ರೈತರ ಕರಾಳ ದಿನ ಆಚರಣೆಗೆ ಕೋಡಿಹಳ್ಳಿ ಕರೆ
ಫ್ರೀಡಂ ಪಾರ್ಕ್ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈತರ ಕರಾಳ ದಿನವಾಗಿ ಆಚರಣೆ ಮಾಡಲಾಗುತ್ತದೆ.

ಕೋಡಿಹಳ್ಳಿ ಚಂದ್ರಶೇಖರ್ (ಸಂಗ್ರಹ ಚಿತ್ರ)
ಬೆಂಗಳೂರು: ನಾಳೆ (ಜನವರಿ 30) ಮಹಾತ್ಮ ಗಾಂಧಿಜೀ ಹುತಾತ್ಮರಾದ ದಿನ. ಈ ಹಿನ್ನೆಲೆ ರೈತರ ಮೇಲೆ ನಡೆದಿರುವ ಹಲ್ಲೆ, ದೌರ್ಜನ್ಯವನ್ನು ಖಂಡಿಸಿ ರೈತರ ಕರಾಳ ದಿನವಾಗಿ ಆಚರಣೆ ಮಾಡಲು ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಕರೆ ನೀಡಿದ್ದಾರೆ.
ರಾಷ್ಟ್ರಪಿತ ಮಹಾತ್ಮ ಗಾಂಧಿಗೆ ನಮನ ಸಲ್ಲಿಸಿ ನಾಳೆ ಬೆಳಗ್ಗೆ 11-30ಕ್ಕೆ ಫ್ರೀಡಂ ಪಾರ್ಕ್ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈತರ ಕರಾಳ ದಿನವಾಗಿ ಆಚರಣೆ ಮಾಡಲಾಗುತ್ತದೆ. ರಾಜ್ಯದ ಎಲ್ಲಾ ಭಾಗಗಳಲ್ಲೂ ರೈತರು ಎಡಗೈಗೆ ಕಪ್ಪು ಬಟ್ಟೆಯ ಪಟ್ಟಿ ಧರಿಸಿ ಕರಾಳ ದಿನವಾಗಿ ಆಚರಣೆ ಮಾಡಿ ಎಂದು ತಿಳಿಸಿದ್ದಾರೆ.
ದ್ವಿತೀಯ PU ಪರೀಕ್ಷೆ ವೇಳಾಪಟ್ಟಿ ಪ್ರಕಟ: ಮೇ 24ರಿಂದ ಎಕ್ಸಾಂ ಶುರು
Follow Us