AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲಾರದ ಗಾರ್ಮೆಂಟ್ಸ್​ನಲ್ಲಿ 33 ಉದ್ಯೋಗಿಗಳಿಗೆ ಕೊರೊನಾ ಪಾಸಿಟಿವ್

ಕೋಲಾರ ತಾಲ್ಲೂಕು ಬೆತ್ತನಿ ಗ್ರಾಮದ ಬಳಿ ಇರುವ ಶಾಹಿ ಗಾರ್ಮೆಂಟ್ಸ್​ನ 33 ಉದ್ಯೋಗಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊಲಾರದ ಗಾರ್ಮೆಂಟ್ಸ್​ನಲ್ಲಿ 33 ಉದ್ಯೋಗಿಗಳಿಗೆ ಕೊರೊನಾ ಪಾಸಿಟಿವ್
ಸಂಗ್ರಹ ಚಿತ್ರ
Skanda
| Edited By: |

Updated on:Apr 05, 2021 | 9:03 AM

Share

ಕೋಲಾರ: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು ಹಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ವೇಗವಾಗಿ ಹಬ್ಬಲು ಆರಂಭಿಸಿದೆ. ಕೋಲಾರ ತಾಲ್ಲೂಕು ಬೆತ್ತನಿ ಗ್ರಾಮದ ಬಳಿ ಇರುವ ಶಾಹಿ ಗಾರ್ಮೆಂಟ್ಸ್​ನ 33 ಉದ್ಯೋಗಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾರ್ಮೆಂಟ್ಸ್​ನ ಒಟ್ಟು 900 ಜನರಿಗೆ ಕೊವಿಡ್​ ಟೆಸ್ಟ್​ ಮಾಡಿಸಲಾಗಿದ್ದು, ಆ ಪೈಕಿ 33 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ.

ಕೊರೊನಾ ಸೋಂಕಿಗೆ ತುತ್ತಾದವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದವರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ. ಆ ಮೂಲಕ ಸೋಂಕು ಹಬ್ಬುವುದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಾರಿಣಿ ಮಾಹಿತಿ ನೀಡಿದ್ದಾರೆ.

ಅನಾಥಾಶ್ರಮದ 27 ಮಕ್ಕಳಿಗೆ ಕೊರೊನಾ ಸೋಂಕು ಇನ್ನೊಂದೆಡೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಅತ್ತಿಗಿರಿಕುಪ್ಪ ಬಳಿಯಿರುವ ಅನಾಥಾಶ್ರಮದ 27 ಮಕ್ಕಳಿಗೆ ಕೊವಿಡ್​ ಸೋಂಕು ದೃಢಪಟ್ಟಿದ್ದು, ಆತಂಕ ಮೂಡಿಸಿದೆ. ಅನಾಥಾಶ್ರಮದ ಒಬ್ಬ ವಿದ್ಯಾರ್ಥಿನಿಗೆ ಕೆಮ್ಮು, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಲ್ಲಾ ಮಕ್ಕಳಿಗೂ ಕೊವಿಡ್ ಟೆಸ್ಟ್ ಮಾಡಿಸಲಾಗಿದೆ. ಬಜೇರಿಯಾ ಟ್ರಸ್ಟ್​ನಿಂದ ನಡೆಸುತ್ತಿರುವ ಅನಾಥಾಶ್ರಮದಲ್ಲಿ 60ಕ್ಕೂ ಹೆಚ್ಚು ಮಕ್ಕಳಿದ್ದು, ಆ ಪೈಕಿ 27 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ಪಾಸಿಟಿವ್​ ಬಂದ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಆಶ್ರಮವನ್ನು ಕಂಟೈನ್ಮೆಂಟ್​ ಜೋನ್ ಮಾಡಿದ್ದಾರೆ.

ಇದನ್ನೂ ಓದಿ: ಕೋಲಾರದ ಅನಾಥಾಶ್ರಮದಲ್ಲಿನ 27 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ 

ಕೊರೊನಾ ವಿರುದ್ಧ ಸೂಕ್ತ ನಡವಳಿಕೆಯ ಬಗ್ಗೆ ಏಪ್ರಿಲ್ 6ರಿಂದ 21ರವರೆಗೆ ಜಾಗೃತಿ ಅಭಿಯಾನ: ಪ್ರಧಾನಿ ನರೇಂದ್ರ ಮೋದಿ

Published On - 9:03 am, Mon, 5 April 21

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ