ಕೊಡಗು; ಸಿದ್ದಾಪುರ ಸಮೀಪ ಕಾಡಾನೆ ದಾಳಿಗೆ ಮಹಿಳೆ ಸಾವು, ವಾರದ ಅವಧಿಯಲ್ಲಿ ಎರಡನೇ ಘಟನೆ

Wild Elephant Attack in Kodagu Siddapur; ಬಡಗ ಗ್ರಾಮದ ನಿವಾಸಿ ಆಯಿಷಾ ಬೆಳಗಿನ ವಾಕಿಂಗ್‌ಗೆಂದು ಮನೆಯಿಂದ ಹೊರಟಿದ್ದರು. ಗ್ರಾಮದ ಮುಖ್ಯರಸ್ತೆಯಲ್ಲಿ ಕಾಡಾನೆಯೊಂದು ಎದುರಿಗೆ ಬಂದು ದಾಳಿ ಮಾಡಿದೆ. ಆನೆ ಆಕೆಯ ತಲೆಯನ್ನು ತುಳಿದಿದ್ದರಿಂದ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೆಲವು ಕಾರ್ಮಿಕರು ಎಸ್ಟೇಟ್ ಕೆಲಸಕ್ಕೆ ಹೋಗುತ್ತಿದ್ದಾಗ ಘಟನೆ ಬೆಳಕಿಗೆ ಬಂದಿದೆ.

ಕೊಡಗು; ಸಿದ್ದಾಪುರ ಸಮೀಪ ಕಾಡಾನೆ ದಾಳಿಗೆ ಮಹಿಳೆ ಸಾವು, ವಾರದ ಅವಧಿಯಲ್ಲಿ ಎರಡನೇ ಘಟನೆ
ಸಾಂದರ್ಭಿಕ ಚಿತ್ರ
Follow us
|

Updated on: Aug 21, 2023 | 9:13 PM

ಮಡಿಕೇರಿ, ಆಗಸ್ಟ್ 21: ಕಾಡಾನೆ ದಾಳಿಗೆ (Wild Elephant Attack) 65 ವರ್ಷದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕೊಡಗು (Kodagu) ಜಿಲ್ಲೆಯ ಸಿದ್ದಾಪುರ ಸಮೀಪದ ಬಡಗ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಇದು ಕಳೆದ ಒಂದು ವಾರದ ಅವಧಿಯಲ್ಲಿ ನಡೆದ ಎರಡನೇ ಘಟನೆಯಾಗಿದೆ. ಕೆಲವೇ ದಿನಗಳ ಹಿಂದೆ ದಕ್ಷಿಣ ಕೊಡಗಿನ ಅರೆಕಾಡು ಪ್ರದೇಶದಲ್ಲಿ ಕಟ್ಟೆಮಾಡು ದೇವಪ್ಪ (58) ಎಂಬವರು ಆನೆ ದಾಳಿಯಿಂದ ಮೃತಪಟ್ಟಿದ್ದರು. ಬಡಗ ಗ್ರಾಮದ ನಿವಾಸಿ ಆಯಿಷಾ ಬೆಳಗಿನ ವಾಕಿಂಗ್‌ಗೆಂದು ಮನೆಯಿಂದ ಹೊರಟಿದ್ದರು. ಗ್ರಾಮದ ಮುಖ್ಯರಸ್ತೆಯಲ್ಲಿ ಕಾಡಾನೆಯೊಂದು ಎದುರಿಗೆ ಬಂದು ದಾಳಿ ಮಾಡಿದೆ. ಆನೆ ಆಕೆಯ ತಲೆಯನ್ನು ತುಳಿದಿದ್ದರಿಂದ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕೆಲವು ಕಾರ್ಮಿಕರು ಎಸ್ಟೇಟ್ ಕೆಲಸಕ್ಕೆ ಹೋಗುತ್ತಿದ್ದಾಗ ಘಟನೆ ಬೆಳಕಿಗೆ ಬಂದಿದೆ. ನಂತರ ಕಾರ್ಮಿಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಆದರೆ, ಘಟನೆ ನಡೆದ ಎರಡು ಗಂಟೆಗಳ ನಂತರವೇ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸ್ಥಳೀಯರು ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ವನ್ಯಜೀವಿ ಸಂಘರ್ಷ ನಿವಾರಣೆಗೆ ಇಲಾಖೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿದ ಸ್ಥಳೀಯರು, ಕೂಡಲೇ ಆನೆಯನ್ನು ಸೆರೆ ಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ.

ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಸಹ ಆಗಮಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಆದರೆ, ಘಟನಾ ಸ್ಥಳಕ್ಕೆ ಮಡಿಕೇರಿ ಡಿಸಿಎಫ್ ಎ.ಟಿ. ಪೂವಯ್ಯ, ವಿರಾಜಪೇಟೆ ಡಿಸಿಎಫ್ ಶರಣಪ್ಪ ಮತ್ತಿತರರು ಭೇಟಿ ನೀಡಿದ್ದು, ಆನೆಯನ್ನು ಹಿಡಿಯುವುದಾಗಿ ಭರವಸೆ ನೀಡಿದ್ದಾರೆ.

ನಾವು ಹಲವಾರು ಪ್ರದೇಶಗಳಲ್ಲಿ ಅರಣ್ಯ ಪ್ರದೇಶಕ್ಕೆ ಗೇಟ್​​ಗಳನ್ನು ಅಳವಡಿಸಿದ್ದೇವೆ. ರಾತ್ರಿಯ ಸಮಯದಲ್ಲಿ ಅವುಗಳನ್ನು ಮುಚ್ಚಲಾಗುತ್ತದೆ. ಆದರೆ, ಗ್ರಾಮಸ್ಥರು ತಮ್ಮ ಪ್ರಯಾಣದ ಸಮಯದಲ್ಲಿ ಗೇಟ್‌ಗಳನ್ನು ತೆರೆದಿಡುತ್ತಾರೆ. ಆದರೂ, ಆನೆಗಳ ಓಡಾಟ ನಿಯಂತ್ರಿಸಲು ಯೋಜನೆ ಸಿದ್ಧಪಡಿಸಲಾಗುತ್ತಿದ್ದು, ಕಾಡಾನೆಗಳ ಪ್ರವೇಶ ತಡೆಯಲು ಕಾಂಕ್ರೀಟ್ ಗೋಡೆಗಳ ನಿರ್ಮಾಣಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಡಿಸಿಎಫ್ ಶರಣಪ್ಪ ಹೇಳಿದ್ದಾರೆ.

ಇದನ್ನೂ ಓದಿ: ಕೊಡಗು; ಅರೆಕಾಡು ಗ್ರಾಮದಲ್ಲಿ ಟ್ರ್ಯಾಕ್ಟರ್ ಚಾಲಕನ ಕೊಂದ ಆನೆ ಕೊನೆಗೂ ಸೆರೆ, ದುಬಾರೆ ಶಿಬಿರಕ್ಕೆ ಸ್ಥಳಾಂತರ

ಆನೆಗಳನ್ನು ಮತ್ತೆ ಕಾಡಿಗೆ ಓಡಿಸುವ ಕಾರ್ಯದಲ್ಲಿ ಕಾಡಾನೆಗಳು ನಿರತರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. ದಾಳಿ ಮಾಡಿದ ಆನೆಯನ್ನು ಪತ್ತೆಹಚ್ಚಿ ಸೆರೆಹಿಡಿಯಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಪ್ರದೇಶದಲ್ಲಿ ಎರಡು ಆನೆಗಳನ್ನು ಸೆರೆಹಿಡಿಯಲು ನಾವು ಅನುಮತಿ ಪಡೆದಿದ್ದೇವೆ ಮತ್ತು ಕಳೆದ ವಾರ ಒಂದನ್ನು ಸೆರೆಹಿಡಿಯಲಾಗಿದೆ. ಪದೇ ಪದೇ ದಾಳಿ ಮಾಡುತ್ತಿರುವ ಮತ್ತೊಂದು ಆನೆಯನ್ನು ಪತ್ತೆಹಚ್ಚಲಾಗುತ್ತಿದ್ದು, ಶೀಘ್ರದಲ್ಲಿ ಸೆರೆ ಹಿಡಿಯಲಾಗುವುದು ಎಂದು ಅವರು ಹೇಳಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ.

ಕಟ್ಟೆಮಾಡು ದೇವಪ್ಪ ಅವರನ್ನು ಹತ್ಯೆ ಮಾಡಿದ್ದ ಆನೆಯನ್ನು ಕಳೆದ ವಾರ ಸೆರೆಹಿಡಿದು, ದುಬಾರೆ ಆನೆ ಶಿಬಿರಕ್ಕೆ ಸ್ಥಳಾಂತರಿಸಲಾಗಿತ್ತು.

ಕೊಡಗು ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್