AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಪುರದ ಕ್ಯಾಸಿನೊ ಮೇಲೆ ಪೊಲೀಸ್​ ದಾಳಿ ಪ್ರಕರಣ: ಬಂಧನಕ್ಕೊಳಗಾದ ಕೋಲಾರದ ಶಿಕ್ಷಕಗೆ ಷೋ ಕಾಸ್​ ನೋಟಿಸ್​ ಜಾರಿ

ಪ್ರಕರಣದ FIR ಪ್ರತಿ ಇನ್ನೂ ತಮಗೆ ದೊರೆತಿಲ್ಲ. ಹಾಗಾಗಿ ಸದ್ಯಕ್ಕೆ ​​ಶಿಕ್ಷಕ ರಮೇಶ್ ಗೆ ಷೋ ಕಾಸ್​ ನೋಟಿಸ್​ ಸರ್ವ್​ ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೃಷ್ಣಮೂರ್ತಿ ಅವರು ಟಿವಿ9 ಗೆ ಸ್ಪಷ್ಟನೆ ನೀಡಿದ್ದಾರೆ.

ಜೈಪುರದ ಕ್ಯಾಸಿನೊ ಮೇಲೆ ಪೊಲೀಸ್​ ದಾಳಿ ಪ್ರಕರಣ: ಬಂಧನಕ್ಕೊಳಗಾದ ಕೋಲಾರದ ಶಿಕ್ಷಕಗೆ ಷೋ ಕಾಸ್​ ನೋಟಿಸ್​ ಜಾರಿ
ಅಮಾನತು ಆದ ಶಿಕ್ಷಕ ರಮೇಶ್
TV9 Web
| Edited By: |

Updated on:Aug 23, 2022 | 6:12 PM

Share

ಕೋಲಾರ: ಜೈಪುರದ ಕ್ಯಾಸಿನೊ ಮೇಲೆ ಸೈಬರ್​ ಕ್ರೈಂ ಪೊಲೀಸರ ದಾಳಿ ವೇಳೆ ಜಿಲ್ಲೆಯ ತೇರಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೂಡ ಬಂಧನವಾಗಿದೆ. ಆದರೆ ಈ ಪ್ರಕರಣದ FIR ಪ್ರತಿ ಇನ್ನೂ ತಮಗೆ ದೊರೆತಿಲ್ಲ. ಹಾಗಾಗಿ ಸದ್ಯಕ್ಕೆ ​​ಶಿಕ್ಷಕ ರಮೇಶ್ ಗೆ ಷೋ ಕಾಸ್​ ನೋಟಿಸ್​ ಸರ್ವ್​ ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೃಷ್ಣಮೂರ್ತಿ ಅವರು ಟಿವಿ9 ಗೆ ಸ್ಪಷ್ಟನೆ ನೀಡಿದ್ದಾರೆ. ಆದರೆ, ಪ್ರಕರಣ ಸಂಬಂಧ ನಿನ್ನೆಯೇ ಸರ್ಕಲ್ ಇನ್ಸ್​​ಪೆಕ್ಟರ್​​​​ ಆಂಜಿನಪ್ಪ​​ ಅವರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.

ಪ್ರಕರಣದ ಹಿನ್ನೆಲೆ ಏನು? 

ಕ್ಯಾಸಿನೊ ಹಾಗೂ ಅಶ್ಲೀಲ ನೃತ್ಯ ನಡೆಯುತ್ತಿದ್ದ ಜೈಪುರದ ಸಾಯಿಪುರ ಫಾರ್ಮ್​ ಹೌಸ್​​ ಮೇಲೆ ಜೈಪುರದ ಸ್ಪೆಷಲ್​ ಕ್ರೈಂ ಬ್ರಾಂಚ್​ ಪೊಲೀಸರು ರೇಡ್​ ಮಾಡಿದ್ದಾರೆ. ದೆಹಲಿ ಮೂಲದ ಈವೆಂಟ್​ ಕಂಪನಿ ಹೈಪ್ರೊಪೈಲ್​ ಪಾರ್ಟಿ ಆಯೋಜಿಸಿತ್ತು. ಈ ಪಾರ್ಟಿಗೆ ತಲಾ 2 ಲಕ್ಷ ರೂಪಾಯಿ ಚಾರ್ಜ್​ ಮಾಡಲಾಗಿತ್ತು. ಈ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ 84 ಜನರನ್ನು ಪೊಲೀಸರು ಬಂಧಿಸಿದ್ದಾರೆ.  ಕೋಲಾರದ 5 ಜನ ಸೇರಿ ಕರ್ನಾಟಕದ ಒಟ್ಟು ಏಳು ಜನ ಸರ್ಕಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಿಕ್ಕಿ ಬಿದ್ದಿದ್ದಾರೆ. ಕೋಲಾರದ ಸೈಬರ್​ ಕ್ರೈಂ ಇನ್ಪೆಕ್ಟರ್ ಆಂಜಿನಪ್ಪ, ಶಿಕ್ಷಕ ರಮೇಶ್​, ವ್ಯಾಪಾರಿ ಸುಧಾಕರ್​, ಕೋಲಾರ ನಗರಸಭೆ ಸದಸ್ಯ ಸತೀಶ್​, ಹಾಗೂ ಬಿಜೆಪಿ ಮುಖಂಡ ರಾಜೇಶ್​, ಕೆಎಎಸ್​ ಅಧಿಕಾರಿ ಶ್ರೀನಾಥ್​ ಮತ್ತು ಆರ್​ಟಿಒ ಇಲಾಖೆ ಸಿಬ್ಬಂದಿ ಶಬರೀಶ್ ಬಂಧಿತರಾಗಿದ್ದಾರೆ. ದಾಳಿ ವೇಳೆ 14 ವಿಲಾಸಿ ಕಾರುಗಳು, 1 ಟ್ರಕ್​ ಸೇರಿದಂತೆ, ಹಾಗೂ ಹುಕ್ಕಾ ಪಾಟ್​ಗಳು ಫಾರಿನ್​ ಡ್ರಿಂಕ್ಸ್​ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:21 pm, Tue, 23 August 22

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ