Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಬೆಸ್ಕಾಂ ಸಬ್ ಸ್ಟೇಷನ್​ನಲ್ಲಿ ಭಾರಿ ಅಗ್ನಿ ಅವಘಡ; ಎರಡು ದಿನ ವಿದ್ಯುತ್ ವ್ಯತ್ಯಯ

ಇಡೀ ಕೋಲಾರ ಜಿಲ್ಲೆಗೆ ವಿದ್ಯುತ್ ಪೂರೈಸುವ ಬೆಸ್ಕಾಂ ಸಬ್ ಸ್ಟೇಷನ್, ಕೊರೊನಾ‌ ಲಾಕ್​ಡೌನ್​ನಿಂದಾಗಿ ಸರಿಯಾದ ನಿರ್ವಹಣೆ ಇಲ್ಲದ ವಿದ್ಯುತ್ ಪರಿವರ್ತಕವೊಂದು ಹೊತ್ತಿ ಉರಿದಿದೆ.

ಕೋಲಾರ: ಬೆಸ್ಕಾಂ ಸಬ್ ಸ್ಟೇಷನ್​ನಲ್ಲಿ ಭಾರಿ ಅಗ್ನಿ ಅವಘಡ; ಎರಡು ದಿನ ವಿದ್ಯುತ್ ವ್ಯತ್ಯಯ
ಕೋಲಾರ ಅಗ್ನಿ ಅವಘಡ
Follow us
TV9 Web
| Updated By: ಆಯೇಷಾ ಬಾನು

Updated on: Jul 04, 2021 | 6:55 AM

ಕೋಲಾರ: ಕೋಲಾರದ ಬೆಸ್ಕಾಂ ಸಬ್ ಸ್ಟೇಷನ್‌ನಲ್ಲಿ ಅಗ್ನಿ ಆಕಸ್ಮಿಕ ಉಂಟಾಗಿದೆ. ಮಹಾಲಕ್ಷ್ಮೀ ಬಡಾವಣೆ ಬಳಿಯಿರುವ ಸಬ್ ಸ್ಟೇಷನ್​ನಲ್ಲಿ ಟ್ರಾನ್ಸ್‌ಫಾರ್ಮರ್, ಎಲೆಕ್ಟ್ರಾನಿಕ್ ಉಪಕರಣ ಸುಟ್ಟು ಭಸ್ಮವಾಗಿದೆ. ಕೋಲಾರ ಬೆಸ್ಕಾಂ ಸಬ್ ಸ್ಟೇಷನ್‌ನಲ್ಲಿ ಅಗ್ನಿ ಅವಘಡ ಪ್ರಕರಣದಿಂದ ಕೋಲಾರ ನಗರದಲ್ಲಿ ಎರಡು ದಿನ ವಿದ್ಯುತ್​ ವ್ಯತ್ಯಯ ಆಗಲಿದೆ ಎಂದು ಮಾಹಿತಿ ಲಭ್ಯವಾಗಿದೆ. 7 ಕೋಟಿ ಮೌಲ್ಯದ ವಿದ್ಯುತ್ ಪರಿವರ್ತಕ ಬೆಂಕಿಗಾಹುತಿ ಆಗಿದ್ದು, ಈ ಸಮಸ್ಯೆ ತಲೆದೋರಿದೆ.

ಇಡೀ ಕೋಲಾರ ಜಿಲ್ಲೆಗೆ ವಿದ್ಯುತ್ ಪೂರೈಸುವ ಬೆಸ್ಕಾಂ ಸಬ್ ಸ್ಟೇಷನ್, ಕೊರೊನಾ‌ ಲಾಕ್​ಡೌನ್​ನಿಂದಾಗಿ ಸರಿಯಾದ ನಿರ್ವಹಣೆ ಇಲ್ಲದ ವಿದ್ಯುತ್ ಪರಿವರ್ತಕವೊಂದು ಹೊತ್ತಿ ಉರಿದಿದೆ. ಪರಿಣಾಮ ಬೆಂಕಿಯ ತೀವ್ರತೆಗೆ, ದಟ್ಟವಾದ ಹೊಗೆ ಆವರಿಸಿದ ಹಿನ್ನೆಲೆ ಇಡೀ ಕೋಲಾರ ನಗರದ ಜನರಲ್ಲಿ ಆತಂಕ ಮನೆ ಮಾಡಿದ್ದು, ಇದೀಗ ವಿದ್ಯುತ್ ವ್ಯತ್ಯಯ ಸಮಸ್ಯೆಯೂ ಕಂಡುಬಂದಿದೆ.

ಮತ್ತೊಂದೆಡೆ, ಸತತ ಎರಡೂವರೆ ಗಂಟೆಗಳ ಕಾರ್ಯಾಚರಣೆಯಲ್ಲಿ ಬೆಂಕಿ ನಂದಿಸಿ, ಮುಂದೆ ಉಂಟಾಗಬಹುದಾಗಿದ್ದ ಭಾರಿ ಅನಾಹುತವನ್ನು ತಪ್ಪಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ತಪ್ಪಿಸಿದ್ದಾರೆ. ಮದ್ಯಾಹ್ನ 2.30 ಗಂಟೆ ಸುಮಾರಿಗೆ ನಿರ್ವಹಣೆ ಇಲ್ಲದೆ ಕಾರಣ ಸುಮಾರು 5 ಲಕ್ಷ ಮೌಲ್ಯದ 100 ಎಂ.ವಿ. ವಿದ್ಯುತ್ ಪರಿವರ್ತಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಬೃಹತ್ ಪ್ರಮಾಣದ ಬೆಂಕಿ ಹಾಗೂ ಹೊಗೆ ಕೋಲಾರ ನಗರವನ್ನು ಆವರಿಸಿದೆ.

ಟ್ರಾನ್ಸಫಾರ್ಮರ್ ನಲ್ಲಿದ್ದ ಆಯಿಲ್ ಹೊತ್ತಿ ಉರಿದ ಪರಿಣಾಮ ಬೆಂಕಿಯ ಕೆನ್ನಾಲಿಗೆ ಇಡೀ ಸಬ್ ಸ್ಟೇಷನ್ ಆಹುತಿಯಾಗುವ ಆತಂಕ ಎದುರಾಗಿತ್ತು. ಮಾತ್ರವಲ್ಲದೆ ಆಕಾಶದೆತ್ತರಕ್ಕೆ ಹೊಗೆ ಆವರಸಿದ ಹಿನ್ನೆಲೆ ಕೋಲಾರ ಜನರು ಬೆಂಕಿ ಅವಘಡಕ್ಕೆ ಬೆಚ್ಚಿ ಬಿದ್ದಿದ್ದರು. ಜೊತೆಗೆ, ಸುಮಾರು 5 ಕೋಟಿ ಮೌಲ್ಯದ ವಿದ್ಯುತ್ ಪರಿವರ್ತಕ ಕೊರೊನಾದಿಂದ ನಿರ್ವಹಣೆ ಇಲ್ಲದೆ ಬೆಂಕಿ ಹೊತ್ತಿಕೊಂಡು ಇಷ್ಟೆಲ್ಲಾ ಅವಘಡ ಸಂಭವಿಸಿದೆ. ಪರಿಣಾಮ ಜಿಲ್ಲೆಯ ಹಲವು ಸಬ್ ಸ್ಟೇಷನ್‌ಗಳಿಗೆ ವಿದ್ಯುತ್ ಇಲ್ಲದ ಹಿನ್ನೆಲೆ ಇನ್ನೇರೆಡು ದಿನ ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಎಂಜಿನಿಯರ್ ತಿಖಿಸಿದ್ದಾರೆ.

Kolar Fire Accident

ಕೋಲಾರ ಅಗ್ನಿ ಅವಘಡದ ದೃಶ್ಯ

ಇಡೀ ಸಬ್ ಸ್ಟೇಷನ್‌ನಲ್ಲಿದ್ದ ವಿದ್ಯುತ್ ಪರಿಕರಗಳು ಸುಟ್ಟು ಕರಕಲಾಗುವ ಭಯವೂ ಇಲಾಖೆ ಅಧಿಕಾರಿಗಳಲ್ಲಿ ಎದುರಾಗಿತ್ತು. ಕೂಡಲೆ ಸ್ಥಳಕ್ಕೆ ಆಗಮಿಸಿದ 5 ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳ ಸಮೇತ ಸುಮಾರು 20 ಕ್ಕೂ ಹೆಚ್ಚು ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಎರಡುವರೆ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನ ಸಂಪೂರ್ಣವಾಗಿ ನಂದಿಸಿದ್ದಾರೆ. ಸದ್ಯ ಒಟ್ಟು 20 ಕೋಟಿಯಷ್ಟು ಮೊತ್ತದ ಉಪಕರಣಗಳು ಅಗ್ನಿ ಅವಘಡದಲ್ಲಿ ನಷ್ಟವಾಗಿರುವ ಅಂದಾಜು ಮಾಡಲಾಗಿದ್ದು, ಬೆಸ್ಕಾಂ ಇಲಾಖೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ: CM BSY on Kissan Rail : ಕಿಸಾನ್‌ ರೈಲಿನಿಂದಾಗಿ ಕೋಲಾರ ಭಾಗದ ರೈತರ ಬೆಳೆಗೆ ಬಂಪರ್‌ ಲಾಭ ಸಿಗಲಿದೆ: ಸಿಎಂ ಬಿಎಸ್‌ವೈ

Chescom: ವಿದ್ಯುತ್ ಸ್ಪರ್ಶಿಸಿ ಕಂಬದಲ್ಲಿಯೇ ನರಳಾಟ; ಗ್ರಾಮಸ್ಥರ ಸಮಯಪ್ರಜ್ಞೆಯಿಂದ ಬದುಕುಳಿದ ಲೈನ್‌ಮನ್

ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!