AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಗಾದಿ ಹಬ್ಬಕ್ಕೆ ಸಂಬಳ ನೀಡದೆ ವಂಚನೆ; ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೋಡಿಹಳ್ಳಿ ಚಂದ್ರಶೇಖರ್

Karnataka Bus Strike: ಸರ್ಕಾರ 1.30 ಲಕ್ಷ ನೌಕರರ ಜೀವನದ ಕುರಿತು ಲಕ್ಷ್ಯ ವಹಿಸುತ್ತಿಲ್ಲ. ನಮ್ಮ ಜತೆ ಮಾತುಕತೆ ಮಾಡಲ್ಲ, ನಮ್ಮ ಸಮಸ್ಯೆ ಕೇಳಲ್ಲ ಎನ್ನುವುದು ತಪ್ಪು ನಿರ್ಧಾರ. ಸರ್ಕಾರಕ್ಕೆ ಚುನಾವಣೆಯೇ ಮುಖ್ಯವಾಗಿದೆ: ಕೋಡಿಹಳ್ಳಿ ಚಂದ್ರಶೇಖರ್

ಯುಗಾದಿ ಹಬ್ಬಕ್ಕೆ ಸಂಬಳ ನೀಡದೆ ವಂಚನೆ; ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೋಡಿಹಳ್ಳಿ ಚಂದ್ರಶೇಖರ್
ಕೋಡಿಹಳ್ಳಿ ಚಂದ್ರಶೇಖರ್
guruganesh bhat
|

Updated on: Apr 12, 2021 | 5:44 PM

Share

ಬೆಂಗಳೂರು: ಸಾರಿಗೆ ನೌಕರರಿಗೆ ಸಂಬಳ ನೀಡದೆ ಸರ್ಕಾರ ವಂಚಿಸಿದೆ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಉಪಚುನಾವಣೆ ಮುಖ್ಯವಾಗಿದೆ. 1.30 ಲಕ್ಷ ಸಾರಿಗೆ ನೌಕರರ ಜೀವನದ ಬಗ್ಗೆ ಲಕ್ಷ್ಯ ವಹಿಸಿಲ್ಲ. ಸಾರಿಗೆ ನೌಕರರ ಜತೆ ಮಾತಾಡಿಲ್ಲ, ಸಮಸ್ಯೆಯನ್ನು ಆಲಿಸುತ್ತಿಲ್ಲ. ಮಾತುಕತೆ ಮಾಡುವುದಿಲ್ಲ ಎನ್ನುವುದು ತಪ್ಪು ನಿರ್ಧಾರ. ನಾವು ಅಹಿಂಸಾತ್ಮಕವಾಗಿ ಹೋರಾಟ ಮುಂದುವರೆಸುತ್ತೇವೆ. ಜನರ ಸಮಸ್ಯೆಯನ್ನು ಕೇಳದಿರುವ ಸರ್ಕಾರ ಸರ್ಕಾರವೇ ಅಲ್ಲ. ನಾಳೆ ಯುಗಾದಿ ಹಬ್ಬ ಆಚರಿಸಬೇಕು. ಆದರೆ ಮಾರ್ಚ್ ತಿಂಗಳ ವೇತನ ನೀಡದೇ ಸರ್ಕಾರ ವಂಚನೆ ಮಾಡಿದೆ ಎಂದು ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸುದ್ದಿಗೋಷ್ಟಿ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಾಗರಿಕರ ಸಮಸ್ಯೆ ಕೇಳದ ಸರ್ಕಾರ ಸರ್ಕಾರವೇ ಅಲ್ಲ. ಸಾರಿಗೆ ಸಿಬ್ಬಂದಿಗಳು ಪ್ರತಿಭಟನೆ ಮುಂದುವರೆದರೂ ಕೂಡ ಸರ್ಕಾರ ಕ್ರಮ ಕೈಗೊಂಡಿಲ್ಲ. ಇದರ ಜೊತೆಗೆ ಸಂಬಳವನ್ನೂ ಕೊಟ್ಟಿಲ್ಲ. ನಾಳೆ ಯುಗಾದಿ ಹಬ್ಬ ಇದೆ . ವಿಪರ್ಯಾಸವೆಂದರೆ ಇದು ಮೊಂಡು ಧೋರಣೆ. ಹೀಗೆ ಜನರ ಸಮಸ್ಯೆ ಕೇಳದಿರುವ ಸರ್ಕಾರ ಸರ್ಕಾರವೇ ಅಲ್ಲ ಎಂದು ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಸರ್ಕಾರ 1.30 ಲಕ್ಷ ನೌಕರರ ಜೀವನದ ಕುರಿತು ಲಕ್ಷ್ಯ ವಹಿಸುತ್ತಿಲ್ಲ. ನಮ್ಮ ಜತೆ ಮಾತುಕತೆ ಮಾಡಲ್ಲ, ನಮ್ಮ ಸಮಸ್ಯೆ ಕೇಳಲ್ಲ ಎನ್ನುವುದು ತಪ್ಪು ನಿರ್ಧಾರ. ಸರ್ಕಾರಕ್ಕೆ ಚುನಾವಣೆಯೇ ಮುಖ್ಯವಾಗಿದೆ. ನಮ್ಮ ಕಷ್ಟ ಕೇಳೋದಿಲ್ಲ ಎನ್ನುತ್ತಿದೆ, ಇದು ಸರ್ಕಾರದ ತಪ್ಪು ನಿರ್ಧಾರ. ನಾವು ಅಹಿಂಸಾತ್ಮಕವಾಗಿ ಹೋರಾಟ ಮುಂದುವರೆಸುತ್ತೇವೆ ಎಂದು ಅವರು ಒತ್ತಿ ಹೇಳಿದರು.

ಇದನ್ನೂ ಓದಿ: ಕರ್ತವ್ಯಕ್ಕೆ ಹಾಜರಾದ 10,430 ಸಿಬ್ಬಂದಿಗೆ ಮಾರ್ಚ್ ತಿಂಗಳ ಸಂಬಳ ಪಾವತಿಸಿದ ಸಾರಿಗೆ ಸಂಸ್ಥೆ

ಸಾರಿಗೆ ಮುಷ್ಕರ; ಬಸ್​ಗಳಿಲ್ಲದೆ ಪರದಾಡುತ್ತಿದ್ದ ತಲ್ಸೇಮಿಯಾ ರೋಗಿಗೆ ನೆರವಾದ ಟಿವಿ9

(Kodihalli Chandrashekar says Karnataka govt. playing a cheap game in the matter of employees salary ahead of Ugadi 2021)

Follow Us
guruganesh bhat
guruganesh bhat
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?