲ್ ನಲ್ಲಿದ್ದಾಗಲೇ ಕರೆ ಕಟ್ ಆಗಿ ಸಾವನ್ನಪ್ಪಿದ್ದಾರೆ (Virajpet Soldier Althaf Ahmed Martyred).

ನಿವೃತ್ತಿಯಾಗಿದ್ದರೂ ಮತ್ತೆ ದೇಶ ಸೇವೆಗೆ ಅರ್ಪಿಸಿಕೊಂಡರು… ಕೆಲ ವರ್ಷಗಳ ಹಿಂದೆ ಸೇನೆಯಿಂದ‌ ನಿವೃತ್ತಿಯಾಗಿದ್ದ ಅಲ್ತಾಫ್ ಮತ್ತೆ ದೇಶ ಸೇವೆಯ ಹಂಬಲದಲ್ಲಿ ಸೇನೆ ಸೇರಿದ್ದರು. ದೇಶ ಸೇವೆಯ ಹಂಬಲ ಅವರನ್ನು ಈ ಬಾರಿ ದೂರ ತೀರಕೆ ಕರೆದೊಯ್ದಿದೆ. ಯೋಧ ಅಲ್ತಾಫ್ ಬುಧವಾರ ಬೆಳಗ್ಗೆ 8.30ಕ್ಕೆ ವಿಡಿಯೋ ಕಾಲ್ ಮಾಡಿದ್ದರು. ಜಮ್ಮುವಿನಲ್ಲಿ ವಿಪರೀತ ಹಿಮಪಾತದ ಬಗ್ಗೆ ಹೇಳಿಕೊಂಡಿದ್ದರು. ಕುಟುಂಬದೊಂದಿಗೆ ಮಾತಾಡುತ್ತಲೇ ಹಿಮಪಾತವಾಗಿ ಅವರ ಸಾವು ಸಂಭವಿಸಿದೆ. ನಾಳೆ ವಿರಾಜಪೇಟೆಗೆ ವೀರ ಯೋಧ ಅಲ್ತಾಫ್ ಅಹಮ್ಮದ್ ಅವರ ಪಾರ್ಥಿವ ಶರೀರ ಬರುವ ನಿರೀಕ್ಷೆಯಿದೆ. ಸೇನೆಯ ಗೌರವಗಳೊಂದಿಗೆ ಅವರ ಅಂತ್ಯ ಸಂಸ್ಕಾರ ನೆರವೇರಲಿದೆ.

ಸ್ವಂತಕ್ಕೆಂದು ಒಂದು ಮನೆಯನ್ನೂ ಹೊಂದಿರಲಿಲ್ಲ ಯೋಧ ಅಲ್ತಾಫ್: ಇನ್ನು, ಯೋಧ ಅಲ್ತಾಫ್ ಅವರು ಸ್ವಂತಕ್ಕೆಂದು ಒಂದು ಮನೆಯನ್ನೂ ಹೊಂದಿರಲಿಲ್ಲ. ತನ್ನ ಇಬ್ಬರು ಸಹೋದರಿಯರನ್ನು ವಿವಾಹ ಮಾಡಿಕೊಟ್ಟಿದ್ದ ಹೆಗ್ಗಳಿಕೆ ಅಲ್ತಾಫ್ ಅವರದ್ದು. ಪೆರುಂಬಾಡಿ ಬಳಿ ಜಾಗ ಖರೀದಿಸಿದ್ದ ಯೋಧ ಅಲ್ತಾ ನಿವೃತಿಯ ಬಳಿಕ ಮನೆ ಕಟ್ಟುವ ಕನಸು ಕಂಡಿದ್ದರು.

ಯೋಧ ಅಲ್ತಾಫ್ ಪ್ರೇಮಿಗಳ ದಿನ‌, ಹಿಜಾಬ್​ ಬಗ್ಗೆ ಏನು ಹೇಳಿದ್ದರು?: ಯೋಧ ಅಲ್ತಾಫ್ ಫೆಬ್ರವರಿ 14 ರಂದು ಮಾಡಿದ್ದ ಆಡಿಯೋ ಇದೀಗ ವೈರಲ್ ಆಗಿದೆ. ಹಿಜಬ್-ಕೇಸರಿ ಶಾಲು ವಿವಾದಕ್ಜೆ ಬೇಸರ ವ್ಯಕ್ತಪಡಿಸಿದ್ದ ಯೋಧ ನಾವು ಸೈನಿಕರು ದೇಶದ ಜನತೆಗೋಸ್ಕರ ಗಡಿಯಲ್ಲಿ ಹೋರಾಡುತ್ತೇವೆ. ನೀವು ಮಾತ್ರ ಜಾತಿ-ಜಾತಿಗೋಸ್ಕರ ಬಡಿದಾಡುತ್ತೀರಾ? ನಾವೆಲ್ಲಾ ಭಾರತೀಯರೇ. ಇಲ್ಲಿ ನಮ್ಮ‌ ಕಣ್ಣೆದುರೆ ಸೈನಿಕರು ಸಾಯುತ್ತಿದ್ದಾರೆ ಎಂದು ವಾಟ್ಸ್ ಆಪ್ ಆಡಿಯೋದಲ್ಲಿ ವೀರ ಯೋಧ ಅಲ್ತಾಫ್ ವಿಷಾದದ ದನಿಯಲ್ಲಿ ಹೇಳಿದ್ದರು.

ಭಾರೀ ಹಿಮಪಾತದ ವಿಡಿಯೋ ಮಾಡಿ ಕಳುಹಿಸಿದ್ದ ಯೋಧ ಅಲ್ತಾಫ್ ಫೆಬ್ರವರಿ 14 ಪ್ರೇಮಿಗಳ ದಿನವಲ್ಲ; ಅಂದು ರಾಜ್ ಗುರು, ಭಗತ್ ಸಿಂಗ್ ರನ್ನು ನೇಣಿಗೇರಿಸಿದ ದಿನ. ಹಾಗಾಗಿ, ಪ್ರೇಮಿಗಳ ದಿನ‌ ಆಚರಿಸಬಾರದೆಂದು ಯೋಧ ಅಲ್ತಾಫ್ ಕರೆಕೊಟ್ಟಿದ್ದರು.

Soldier Audio Viral : ಯೋಧ ಅಲ್ತಾಫ್ ಪ್ರೇಮಿಗಳ ದಿನ‌, ಹಿಜಾಬ್​ ಬಗ್ಗೆ ಏನು ಹೇಳಿದ್ದರು? ನಾವು ಸೈನಿಕರು.. ದೇಶದ ಜನತೆಗೆ ಗಡಿಯಲ್ಲಿ ಹೋರಾಡ್ತೇವೆ

Published On - 12:33 pm, Thu, 24 February 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ