AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolar Oxygen Shortage Death| ಜಿಲ್ಲಾ ಶಸ್ತ್ರಚಿಕಿತ್ಸಕ ಸಸ್ಪೆಂಡ್, ತನಿಖೆಗೆ ಸೂಚಿಸಿದ ಸಚಿವ ಸುಧಾಕರ್

ಕೋಲಾರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಬಳಿಕ ಡಾ.ಕೆ.ಸುಧಾಕರ್, ಆಸ್ಪತ್ರೆಯಲ್ಲಿ 40 ವೆಂಟಿಲೇಟರ್ ಇದ್ರೂ ಬಳಸ್ತಿಲ್ಲ, ಇದು ದೊಡ್ಡ ಅಪರಾಧ. ವೆಂಟಿಲೇಟರ್ ಬಳಸಿದ್ರೆ ಕನಿಷ್ಠ 40 ಜನರನ್ನ ಉಳಿಸಬಹುದಿತ್ತು. ಆಸ್ಪತ್ರೆಯಲ್ಲಿ ಸಾಕಷ್ಟು ಲೋಪದೋಷಗಳಿವೆ ಎಂದು ಸುಧಾಕರ್ ಆಸ್ಪತ್ರೆ ವಿರುದ್ಧ ಹಾಗೂ ಆಸ್ಪತ್ರೆಯ ಲೋಪದೋಷಗಳ ಬಗ್ಗೆ ಮಾತನಾಡಿದ್ದಾರೆ.

Kolar Oxygen Shortage Death| ಜಿಲ್ಲಾ ಶಸ್ತ್ರಚಿಕಿತ್ಸಕ ಸಸ್ಪೆಂಡ್, ತನಿಖೆಗೆ ಸೂಚಿಸಿದ ಸಚಿವ ಸುಧಾಕರ್
ಡಾ.ಕೆ.ಸುಧಾಕರ್ (ಸಂಗ್ರಹ ಚಿತ್ರ)
ಆಯೇಷಾ ಬಾನು
|

Updated on: Apr 27, 2021 | 7:59 AM

Share

ಕೋಲಾರ: ಆಕ್ಸಿಜನ್ ಸಮಸ್ಯೆಯಿಂದ ನಿನ್ನೆ ಆಸ್ಪತ್ರೆಯಲ್ಲಿ ಸೋಂಕಿತರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ಆಕ್ಸಿಜನ್ ಸರಬರಾಜಿನ ದೋಷದ ಬಗ್ಗೆ ತನಿಖೆಗೆ ಸೂಚಿಸಿದ್ದಾರೆ. ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕ, ಆರ್.ಎಂ.ಒ ಸಸ್ಪೆಂಡ್ ಮಾಡಲಾಗಿದೆ.

ಘಟನೆ ಬಗ್ಗೆ ತಿಳಿದ ನಂತರ ಕೋಲಾರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಬಳಿಕ ಡಾ.ಕೆ.ಸುಧಾಕರ್, ಆಸ್ಪತ್ರೆಯಲ್ಲಿ 40 ವೆಂಟಿಲೇಟರ್ ಇದ್ರೂ ಬಳಸ್ತಿಲ್ಲ, ಇದು ದೊಡ್ಡ ಅಪರಾಧ. ವೆಂಟಿಲೇಟರ್ ಬಳಸಿದ್ರೆ ಕನಿಷ್ಠ 40 ಜನರನ್ನ ಉಳಿಸಬಹುದಿತ್ತು. ಆಸ್ಪತ್ರೆಯಲ್ಲಿ ಸಾಕಷ್ಟು ಲೋಪದೋಷಗಳಿವೆ ಎಂದು ಸುಧಾಕರ್ ಆಸ್ಪತ್ರೆ ವಿರುದ್ಧ ಹಾಗೂ ಆಸ್ಪತ್ರೆಯ ಲೋಪದೋಷಗಳ ಬಗ್ಗೆ ಮಾತನಾಡಿದ್ದಾರೆ.

ಆಸ್ಪತ್ರೆಯಲ್ಲಿ ಪ್ರತಿನಿತ್ಯ 10 ರಿಂದ 11 ಜನರು ಸಾಯುತ್ತಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ರೋಗಿಗಳಿಗೆ ಅಟೆಂಡರ್ ಇಟ್ಟಿದ್ದಾರೆ. ರೋಗಿಗಳಿಗೆ ಅಟೆಂಡರ್ ರಾಜ್ಯದಲ್ಲಿ ಎಲ್ಲೂ ಇಲ್ಲ, ಇದು ತಪ್ಪು ಎಂದು ತಿಳಿಸಿದ್ರು. ಇನ್ನು ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ತಡರಾತ್ರಿವರೆಗೂ ಅಧಿಕಾರಿಗಳ ಜೊತೆ ಸುಧಾಕರ್ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಡಿಸಿ, SP ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.

ಏಪ್ರಿಲ್ 26ರ ರಾತ್ರಿ ಆಕ್ಸಿಜನ್ ಸಮಸ್ಯೆಯಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ನಾಲ್ವರು ಮೃತಪಟ್ಟಿದ್ದರು. ಬಳಿಕ ಸಾವಿನ ಸಂಖ್ಯೆ ಏರಿಕೆಯಾಗಿತ್ತು. ಕೊರೊನಾ ದೃಢವಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಸೋಂಕಿತರು ಐಸಿಯು ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ನಿನ್ನೆ ರಾತ್ರಿ ಆಕ್ಸಿಜನ್ ಕೊರತೆಯಿಂದಾಗಿ ಮೂವರು ಪುರುಷರು ಹಾಗೂ ಓರ್ವ ಮಹಿಳೆ ಮೃತಪಟ್ಟಿದ್ದರು.

ರಾತ್ರಿ ಫೋನ್ ಮಾಡಿದರು ಯಾವೊಬ್ಬ ಅಧಿಕಾರಿಯು ಸ್ಪಂದಿಸಿಲ್ಲ. ಆಸ್ಪತ್ರೆ ಸಿಬ್ಬಂದಿ ಆಕ್ಸಿಜನ್ ಕಡಿತಗೊಳಿಸಿದ್ದರಿಂದಲೇ ನಮ್ಮವರ ಸಾವು ಸಂಭವಿಸಿದೆ ಎಂದು ಆಸ್ಪತ್ರೆ ಎದುರು ಮೃತರ ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದರು.

ಇದನ್ನೂ ಓದಿ: Oxygen Shortage| ಆಕ್ಸಿಜನ್ ಕೊರತೆಯಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ನಾಲ್ವರು ಸೋಂಕಿತರು ಬಲಿ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?