AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭುಜನೋವೆಂದು ಕ್ಲಿನಿಕ್​ಗೆ ಹೋದಾತ ಹೆಣವಾದ: ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾದನಾ ಯುವಕ?

ಕೊಡಗಿನ ಸುಂಟಿಕೊಪ್ಪದಲ್ಲಿ ಭುಜ ನೋವಿಗೆ ಚಿಕಿತ್ಸೆ ಪಡೆದ ವಿನೋದ್ ಎಂಬ ಯುವಕ ಎರಡು ಇಂಜೆಕ್ಷನ್‌ಗಳ ನಂತರ ಮೃತಪಟ್ಟಿದ್ದಾನೆ. ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದು, ಖಾಗಿ ಕ್ಲಿನಿಕ್​ ವೈದ್ಯ ಯಶೋಧರ್ ಪೂಜಾರಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ.

ಭುಜನೋವೆಂದು ಕ್ಲಿನಿಕ್​ಗೆ ಹೋದಾತ ಹೆಣವಾದ: ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾದನಾ ಯುವಕ?
ಮೃತ ಯುವಕ
ಗೋಪಾಲ್​ ಸೋಮಯ್ಯ
| Edited By: |

Updated on:Nov 07, 2025 | 9:24 AM

Share

ಮಡಿಕೇರಿ, ನವೆಂಬರ್​ 07: ಭುಜ ನೋವು ಎಂದು ಆಸ್ಪತ್ರೆಗೆ ಹೋಗಿದ್ದ ಯುವಕ ಎರಡು ಇಂಜೆಕ್ಷನ್​ ಮತ್ತು ಮಾತ್ರೆ ಪಡೆದ ಬಳಿಕ ತೀವ್ರ ಅಸ್ವಸ್ಥನಾಗಿ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದಲೇ ತಮ್ಮ ಮಗನ ಸಾವಾಗಿದೆ ಎಂದು ಪೋಷಕರು ಆರೋಪಿಸಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ವಿನೋದ್ ಮೃತ ದುರ್ದೈವಿಯಾಗಿದ್ದು, ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಘಟನೆ ಏನು?

ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ ಗ್ರಾಮದ ನಿವಾಸಿ ಶೇಖರ್ ಅವರ ಪುತ್ರ ವಿನೋದ್ ಭುಜದ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಚಿಕಿತ್ಸೆ ಪಡೆಯಲೆಂದು ಸುಂಟಿಕೊಪ್ಪದಲ್ಲೇ ಇರುವ ಖಾಸಗಿ ಕ್ಲಿನಿಕ್​ಗೆ ತೆರಳಿದ್ದಾರೆ. ಇವರನ್ನು ಪರೀಕ್ಷಿಸಿದ ವೈದ್ಯ ಯಶೋಧರ್ ಪೂಜಾರಿ ಮಾತ್ರೆ ಜೊತೆಗೆ ಇಂಜೆಕ್ಷನ್​ ಕೂಡ ನೀಡಿದ್ದಾರೆ. ಆದರೂ ನೋವು ಕಡಿಮೆಯಾಗದ ಕಾರಣ ಮತ್ತೊಂದು ಇಂಜೆಕ್ಷನ್​ ಕೊಟ್ಟು ಮನೆಗೆ ಕಳುಹಿಸಿದ್ದಾರೆ. ಕ್ಲಿನಿಕ್​ನಿಂದ ಮನೆಗೆ ಆಗಮಿಸಿದ ವಿನೋದ್ ಕೆಲವೇ ಹೊತ್ತಿನಲ್ಲಿ ಅಸ್ವಸ್ಥರಾಗಿ ಬಿದ್ದಿದ್ದು, ತಕ್ಷಣವೇ ಸ್ಥಳೀಯರು ಆಟೋದಲ್ಲಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ಅವರನ್ನು ಕರೆ ತಂದಿದ್ದಾರೆ. ಆದರೆ ಅಷ್ಟರಲ್ಲಾಗಲೇ ವಿನೋದ್ ಸಾವನ್ನಪ್ಪಿರುವ ಬಗ್ಗೆ ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಹೆತ್ತ ಕರುಳನ್ನೇ ಕತ್ತರಿಸಿದ ಮಗ: ಹತ್ಯೆ ಮಾಡಿ ನಾಟಕವಾಡಿದ್ದ ನಿವೃತ್ತ ಸರ್ಕಾರಿ ನೌಕರ ಅರೆಸ್ಟ್

ಮೃತ ವಿನೋದ್​ಗೆ ಯಾವುದೇ ಆರೋಗ್ಯ ಸಮಸ್ಯೆಗಳು ಇರಲಿಲ್ಲ.ಕಳೆದ ಕೆಲವು ದಿನಗಳಿಂದ ತಮ್ಮ ಮನೆಯನ್ನ ತಾವೇ ನವೀಕರಿಸಿದ್ದರು. ಮರಗಳನ್ನ ಇಳಿಸಿದ್ದರಿಂದ ಸ್ವಲ್ಪ ಭುಜ ನೋವಿದೆ ಅಂತ ಕ್ಲಿನಿಕ್​ಗೆ ತೆರಳಿದ್ದೇ ಅವರ ಜೀವಕ್ಕೀಗ ಮುಳುವಾಗಿದೆ. ಭುಜ ನೋವಿಗೆ ಕಾರಣ ಏನು ಎಂದು ವೈದ್ಯರು ಸರಿಯಾಗಿ ಪರಿಶೀಲಿಸದೆ ಎರಡೆರಡು ಇಂಜೆಕ್ಷನ್ ನೀಡಿದ್ದೇ ವಿನೋದ್​ ಸಾವಿಗೆ ಕಾರಣ ಅಂತ ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೆ ಖಾಸಗಿ ಕ್ಲಿನಿಕ್​ ವೈದ್ಯರಾಗಿರೋ ಯಶೋಧರ್ ಪೂಜಾರಿ ವಿರುದ್ಧ ಈ ಹಿಂದೆಯೂ ಹಲವು ದೂರುಗಳಿವೆ. ಹಾಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ವಿನೋದ್ ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಅದರ ವರದಿ ಬಂದ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:52 am, Fri, 7 November 25

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ