AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಸರ್ಕಾರಕ್ಕೆ ಗಡುವು ನೀಡಿದ ಕೋಡಿಹಳ್ಳಿ ಚಂದ್ರಶೇಖರ್

ಸಾರಿಗೆ ನೌಕರರಿಂದ ಸರ್ಕಾರಕ್ಕೆ ಒಂದೂವರೆ ತಿಂಗಳ ಗಡುವು ನೀಡಲಾಗಿದೆ. ಒಂದೂವರೆ ತಿಂಗಳೊಳಗೆ 9 ಬೇಡಿಕೆಯನ್ನು ಈಡೇರಿಸದಿದ್ದರೆ ಮತ್ತೆ ಮುಷ್ಕರ ಕೈಗೊಳ್ಳುತ್ತೇವೆ ಎಂದು ರೈತ ಹೋರಾಟ ಮತ್ತು ಸಾರಿಗೆ ನೌಕರರ ಬೇಡಿಕೆಗಳ ಕುರಿತು ಸುದ್ದಿಗೋಷ್ಠಿಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಹೇಳಿಕೆ ನೀಡಿದ್ದಾರೆ.

ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಸರ್ಕಾರಕ್ಕೆ ಗಡುವು ನೀಡಿದ ಕೋಡಿಹಳ್ಳಿ ಚಂದ್ರಶೇಖರ್
ಕೋಡಿಹಳ್ಳಿ ಚಂದ್ರಶೇಖರ್ (ಸಂಗ್ರಹ ಚಿತ್ರ)
shruti hegde
| Edited By: |

Updated on:Feb 02, 2021 | 2:58 PM

Share

ಬೆಂಗಳೂರು: ಸಾರಿಗೆ ನೌಕರರಿಂದ ಸರ್ಕಾರಕ್ಕೆ ಒಂದೂವರೆ ತಿಂಗಳ ಗಡುವು ನೀಡಲಾಗಿದೆ. ಒಂದೂವರೆ ತಿಂಗಳೊಳಗೆ 9 ಬೇಡಿಕೆಯನ್ನು ಈಡೇರಿಸದಿದ್ದರೆ ಮತ್ತೆ ಮುಷ್ಕರ ಕೈಗೊಳ್ಳುತ್ತೇವೆ ಎಂದು ರೈತ ಹೋರಾಟ ಮತ್ತು ಸಾರಿಗೆ ನೌಕರರ ಬೇಡಿಕೆಗಳ ಕುರಿತು ಸುದ್ದಿಗೋಷ್ಠಿಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಹೇಳಿಕೆ ನೀಡಿದ್ದಾರೆ.

ಸಾರಿಗೆ ನೌಕರರ 3 ಬೇಡಿಕೆ ಈಡೇರಿಸಿದ್ದೇವೆ ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ಆದರೆ ಯಾವುದೇ ರೀತಿಯ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ನೀವು 3 ಬೇಡಿಕೆ ಈಡೇರಿಸಿದ್ದೇವೆ ಎಂದು ಹೇಳುವುದಾದರೆ, ಇನ್ನೂ 6 ಬೇಡಿಕೆಗಳನ್ನು ಈಡೇರಿಸುವ ಕೆಲಸ ಮಾಡಿ. ಇಲ್ಲವಾದರೆ ಬಸ್ ನಿಲ್ಲಿಸಿ ಮುಷ್ಕರ ನಡೆಸುತ್ತೇವೆ ಎಂದು ಸಾರಿಗೆ ನೌಕರರ ಪರ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದ್ದಾರೆ.

ಕಳೆದ ಡಿಸೆಂಬರ್​ನಲ್ಲಿ ಸಾರಿಗೆ ಮುಷ್ಕರ ನಡೆಸಿದ್ದೆವು. ಮುಷ್ಕರದಲ್ಲಿ ಡಿ.13 ನೇ ತಾರೀಖು ಸರ್ಕಾರ ಸಾರಿಗೆ ನೌಕರರ ಜೊತೆ ಮಾತುಕತೆ ನಡೆಸಿತ್ತು. ಸಾರಿಗೆ ನೌಕರರು 10 ಬೇಡಿಕೆಗಳನ್ನ ಸರ್ಕಾರದ ಮುಂದೆ ಇರಿಸಿದ್ದರು. ಸರ್ಕಾರ 9 ಬೇಡಿಕೆಗಳನ್ನ ಈಡೇರಿಸುವುದಾಗಿ ಲಿಖಿತ ರೂಪದಲ್ಲಿ ತಿಳಿಸಿತ್ತು. ಆದರೆ ಸ್ವಲ್ಪ ಕಾಲಾವಕಾಶ ಬೇಕೆಂದು ಮನವಿ ಮಾಡಿತ್ತು. ಈ ಹಿನ್ನಲೆಯಲ್ಲಿ ನಾವು ಸರ್ಕಾರಕ್ಕೆ ಮೂರು ತಿಂಗಳ ಗಡುವು ನೀಡಿದ್ದೆವು ಎಂದು ಅವರು ಮಾತನಾಡಿದರು.

ಒಂದುವರೆ ತಿಂಗಳಾದರೂ 9 ರಲ್ಲಿ ಒಂದು ಬೇಡಿಕೆಯನ್ನು ಈಡೇರಿಸುವ ಕುರಿತಾಗಿಯೂ ಸರ್ಕಾರ ಪ್ರಕಟಣೆ ಮಾಡಿಲ್ಲ. ಸರ್ಕಾರ 9 ಬೇಡಿಕೆಗಳನ್ನ ಈಡೇರುವ ಘೋಷಣೆಯನ್ನ ಸರ್ಕಾರ ಮಾಡಬೇಕು. ಸರ್ಕಾರ ಉದ್ದೇಶ ಪೂರ್ವಕವಾಗಿ ಈ ರೀತಿ ಮಾಡುತ್ತಿದೆಯೇ ಎಂಬುದನ್ನು ಸಾರ್ವಜನಿಕರು ಗಮನಿಸಬೇಕು. ಅರ್ಧ ಸಮಯ ಈಗಾಗಲೇ ಮುಗಿದು ಹೋಗಿದೆ. ಇನ್ನು, ಒಂದುವರೆ ತಿಂಗಳ ಒಳಗೆ ಎಲ್ಲ ಬೇಡಿಕೆಗಳನ್ನ ಈಡೇರಿಸಬೇಕು.

ಸಾರಿಗೆ ನಿಗಮಕ್ಕೆ 4 ಸಾವಿರ ಕೋಟಿ ರೂ. ನಷ್ಟವಾಗಿದೆ: ನೌಕರರ ಪ್ರತಿಭಟನೆ ನೆನೆದು ಲಕ್ಷ್ಮಣ ಸವದಿ ಬೇಸರ

Published On - 2:57 pm, Tue, 2 February 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!