AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo | ಸುಪ್ರೀಂಕೋರ್ಟ್ ತೀರ್ಪು ಸ್ವಾಗತಿಸಿದ ಕೋಡಿಹಳ್ಳಿ ಚಂದ್ರಶೇಖರ್

ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ಸುಪ್ರೀಂಕೋರ್ಟ್ ತೀರ್ಪು ಸ್ವಾಗತಿಸಿ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿದ್ದಾರೆ.

Delhi Chalo | ಸುಪ್ರೀಂಕೋರ್ಟ್ ತೀರ್ಪು ಸ್ವಾಗತಿಸಿದ ಕೋಡಿಹಳ್ಳಿ ಚಂದ್ರಶೇಖರ್
ಕೋಡಿಹಳ್ಳಿ ಚಂದ್ರಶೇಖರ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Apr 06, 2022 | 9:10 PM

Share

ತುಮಕೂರು: ಸರ್ಕಾರಕ್ಕೆ ಕಿವಿ ಹಿಂಡುವ ಕೆಲಸವನ್ನು ಸುಪ್ರೀಂ ಕೋರ್ಟ್​​ ಮಾಡಿದೆ. ಕೇಂದ್ರ ಸರ್ಕಾರ ಮಾಡಿರುವ ತಪ್ಪನ್ನು ತಿದ್ದಿ ಬುದ್ಧಿ ಹೇಳಿದೆ. ಸಮಿತಿ ರಚಿಸಿ ಪರಿಹಾರ ಕಂಡುಕೊಳ್ಳಬೇಕೆಂದು ಸೂಚಿಸಿದೆ. ಸುಪ್ರೀಂಕೋರ್ಟ್ ಮಾಡಿರುವ ನಿರ್ಧಾರ ಸರಿಯಾಗಿದೆ ಎಂದು ಇಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ಸುಪ್ರೀಂಕೋರ್ಟ್ ತೀರ್ಪು ಸ್ವಾಗತಿಸಿ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿದ್ದಾರೆ. ಕೇಂದ್ರ ಸರ್ಕಾರ ಈಗ ತಂದಿರುವ ಕಾನೂನು ಪ್ರಜಾಸತ್ತಾತ್ಮಕವಾಗಿಲ್ಲ. ಸರ್ಕಾರದ ಕಾನೂನನ್ನು ತಡೆಹಿಡಿಯಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸುಗ್ರೀವಾಜ್ಞೆ ಯಾವಾಗಲೂ ಪ್ರಜಾಸತ್ತಾತ್ಮಕವಲ್ಲ. ಯಾವುದೇ ಕಾನೂನು ತರುವುದಕ್ಕಿಂತ ಮುಂಚೆ ದೇಶದೊಳಗೆ ಅದನ್ನು ಚರ್ಚೆಗೆ ಒಳಪಡಿಸಬೇಕು. ವಿಧಾನಸಭೆ ಮತ್ತು ಸಂಸತ್​ನಲ್ಲಿ ಚರ್ಚೆ ಬಳಿಕ ಅದು ಕಾನೂನು ಆಗಬೇಕು. ಇದೀಗ ಕೋರ್ಟ್, ರೈತರನ್ನು ಒಳಗೊಂಡ ಸಮಿತಿ ಮಾಡಿ, ಪರಿಹಾರ ಕಂಡುಕೊಳ್ಳಬೇಕು. ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಸರ್ಕಾರಕ್ಕೆ ಚಾಟಿ ಬೀಸಿದೆ. ಈ ಮೂಲಕ ಭಾರತ ಸರ್ಕಾರ ತಪ್ಪು ಮಾಡಿರುವುದನ್ನು ತಿದ್ದಿ ಬುದ್ಧಿ ಹೇಳಿದೆ ಎಂದು ವಿಶ್ಲೇಷಿಸಿದ್ದಾರೆ.

ಈ ಕಾರಣಕ್ಕೆ ಕೇಂದ್ರ ಸರ್ಕಾರ ತಕ್ಷಣ ಕಾರ್ಯೋನ್ಮುಖ ಆಗಬೇಕು. ಇಲ್ಲದಿದ್ದಲ್ಲಿ ದೇಶದ ರೈತರ ವಿರೋಧ ಕಟ್ಟಿಕೊಂಡು, ಆಡಳಿತ ತಪ್ಪು ದಾರಿಗೆ ಕೊಂಡೊಯ್ಯಲು ಕಾರಣವಾಗುತ್ತದೆ ಎಂದು ಹೇಳಿದ್ದಾರೆ. ಸರ್ಕಾರದ ಮಂದ ಧೋರಣೆ ಮುಂದುವರೆದರೆ, ಸುಪ್ರೀಂ ಕೋರ್ಟ್ ತನ್ನ ಆದೇಶ ಎತ್ತಿಹಿಡಿಯಬೇಕು. ಹಾಗೆಂದು ನಾವು, ನ್ಯಾಯಾಲಯವನ್ನು ಮನವಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ ಸಂದರ್ಶನ | ನಾನು ಸೂಟ್​ಕೇಸ್​ ಗಿರಾಕಿ ಅಲ್ಲ, ಹಾಗಾಗಿ ಪ್ರಭುತ್ವ ಹೆದರುತ್ತೆ

Published On - 7:25 pm, Mon, 11 January 21

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ