Kodi Mutt Swamiji: ಕರ್ನಾಟಕದಲ್ಲಿ ಜಲಪ್ರಳಯ, ಜಾಗತಿಕ ಮಟ್ಟದಲ್ಲಿ ದೊಡ್ಡ ದುರಂತ; ಕೋಡಿಮಠ ಶ್ರೀ ಭವಿಷ್ಯ

ಈ ಬಾರಿ ರಾಜ್ಯದಲ್ಲಿ ಸಾಕಷ್ಟು ಮಳೆ ಬರಲಿದೆ. ಜಲಪ್ರಳಯ ಆಗುವ ಲಕ್ಷಣ ಇದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

Kodi Mutt Swamiji: ಕರ್ನಾಟಕದಲ್ಲಿ ಜಲಪ್ರಳಯ, ಜಾಗತಿಕ ಮಟ್ಟದಲ್ಲಿ ದೊಡ್ಡ ದುರಂತ; ಕೋಡಿಮಠ ಶ್ರೀ ಭವಿಷ್ಯ
ಕೋಡಿಮಠ ಶ್ರೀ
Follow us
| Updated By: ಗಣಪತಿ ಶರ್ಮ

Updated on:Jul 01, 2023 | 2:51 PM

ಹುಬ್ಬಳ್ಳಿ: ಕರ್ನಾಟಕದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ, ಸ್ಥಿರ ಸರ್ಕಾರ ರಚನೆಯಾಗಲಿದೆ ಎಂದು ಚುನಾವಣಾಪೂರ್ವದಲ್ಲಿ ಭವಿಷ್ಯ ನುಡಿದಿದ್ದ ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ (Kodi Mutt Swamiji) ಇದೀಗ ಸ್ಫೋಟಕ ಭವಿಷ್ಯವೊಂದನ್ನು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಒಂದು ಪಕ್ಷದ ಸರ್ಕಾರ ಬರಲಿದೆ, ಸ್ಥಿರ ಸರ್ಕಾರ ರಚನೆಯಾಗಲಿದೆ ಎಂಬುದಾಗಿ ಹೇಳಿದ್ದೆ. ಅದು ನಿಜ ಆಗಿದೆ. ಈ ಬಾರಿ ರಾಜ್ಯದಲ್ಲಿ ಸಾಕಷ್ಟು ಮಳೆ ಬರಲಿದೆ. ಜಲಪ್ರಳಯ ಆಗುವ ಲಕ್ಷಣ ಇದೆ ಎಂದು ಭವಿಷ್ಯ ನುಡಿದಿದ್ದಾರೆ.

ಜಾಗತಿಕ ಮಟ್ಟದಲ್ಲಿ ದುರಂತ; ಕೋಡಿಮಠ ಶ್ರೀ

ಜಾಗತಿಕ ಮಟ್ಟದಲ್ಲಿ ಮೂರು ಗಂಡಾಂತರಗಳು ನಡೆಯಲಿವೆ. ಒಂದೆರಡು ರಾಷ್ಟಗಳು ಮುಚ್ಚಿ ಹೋಗಲಿವೆ ಎಂದು ಶ್ರೀಗಳು ಹೇಳಿದ್ದಾರೆ. ಜನರ ಅಕಾಲಿಕ ಮೃತ್ಯು ಆಗುವ ಸೂಚನೆ ಇದೆ. ವಿಜಯದಶಮಿಯಿಂದ ಸಂಕ್ರಾಂತಿವರೆಗೆ ಜಗತ್ತಿನಲ್ಲಿ ದುರ್ಘಟನೆಗಳು ನಡೆಯಲಿವೆ. ಆಳುವವರು ಅರಿತರೆ ಗಂಡಾತರದಿಂದ ಪಾರಾಗಬಹುದು. ಇಲ್ಲವಾದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಕೋಡಿಮಠ ಶ್ರೀ ಹೇಳಿದ್ದಾರೆ.

ಕರುನಾಡಿಗೆ ಇದೆ ಆಪತ್ತು; ಕೋಡಿಮಠ ಸ್ವಾಮೀಜಿ

ಕರುನಾಡಿಗೆ ಕೆಲವೊಂದು ಆಪತ್ತುಗಳು ಇವೆ. ಕೆಲ ಸಾವು ನೋವುಗಳು ಆಗಲಿವೆ. ಆದರೆ, ದೈವ ಕೃಪೆಯಿಂದ ಪಾರಾಗಬಹುದು. ಭಾರತದಲ್ಲಿ ನಾನು ಹೇಳಿದಂಥ ಒಂದು ಘಟನೆ ಸಂಭವಿಸಲಿದೆ. ತಪ್ಪಿಸುವ ಹೊಣೆಗಾರಿಕೆ ಆಳುವವರ ಕೈಯಲ್ಲಿದೆ ಎಂದು ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಜಗತ್ತಿನ ಸಾಮ್ರಾಟರು ತಲ್ಲಣಗೊಳ್ಳಲಿದ್ದಾರೆ. ಬಡವರಿಗೆ ಗ್ಯಾರಂಟಿ ಒಳ್ಳೆಯದೇ. ಯಾವ ಹೆಣ್ಣಿಗೆ ಸ್ವತಂತ್ರ ಇರಲಿಲ್ಲವೋ ಅಂಥ ಹೆಣ್ಣು ಈಗ ಸ್ವತಂತ್ರವಾಗಿ ಹೊರಗಡೆ ಬರುವಂತಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮತೀಯ ಗಲಭೆ ಆಗುತ್ತೆ ಅಂತಾ ಹೇಳಿದ್ದೆ, ಸಾವು ನೋವು ಆಗುತ್ತೆ ಅಂದಿದ್ದೆ ಅದು ಆಗ್ತಿದೆ ಎಂದ ಕೋಡಿಮಠ ಸ್ವಾಮೀಜಿ

ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಅಧಿಕಾರ ನಡೆಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬಾಯಿಯ ವಾಸನೆ ಮೂಗಿಗೆ ಬಡಿಯುವುದಿಲ್ಲ, ಆದರೆ ಊರಿನಲ್ಲಿನ ಎಲ್ಲಾ ವಾಸನೆ ಮೂಗಿಗೆ ಬರುತ್ತದೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:37 pm, Sat, 1 July 23

ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ