AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಠಿಕಾಣಿ ಹೂಡಿ ಅಪಾರ ಆಸ್ತಿಪಾಸ್ತಿ ಮಾಡಿಕೊಂಡಿದ್ದ ಆರೋಗ್ಯಾಧಿಕಾರಿ ಕೊನೆಗೂ ಸಸ್ಪೆಂಡ್

ಡಿಹೆಚ್​ಒ ಕಚೇರಿಯಲ್ಲಿ 22 ಎಸಿಬಿ ಅಧಿಕಾರಿಗಳಿಂದ ತಲಾಶ್ ನಡೆದಿತ್ತು: ಕಳೆದ ಜನವರಿ 2ರಂದು ಡಾ. ವಿಜಯಕುಮಾರಗೆ ಸೇರಿದ ಹಲವಾರು ಜಾಗಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಿಢೀರ್​ ದಾಳಿ ನಡೆಸಿತ್ತು. ಆ ವೇಳೆ ಐದು ವರ್ಷದಿಂದ ಕೋಲಾರದಲ್ಲಿಯೇ ಸೇವೆ ಸಲ್ಲಿಸುತ್ತಿದ್ದ ಭ್ರಷ್ಟಾತಿಭ್ರಷ್ಟ ಡಾ. ವಿಜಯಕುಮಾರ್ ಸಿಕ್ಕಿಬಿದ್ದಿದ್ದರು.

ಕೋಲಾರದಲ್ಲಿ ಠಿಕಾಣಿ ಹೂಡಿ ಅಪಾರ ಆಸ್ತಿಪಾಸ್ತಿ ಮಾಡಿಕೊಂಡಿದ್ದ ಆರೋಗ್ಯಾಧಿಕಾರಿ ಕೊನೆಗೂ ಸಸ್ಪೆಂಡ್
ಕೋಲಾರದಲ್ಲಿ ಹಲವಾರು ವರ್ಷಗಳಿಂದ ಠಿಕಾಣಿ ಹೂಡಿ ಅಪಾರ ಆಸ್ತಿಪಾಸ್ತಿ ಮಾಡಿಕೊಂಡಿದ್ದ ಆರೋಗ್ಯಾಧಿಕಾರಿ ಕೊನೆಗೂ ಸಸ್ಪೆಂಡ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:May 15, 2021 | 7:21 PM

Share

ಕೋಲಾರ: ಕೋಲಾರದಲ್ಲಿ ಹಲವಾರು ವರ್ಷಗಳಿಂದ ಠಿಕಾಣಿ ಹೂಡಿ, ಅಪಾರ ಆಸ್ತಿಪಾಸ್ತಿ ಮಾಡಿಕೊಂಡಿದ್ದ ಆರೋಗ್ಯಾಧಿಕಾರಿ ಕೊನೆಗೂ ಸಸ್ಪೆಂಡ್ ಆಗಿದ್ದಾರೆ. ಕೋಲಾರ ಡಿಹೆಚ್‌ಒ ಡಾ. ವಿಜಯಕುಮಾರ್ ಅಮಾನತುಗೊಂಡ ಭ್ರಷ್ಟ ಮನುಷ್ಯ. ಆದಾಯ ಮೀರಿ ಆಸ್ತಿ ಗಳಿಕೆ ಹಿನ್ನೆಲೆ ಸರ್ಕಾರ ಈ ಕ್ರಮ ಕೈಗೊಂಡಿದೆ. ಜನವರಿ 2ರಂದು ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾಗ ಭ್ರಷ್ಟ ವಿಜಯಕುಮಾರ್ ಆದಾಯಕ್ಕಿಂತ 343 ಪಟ್ಟು ಹೆಚ್ಚು ಆಸ್ತಿಪಾಸ್ತಿ ಮಾಡಿಕೊಂಡಿರುವುದು ಪತ್ತೆಯಾಗಿತ್ತು.

ಡಿಹೆಚ್​ಒ ಕಚೇರಿಯಲ್ಲಿ 22 ಎಸಿಬಿ ಅಧಿಕಾರಿಗಳಿಂದ ತಲಾಶ್ ನಡೆದಿತ್ತು: ಕಳೆದ ಜನವರಿ 2ರಂದು ಡಾ. ವಿಜಯಕುಮಾರಗೆ ಸೇರಿದ ಹಲವಾರು ಜಾಗಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಿಢೀರ್​ ದಾಳಿ ನಡೆಸಿತ್ತು. ಆ ವೇಳೆ ಐದು ವರ್ಷದಿಂದ ಕೋಲಾರದಲ್ಲಿಯೇ ಸೇವೆ ಸಲ್ಲಿಸುತ್ತಿದ್ದ ಭ್ರಷ್ಟಾತಿಭ್ರಷ್ಟ ಡಾ. ವಿಜಯಕುಮಾರ್ ಸಿಕ್ಕಿಬಿದ್ದಿದ್ದರು. ಅವರಲ್ಲಿ ಡಾ. ವಿಜಯಕುಮಾರ್ ಸಹ ಒಬ್ಬರು. ಈತ ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಡಾ. ವಿಜಯಕುಮಾರ್​ನನ್ನು ಆದಾಯ ಮೀರಿ ಆಸ್ತಿ ಗಳಿಸಿರುವ ಆರೋಪ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ. ತನ್ನ ಅಧಿಕೃತ ಆದಾಯಕ್ಕಿಂತ ಶೇ.343 ರಷ್ಟು ಹೆಚ್ಚಿನ ಅಕ್ರಮ ಆಸ್ತಿ ಗಳಿಸಿರುವ ಆಪಾದನೆ ಈತನ ಮೇಲಿತ್ತು.

(kolar dho dr vijaykumar suspended after acb raid on him on january 2)

Published On - 5:46 pm, Sat, 15 May 21

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು