AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Bandh: ಬಂದ್​ಗೆ ಯಾವುದೇ ರಾಜಕೀಯ ಪಕ್ಷಗಳ ಬೆಂಬಲ ಕೋರಿಲ್ಲ: ಕೋಡಿಹಳ್ಳಿ ಚಂದ್ರಶೇಖರ್ ಹೇಳಿಕೆ

Bharat Bandh: ಬೆಂಗಳೂರು ಆಟೋ ಹಾಗೂ ಟ್ಯಾಕ್ಸಿ ಚಾಲಕರ ಸಂಘ, ಆದರ್ಶ ಆಟೋ ಚಾಲಕರ ಸಂಘದಿಂದ. ರುಪ್ಸಾ ಕರ್ನಾಟಕದಿಂದಲೂ ಬಂದ್‌ಗೆ ನೈತಿಕ ಬೆಂಬಲ ಇರುವ ಬಗ್ಗೆ ತಿಳಿಸಿದ್ದಾರೆ.

Bharat Bandh: ಬಂದ್​ಗೆ ಯಾವುದೇ ರಾಜಕೀಯ ಪಕ್ಷಗಳ ಬೆಂಬಲ ಕೋರಿಲ್ಲ: ಕೋಡಿಹಳ್ಳಿ ಚಂದ್ರಶೇಖರ್ ಹೇಳಿಕೆ
ಕೋಡಿಹಳ್ಳಿ ಚಂದ್ರಶೇಖರ್
TV9 Web
| Edited By: |

Updated on:Sep 25, 2021 | 3:32 PM

Share

ಬೆಂಗಳೂರು: ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಸೆಪ್ಟೆಂಬರ್ 27 ರಂದು ಕರೆನೀಡಿರುವ ಭಾರತ್​ ಬಂದ್​ಗೆ ಹಲವು ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ. ಫ್ರೀಡಂಪಾರ್ಕ್​ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್​ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಚಾಲಕರ ಅಸೋಸಿಯೇಷನ್​ ಗಂಡಸಿ ಸದಾನಂದಸ್ವಾಮಿ, ಕೆ.ಆರ್. ಮಾರ್ಕೆಟ್ ವರ್ತಕರ ಸಂಘದ ಅಧ್ಯಕ್ಷ ಮಹೇಶ್​ಗೌಡ, ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮೀ ಸೇರಿದಂತೆ ಹಲವರು ಸಭೆಯಲ್ಲಿ ಭಾಗಿ ಆಗಿದ್ದಾರೆ.

ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಸೆ.27ಕ್ಕೆ ಭಾರತ್​ ಬಂದ್​ಗೆ ಬಹುತೇಕ ರೈತ ಸಂಘಟನೆಗಳು ಬೆಂಬಲ ನೀಡಿವೆ. ರೈತರೇ ಹೋರಾಟದ ಮುಂಚೂಣಿಯಲ್ಲಿ ಇರುತ್ತಾರೆ. ಪ್ರತಿಯೊಬ್ಬರೂ ಭಾರತ್ ಬಂದ್ ಬೆಂಬಲಿಸುವಂತೆ ಮನವಿ ಮಾಡಲಾಗಿದೆ ಎಂದು ಫ್ರೀಡಂಪಾರ್ಕ್​ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್​ ಹೇಳಿಕೆ ನೀಡಿದ್ದಾರೆ. ಸೆ. 27 ರಂದು ಬೆಳಗ್ಗೆ 8ಕ್ಕೆ ಕೆ.ಆರ್. ಮಾರ್ಕೆಟ್​ನಿಂದ ಮೆರವಣಿಗೆ ನಡೆಸಲಿದ್ದೇವೆ. ಬೆಳಗ್ಗೆ 11 ಗಂಟೆಗೆ ಟೌನ್​ಹಾಲ್​ ತಲುಪಲಿದ್ದೇವೆ. ಮೈಸೂರು ಬ್ಯಾಂಕ್​ ವೃತ್ತದವರೆಗೆ ಮೆರವಣಿಗೆ ಮಾಡುತ್ತೇವೆ. ಸರ್ಕಾರದ ಪರವಾಗಿ ಇರುವವರು ಬಂದ್​ಗೆ ಆಕ್ಷೇಪಿಸುತ್ತಾರೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಎಲ್ಲವನ್ನೂ ಖಾಸಗೀಕರಣ ಮಾಡುತ್ತಿದೆ. ರೈಲು, ಬಂದರು, ಹೆದ್ದಾರಿ ಎಲ್ಲವೂ ಖಾಸಗೀಕರಣವಾಗಿದೆ. ರೈತರು ಖಾಸಗೀಕರಣ ಆಗಬಾರದು ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಖಾಸಗೀಕರಣ ವಿರೋಧಿಸುವ ನಿಟ್ಟಿನಲ್ಲಿ ನಮ್ಮ ಹೋರಾಟ ನಡೆಯಲಿದೆ. ನಮ್ಮ ಹೋರಾಟಕ್ಕೆ ಸಮಸ್ತ ನಾಗರಿಕರು ಸಹಕರಿಸಬೇಕು. ಬಂದ್​ಗೆ ಯಾವುದೇ ರಾಜಕೀಯ ಪಕ್ಷಗಳ ಬೆಂಬಲ ಕೋರಿಲ್ಲ ಎಂದು ಕೋಡಿಹಳ್ಳಿ ಚಂದ್ರಶೇಖರ್​ ಹೇಳಿಕೆ ನೀಡಿದ್ದಾರೆ.

ಬಂದ್‌ಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ನೈತಿಕ ಬೆಂಬಲ ಇದೆ ಎಂದು ಟಿವಿ9ಗೆ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿಕೆ ನೀಡಿದ್ದಾರೆ. ರೈತರ ಹೋರಾಟಕ್ಕೆ ಕೇವಲ ನೈತಿಕ ಬೆಂಬಲ ಮಾತ್ರ ಇದೆ. ಕೇಂದ್ರದ ವಿರುದ್ಧ ಮುಂದಿನ ದಿನಗಳಲ್ಲಿ ಮತ್ತೆ ಪ್ರತಿಭಟನೆ ನಡೆಸಲಾಗುವುದು. ಅಕ್ಟೋಬರ್ 1 ಅಥವಾ 2ರಂದು ಪ್ರತಿಭಟನೆಗೆ ಚಿಂತನೆ ಮಾಡಲಾಗಿದೆ. ಸೆ. 27ರಂದು ಯಾವುದೇ ಪ್ರತಿಭಟನೆಯಲ್ಲಿ ಭಾಗಿಯಾಗಲ್ಲ ಎಂದು ಟಿವಿ9ಗೆ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಮಾಹಿತಿ ನೀಡಿದ್ದಾರೆ.

ಬಂದ್​ಗೆ ಬೀದಿಬದಿ ವ್ಯಾಪಾರಿಗಳ ಸಂಘದಿಂದ, ಖಾಸಗಿ ಶಾಲೆಗಳ ಒಕ್ಕೂಟದಿಂದಲೂ ನೈತಿಕ ಬೆಂಬಲ ಇದೆ ಎಂದು ಹೇಳಿದ್ದಾರೆ. ಬೆಂಗಳೂರು ಆಟೋ ಹಾಗೂ ಟ್ಯಾಕ್ಸಿ ಚಾಲಕರ ಸಂಘ, ಆದರ್ಶ ಆಟೋ ಚಾಲಕರ ಸಂಘದಿಂದ. ರುಪ್ಸಾ ಕರ್ನಾಟಕದಿಂದಲೂ ಬಂದ್‌ಗೆ ನೈತಿಕ ಬೆಂಬಲ ಇರುವ ಬಗ್ಗೆ ತಿಳಿಸಿದ್ದಾರೆ.

ಬಂದ್ ದಿನ ಕೆಎಸ್​ಆರ್​ಟಿಸಿ ಬಸ್​ಗಳ ಕಾರ್ಯಚರಣೆ ಇರಲಿದೆ ಭಾರತ್ ಬಂದ್ ಹಿನ್ನೆಲೆ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಧಿಕಾರಿಗಳು ಆಯಾ ವಲಯದ ಪೋಲಿಸ್ ಠಾಣೆಗಳಿಗೆ ಭದ್ರತೆ ಕೋರುವುದು. ಬಂದ್ ದಿನ ಬಸ್ ಡಿಪೋ ಯಿಂದ ಹೊರಟು ವಾಪಸ್ ಆಗುವವರೆಗೂ ಹೆಚ್ಚಿನ ನಿಗಾವಹಿಸುವುದು. ಸ್ಥಳೀಯ ಪೊಲೀಸ್ ಅಧಿಕಾರಿಗಳ ಜೊತೆ ಸಂಪರ್ಕ ಇಟ್ಟುಕೊಂಡು ಪರಿಸ್ಥಿತಿ ನಿಭಾಯಿಸುವುದು. ಚಾಲಕ, ನಿರ್ವಾಹಕರು ಬಸ್ ಗಳು ಜಕಂ ಆಗದಂತೆ ಕ್ರಮವಹಿಸುವುದು. ಬಂದ್ ದಿನ ಬಸ್​ಗಳಿಗೆ ಉಂಟಾಗುವ ಹಾನಿ, ಕಿ.ಮೀ ರದ್ಧತಿ ಬಗ್ಗೆ ಮಾಹಿತಿ ನೀಡಬೇಕು ಎಂದು ಸೂಚನೆ ಕೊಡಲಾಗಿದೆ.

ಈ ಬಗ್ಗೆ ಕೆಎಸ್​ಆರ್​ಟಿಸಿ ಎಂಡಿ ಶಿವಯೋಗಿ ಕಳಸದ್ ರಿಂದ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಭಾರತ್ ಬಂದ್ ದಿನ ಬಸ್​ಗಳಿಗೆ, ಬಸ್ ನಿಲ್ದಾಣ, ಡಿಪೋ ಹಾಗೂ ವರ್ಕ್ ಶಾಪ್ ಗಳಿಗೆ ಪೊಲೀಸ್ ಭದ್ರತೆ ಕೋರಿ ಪತ್ರ ಬರೆಯಲಾಗಿದೆ. ಬಂದ್ ದಿನ ಕೆಎಸ್​ಆರ್​ಟಿಸಿ ಬಸ್​ಗಳ ಕಾರ್ಯಚರಣೆ ಇರಲಿದೆ. ಕೆಲ ಕಿಡಿಗೇಡಿಗಳು ನಿಗಮದ ಆಸ್ತಿಪಾಸ್ತಿಗೆ ಹಾನಿ ಮಾಡುವ ಸಾಧ್ಯತೆ ಹಿನ್ನೆಲೆ ಭದ್ರತೆ ಕೋರಿ ಪತ್ರ ಬರೆಯಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Bharat Bandh: ಕೃಷಿ ಕಾಯ್ದೆ ವಿರೋಧಿಸಿ ಸೆ. 27ರಂದು ಭಾರತ್ ಬಂದ್; ಯಾವ ಸೇವೆ ಲಭ್ಯ? ಏನಿರುವುದಿಲ್ಲ?

ಇದನ್ನೂ ಓದಿ: ಸೆ 27ರ ಭಾರತ್ ಬಂದ್​ಗೆ ಹಾವೇರಿ, ದಾವಣಗೆರೆ ರೈತ ಸಂಘಟನೆಗಳು, ಓಲಾ-ಊಬರ್ ಕಾರ್ಮಿಕರ ಬೆಂಬಲ

Published On - 3:05 pm, Sat, 25 September 21

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್