AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು ಪ್ರವಾಸೋದ್ಯಮಕ್ಕೆ ತಟ್ಟಿದ ವಯನಾಡು ದುರಂತದ ಬಿಸಿ; ಬೀಕೋ ಅಂತಿದೆ ಪ್ರವಾಸಿಗರ ಹಾಟ್​ಸ್ಪಾಟ್

ವಯನಾಡು, ಸಧ್ಯ ಈ ಹೆಸರು ಕೇಳಿದರೆ ಸಾಕು ಎಲ್ಲರ ಎದೆ ಝಲ್ಲೆನ್ನುತ್ತೆ. ವಿಶೇಷವಾಗಿ ಬೆಟ್ಟ ಗುಡ್ಡಗಳೆ ತುಂಬಿರುವ ಪ್ರವಾಸೀ ತಾಣಗಳು ವಯನಾಡು ದುರಂತದ ಬಳಿಕ ಬಿಕೋ ಎನ್ನುತ್ತಿವೆ. ಹೌದು, ಕೊಡಗು ಜಿಲ್ಲೆಯ ಪ್ರವಾಸೋಧ್ಯಮ ವಯನಾಡು ದುರಂತದ ಬಳಿಕ ಸಂಪೂರ್ಣ ಸ್ತಬ್ಧವಾಗಿದೆ. ಈ ಕುರಿತು ಒಂದು ವರದಿ ಇಲ್ಲಿದೆ.

ಕೊಡಗು ಪ್ರವಾಸೋದ್ಯಮಕ್ಕೆ ತಟ್ಟಿದ ವಯನಾಡು ದುರಂತದ ಬಿಸಿ; ಬೀಕೋ ಅಂತಿದೆ ಪ್ರವಾಸಿಗರ ಹಾಟ್​ಸ್ಪಾಟ್
ಕೊಡಗು ಪ್ರವಾಸೋದ್ಯಮಕ್ಕೆ ತಟ್ಟಿದ ವಯನಾಡು ದುರಂತದ ಬಿಸಿ
ಗೋಪಾಲ್​ ಸೋಮಯ್ಯ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Aug 07, 2024 | 10:20 PM

Share

ಕೊಡಗು, ಆ.07: ಕೊಡಗು ಪ್ರವಾಸಿಗರ(Tourist) ಹಾಟ ಸ್ಪಾಟ್, ದೇಶ-ವಿದೇಶಗಳಿಂದ ಹಾರಿ ಬರುವ ಟೂರಿಸ್ಟ್​ಗಳಿಗೆ ಕೊಡಗು(Kodagu) ಜಿಲ್ಲೆಯ ಬೆಟ್ಟ-ಗುಡ್ಡಗಳು, ಪ್ರಕೃತಿ ಸೌಂದರ್ಯ, ನದಿ-ತೊರೆಗಳು, ಕೂಲ್ ಕೂಲ್ ಪರಿಸರ ಎಲ್ಲವೂ ಬಹಳ ಇಷ್ಟ. ಹಾಗಾಗಿಯೇ ಜಿಲ್ಲೆಗೆ ವಾರ್ಷಿಕ ಕನಿಷ್ಟ 40 ಲಕ್ಷ ಪ್ರವಾಸಿಗರು ಭೇಟಿ ನೀಡ್ತಾರೆ. ವಾಸ್ತವವಾಗಿ ನೋಡುವುದಾದರೆ ಕೊಡಗು ಜಿಲ್ಲೆಯಲ್ಲಿ ಕಳೆದ ಎರಡ್ಮೂರು ವರ್ಷಗಳಿಂದ ಸೀಸನಲ್ ಟೂರಿಸಂ ಎನ್ನುವ ಕಲ್ಪನೆಯೇ ಮಾಯವಾಗಿದೆ. ವಿಪರೀತ ಮಳೆ ಇದ್ದಾಗಲೂ ಕೂಡ ಪ್ರವಾಸಿಗರು ಅದೇ ಪ್ರಮಾಣದಲ್ಲಿ ಬರುತ್ತಿದ್ದರು. ಆದ್ರೆ, ವಯನಾಡು ಭೀಕರ ದುರಂತದ ಬಳಿಕ ಇದೀಗ ಜಿಲ್ಲೆಯಲ್ಲಿ ಎಲ್ಲವೂ ಸ್ತಬ್ಧವಾಗಿದೆ.

ಹೌದು, ಯಾವಾಗ ವಯನಾಡಿನಲ್ಲಿ ಬೆಟ್ಟ-ಗುಡ್ಡಗಳು ಕೊಚ್ಚಿ ಬಂದು ಅಲ್ಲಿನ ಜನ ಜೀವನ ಪ್ರವಾಸೋಧ್ಯಮವನ್ನ ಬುಡಮೇಲು ಮಾಡಿತೋ ಇದೀಗ ಕೊಡಗು ಜಿಲ್ಲೆಯತ್ತ ಮುಖ ಮಾಡಲೂ ಪ್ರವಾಸಿಗರು ಭಯಪಡುತ್ತಿದ್ದಾರೆ. ಕೊಡಗು ಜಿಲ್ಲೆಯ ಬಹುತೇಕ ಹೋಮ್​ಸ್ಟೇ, ರೆಸಾರ್ಟ್​ಗಳು ಇರುವುದೇ ಬೆಟ್ಟಗುಡ್ಡಗಳ ಮೇಲೆ. ಹಾಗಾಗಿ ಇಲ್ಲಿ ಯಾವಾಗ ಈ ಬೆಟ್ಟ-ಗುಡ್ಡಗಳು ಕುಸಿಯುತ್ತದೆಯೋ ಎಂದು ಪ್ರವಾಸಿಗರು ಬರುವುದನ್ನೇ ಬಿಟ್ಟಿದ್ದಾರೆ.

ಇದನ್ನೂ ಓದಿ:ಕೊಡಗು: 104 ಕಡೆಗಳಲ್ಲಿ ಭೂಕುಸಿತದ ಭೀತಿ, 2,995 ಕುಟುಂಬಗಳ ಸ್ಥಳಾಂತರಕ್ಕೆ ನೋಟಿಸ್

ವಾಸ್ತವವಾಗಿ ಆಗಸ್ಟ್​ನಲ್ಲಿ ಬಹಳಷ್ಟು ಸರ್ಕಾರಿ ರಜೆಗಳಿರುವ ಹಿನ್ನೆಲೆ ಜಿಲ್ಲೆಯ ಹೋಮ್​ಸ್ಟೇ, ರೆಸಾರ್ಟ್​ಗಳು ಬುಕಿಂಗ್ ಆಗಿದ್ದವು. ಆದ್ರೆ, ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ಮಳೆ ವಿಪರೀತ ಅಬ್ಬರಿಸಿದ್ದರಿಂದ, ಇದೇ ವೇಳೆ ವಯನಾಡು ದುರಂತ ಸಂಭವಿಸಿದ್ದರಿಂದ ಎಲ್ಲಾ ಬುಕಿಂಗ್​ಗಳು ರದ್ದಾಗಿವೆ. ಸೆಪ್ಟಂಬರ್ ಬಳಿಕವೇ ಕೊಡಗಿನತ್ತ ಬರುವ ಬಗ್ಗೆ ಪ್ರವಾಸಿಗರು ಯೋಚಿಸುತ್ತಿದ್ದಾರಂತೆ. ಇದೀಗ ಕಳೆದ ನಾಲ್ಕು ದಿನಗಳಿಂದ ಮಳೆ ಸಂಪೂರ್ಣ ಇಳಿದಿದೆ. ಆದರೂ ಕೂಡ ಪ್ರವಾಸಿಗರು ಧೈರ್ಯ ಮಾಡುತ್ತಿಲ್ಲ. ಅತಿಯಾದ ಮಳೆ, ಭೂ ಕುಸಿತದ ಆತಂಕ ಇರುವಾಗ ಪ್ರವಾಸಿಗರು ಕೆಲ ದಿನಗಳ ಮಟ್ಟಿಗೆ ಪ್ರವಾಸ ಕೈಗೊಳ್ಳದಿರುವುದೇ ಒಳ್ಳೆಯದು ಎಂಬ ಅಭಿಪ್ರಾಯವೂ ಇದೆ.

ಇದಕ್ಕೆ ಪೂರಕವಾಗಿ ಜಿಲ್ಲಾಡಳಿತ ಕೂಡ ಕಳೆದ ವಾರ ಪ್ರವಾಸಿಗರು ತಮ್ಮ ಪ್ರವಾಸವನ್ನ ಕೆಲ ದಿನಗಳ ಮಟ್ಟಿಗೆ ಮುಂದೂಡಿ ಎಂದು ಕೆರೆ ಕೊಟ್ಟಿತ್ತು. ಕೊಡಗು ಜಿಲ್ಲೆಯಲ್ಲಿ ಆಶ್ಲೇಷ ಮಳೆ ಅಬ್ಬರ ಇನ್ನಷ್ಟೇ ಆರಂಭವಾಗಬೇಕಿದೆ. ಆಗಸ್ಟ್​ 10 ರ ಬಳಿಕ ಮಳೆ ಬಿರುಸು ಪಡೆಯುವ ಸಾಧ್ಯತೆ ಇದೆ. ಹಾಗಾಗಿ ಈ ತಿಂಗಳಂತೂ ಪ್ರವಾಸೋಧ್ಯಮ ಚೇತರಿಸಿಕೊಳ್ಳುವ ಸಾಧ್ಯತೆ ಕಡಿಮೆ ಎಂದು ಹೇಳಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:18 pm, Wed, 7 August 24

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ