AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ಕಾರಣಕ್ಕೂ ಮುಷ್ಕರ ವಾಪಸ್ ಪಡೆಯೋವುದಿಲ್ಲ -ಕೋಡಿಹಳ್ಳಿ ಪಟ್ಟು ಏನು?

ಸಚಿವರು ಬರುವವರೆಗೂ ಮುಷ್ಕರ ವಾಪಸ್ ಪಡೆಯುವುದಿಲ್ಲ ಎಂದು ಫ್ರೀಡಂ ಪಾರ್ಕ್‌ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಸಚಿವ ಲಕ್ಷ್ಮಣ ಸವದಿ ಇಲ್ಲಿಗೆ ಬಂದು ನಿನ್ನೆ ಕೊಟ್ಟ ಭರವಸೆಗಳ ಈಡೇರಿಕೆ ಬಗ್ಗೆ ಲಿಖಿತ ರೂಪದಲ್ಲಿ ಆಶ್ವಾಸನೆ ನೀಡಬೇಕು ಎಂದು ಕೋಡಿಹಳ್ಳಿ ಹೇಳಿದರು.

ಯಾವುದೇ ಕಾರಣಕ್ಕೂ ಮುಷ್ಕರ ವಾಪಸ್ ಪಡೆಯೋವುದಿಲ್ಲ -ಕೋಡಿಹಳ್ಳಿ ಪಟ್ಟು ಏನು?
ಕೋಡಿಹಳ್ಳಿ ಚಂದ್ರಶೇಖರ್​ (ಎಡ); ಲಕ್ಷ್ಮಣ ಸವದಿ (ಬಲ)
KUSHAL V
|

Updated on:Dec 14, 2020 | 12:40 PM

Share

ಬೆಂಗಳೂರು: ಸಚಿವರು ಬರುವವರೆಗೂ ಮುಷ್ಕರ ವಾಪಸ್ ಪಡೆಯುವುದಿಲ್ಲ ಎಂದು ಫ್ರೀಡಂ ಪಾರ್ಕ್‌ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಸಚಿವ ಲಕ್ಷ್ಮಣ ಸವದಿ ಇಲ್ಲಿಗೆ ಬಂದು ನಿನ್ನೆ ಕೊಟ್ಟ ಭರವಸೆಗಳ ಈಡೇರಿಕೆ ಬಗ್ಗೆ ಲಿಖಿತ ರೂಪದಲ್ಲಿ ಆಶ್ವಾಸನೆ ನೀಡಬೇಕು ಎಂದು ಕೋಡಿಹಳ್ಳಿ ಹೇಳಿದರು.

ನಿನ್ನೆ ನಡೆದ ಒಂಬತ್ತು ಅಂಶದ ಭರವಸೆ ಬಗ್ಗೆ ಲಿಖಿತ ಪತ್ರ ತೆಗೆದುಕೊಂಡು ಸಚಿವರು ಸ್ಥಳಕ್ಕೆ ಬರಬೇಕು. ಅಲ್ಲಿವರೆಗೆ ಮುಷ್ಕರ ಮುಂದುವರಿಯುತ್ತೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ನಿನ್ನೆ ಇಡೀ ದಿನ ಕತ್ತಲೆ ಬೆಳಕಿನ ರೀತಿ ಬೆಳವಣಿಗೆ ನಡೆಯಿತು. ಏನೆಲ್ಲಾ ಬೆಳವಣಿಗೆ ನಡೆದಿದೆ ಎಂದು ನಿಮಗೆಲ್ಲಾ ಗೊತ್ತಾಗಬೇಕು. ಯಾವುದನ್ನೂ ದೀರ್ಘವಾಗಿ ಎಳೆದುಕೊಂಡು ಹೋಗುವುದಿಲ್ಲ ಎಂದು ಹೇಳಿದರು.

ಸರ್ಕಾರಕ್ಕೆ 10 ಬೇಡಿಕೆಗಳನ್ನ ಇಟ್ಟಿದ್ದೆವು, 9 ಬೇಡಿಕೆ ಈಡೇರಿಸಿದೆ. ಸಚಿವರೊಬ್ಬರ ಮೂಲಕ ಅದನ್ನು ವೇದಿಕೆಗೆ ತಲುಪಿಸಬೇಕು ಎಂದು ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹಿಸಿದರು.

ಇತ್ತ, KSRTC ನೌಕರರ ಸಂಘದ ರಾಜ್ಯಾಧ್ಯಕ್ಷ ಚಂದ್ರು ಕೊನೇವರೆಗೂ ಸರ್ಕಾರದ ನೌಕರರಾಗುವ ನಿಲುವು ಬದಲಾಯಿಸಲ್ಲ. ನಮ್ಮ ಅಜೆಂಡಾದಿಂದ ನಾವು ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು. ನಮ್ಮ 9 ಮುಖ್ಯ ಬೇಡಿಕೆಗಳಿಗೆ ಅವರು ಮಾಹಿತಿ ನೀಡಿದ್ದಾರೆ. ಸರ್ಕಾರದ ಪ್ರತಿನಿಧಿ ಆದೇಶ ಪ್ರತಿ ನೀಡುವವರೆಗೂ ಮುಷ್ಕರ ಮುಂದುವರಿಸುತ್ತೇವೆ.

ಅಡ್ಡಗೋಡೆ ಮೇಲೆ ದೀಪವಿಡುವ ಕೆಲಸ ಮಾಡಬೇಡಿ. ಸಾರಿಗೆ ಸಚಿವರೇ ನೀವು ನಿನ್ನೆ ಹೇಳಿದ್ದನ್ನ ಲಿಖಿತ ರೂಪದಲ್ಲಿ ಕೊಡಿ. ನಮಗೆ ಸಾರ್ವಜನಿಕರ ಹಾಗೂ ಕಾರ್ಮಿಕರ ಹಿತವೂ ಮುಖ್ಯ. ಈ ವಿಚಾರದಲ್ಲಿ ನಮಗೆ ಸ್ಪಷ್ಟತೆಯನ್ನ ನೀಡಬೇಕು ಎಂದು ಚಂದ್ರು ಹೇಳಿದರು. 6ನೇ ವೇತನ ಜಾರಿಯಾಗಿದೆ ಎಂಬ ಆದೇಶ ಪ್ರತಿ ಬೇಕಾಗಿದೆ. ಆದೇಶ ಪ್ರತಿ ಯಾವಾಗ ಕೊಡುತ್ತೀರಾ? ಎಂದು ತಿಳಿಸಬೇಕು ಎಂದು ಚಂದ್ರು ಪ್ರಶ್ನಿಸಿದರು.

‘ನಾವು ಯಾವುದೇ ಕಾರಣಕ್ಕೂ ಮುಷ್ಕರವನ್ನ ಹಿಂಪಡೆಯಲ್ಲ’

Published On - 12:35 pm, Mon, 14 December 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ