AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹೆಸರಲ್ಲಿ ಖಾಸಗಿ ಆಸ್ಪತ್ರೆಯಿಂದ ಲಕ್ಷ ಲಕ್ಷ ಲೂಟಿ; ಬಿಲ್ ಫೊಟೊ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ರೋಗಿಯ ಬಿಲ್ ವೈರಲ್ ಆಗಿದ್ದು, ಸರ್ಕಾರ, ಆರೋಗ್ಯ ಸಚಿವರಿಗೆ ಜನರು ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡಿದ್ದಾರೆ.

ಕೊರೊನಾ ಹೆಸರಲ್ಲಿ ಖಾಸಗಿ ಆಸ್ಪತ್ರೆಯಿಂದ ಲಕ್ಷ ಲಕ್ಷ ಲೂಟಿ; ಬಿಲ್ ಫೊಟೊ ವೈರಲ್
ಲಕ್ಷ್ಮೀ ಆಸ್ಪತ್ರೆ
TV9 Web
| Edited By: |

Updated on:Aug 23, 2021 | 12:43 PM

Share

ಕೋಲಾರ: ಕೊರೊನಾ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳಿಂದ ಲಕ್ಷ ಲಕ್ಷ ಲೂಟಿ ಮಾಡುತ್ತಿದ್ದ ಪ್ರಕರಣ ಬಯಲಾಗಿದೆ. ಕೋಲಾರದ ಲಕ್ಷ್ಮೀ ಆಸ್ಪತ್ರೆಯಲ್ಲಿ 11 ದಿನಕ್ಕೆ 3.9 ಲಕ್ಷ ಬಿಲ್ ಮಾಡಿರುವುದು ಬೆಳಕಿಗೆ ಬಂದಿದೆ. ಅರವಿಂದ್ ಎಂಬ ಸೋಂಕಿತನ ಹೆಸರಲ್ಲಿ ಲಕ್ಷಗಟ್ಟಲೆ ಬಿಲ್ ಮಾಡಲಾಗಿದ್ದು, 3 ಲಕ್ಷ 90 ಸಾವಿರ ಬಿಲ್ ಮಾಡಿರುವ ರಸೀದಿ ಎಲ್ಲೆಡೆ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ರೋಗಿಯ ಬಿಲ್ ವೈರಲ್ ಆಗಿದ್ದು, ಸರ್ಕಾರ, ಆರೋಗ್ಯ ಸಚಿವರಿಗೆ ಜನರು ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡಿದ್ದಾರೆ.

Lakshmi Hospital Bill

ಆಸ್ಪತ್ರೆ ಬಿಲ್

HRCT/CT ಸ್ಕ್ಯಾನ್​ಗೆ ರಾಜ್ಯ ಸರ್ಕಾರ ದರ ನಿಗದಿಪಡಿಸಿದೆ. ಬಿಪಿಎಲ್ ಕಾರ್ಡ್​ದಾರರಿಗೆ HRCT/CT ಸ್ಕ್ಯಾನ್​ಗೆ ₹1500 ಹಾಗೂ ಬಿಪಿಎಲ್ ಕಾರ್ಡ್ ಇಲ್ಲದಿದ್ದರೆ HRCT/CT ಸ್ಕ್ಯಾನ್​ಗೆ ₹2500 ದರ ನಿಗದಿಪಡಿಸಲಾಗಿದೆ. ಜೊತೆಗೆ, ಚಿತಾಗಾರಗಳಲ್ಲಿ ಸಮರ್ಪಕ ನಿರ್ವಹಣೆಗೆ ಅಧಿಕಾರಿಗಳ ನೇಮಕ ಮಾಡಲಾಗಿದೆ. ಚಿತಾಗಾರ ಸಮನ್ವಯ ಅಧಿಕಾರಿಗಳನ್ನ ಸರ್ಕಾರ ನೇಮಿಸಿದೆ. ಬಿಬಿಎಂಪಿ ವ್ಯಾಪ್ತಿಯ 16 ಚಿತಾಗಾರಗಳಿಗೆ ಅಧಿಕಾರಿಗಳ ನೇಮಕ ಮಾಡಲಾಗಿದೆ. 2 ಶಿಫ್ಟ್​​ನಲ್ಲಿ ಕಾರ್ಯನಿರ್ವಹಿಸಲು 32 ಅಧಿಕಾರಿಗಳ ನೇಮಕ ಮಾಡಲಾಗಿದೆ.

ದೇಶದ ಉದ್ದಗಲಕ್ಕೂ ನಕಲಿ ರೆಮಿಡಿಸಿವಿರ್ ಜಾಲ ನಕಲಿ ರೆಮಿಡಿಸಿವಿರ್ ತಯಾರಿಸಿ, ಮಾರುತ್ತಿದ್ದ ಉತ್ತರಾಖಂಡ್ ರಾಜ್ಯದ ಐವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಗುಜರಾತ್, ದೆಹಲಿ, ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ಎಲ್ಲ ರಾಜ್ಯಗಳಲ್ಲೂ ಈಗ ನಕಲಿ ರೆಮಿಡಿಸಿವಿರ್ ಮಾರಾಟ ಗ್ಯಾಂಗ್ ಕಾರ್ಯಾಚರಣೆ ಮಾಡ್ತಿವೆ. ಕೆಲ ಗ್ಯಾಂಗ್ ಈಗಾಗಲೇ ಪೊಲೀಸರ ಬಲೆಗೆ ಬಿದ್ದಿವೆ. ಕೊರೊನಾ ರೋಗಿಗಳು ಹಾಗೂ ಅವರ ಸಂಬಂಧಿಕರು ಕಾಳಸಂತೆಯಲ್ಲಿ ರೆಮಿಡಿಸಿವಿರ್ ಖರೀದಿಸುವಾಗ ಎಚ್ಚರಿಕೆಯಿಂದ ಇರಬೇಕು. ನಕಲಿ ರೆಮಿಡಿಸಿವಿರ್ ಇಂಜೆಕ್ಷನ್ ನಿಮಗೆ ದುಬಾರಿ ಬೆಲೆಗೆ ಮಾರಾಟ ಮಾಡುವ ಖದೀಮರಿದ್ದಾರೆ. ಅಂಥವರ ಬಗ್ಗೆ ಎಚ್ಚರವಿರಲಿ. ಕೊರೊನಾ ರೋಗಿಗಳ ಸಂಬಂಧಿಕರು, ರೆಮಿಡಿಸಿವಿರ್ ಇಂಜೆಕ್ಷನ್ಅನ್ನು ಸರ್ಕಾರದಿಂದ ಮಾತ್ರ ಖರೀದಿಸಿ. ಸರ್ಕಾರವೇ ರೆಮಿಡಿಸಿವಿರ್ ಪೂರೈಕೆಗೆ ನೋಡಲ್ ಆಫೀಸರ್ ಗಳನ್ನು ನೇಮಿಸಿದೆ. ಇಂಥ ನೋಡಲ್ ಆಫೀಸರ್​ಗಳ ಮೂಲಕ ಮಾತ್ರ ರೆಮಿಡಿಸಿವಿರ್ ಪಡೆದು ಕೊರೊನಾ ರೋಗಿಗಳಿಗೆ ನೀಡಿ. ರೆಮಿಡಿಸಿವಿರ್ ಅನ್ನು ರೋಗಿಗಳಿಗೆ ನೀಡಬೇಕೆಂಬ ಆತುರದಲ್ಲಿ ನಕಲಿ ರೆಮಿಡಿಸಿವಿರ್ ಜಾಲದ ಬಲೆಗೆ ಬೀಳಬೇಡಿ. ಕೊರೊನಾ ಚಿಕಿತ್ಸೆ ಸಂದರ್ಭ ಜಾಗರೂಕರಾಗಿ, ವ್ಯವಸ್ಥೆಯ ಅನುಸಾರ ಔಷಧೋಪಚಾರ ಪಡೆಯಿರಿ.

ಇದನ್ನೂ ಓದಿ: ಖಾಲಿ ಹೊಟ್ಟೆಯಲ್ಲಿ ಗೋಮೂತ್ರ ಸೇವಿಸಿ, ಕೊರೊನಾದಿಂದ ದೂರವಿರಿ: ಉತ್ತರ ಪ್ರದೇಶದ ಬಿಜೆಪಿ ಶಾಸಕ

ಅಜ್ಜಿಯನ್ನು ಕಳೆದುಕೊಂಡರೂ ಕೊರೊನಾ ರೋಗಿಗಳ ನಡುವೆ ತಮ್ಮ ಕರ್ತವ್ಯವನ್ನು ನಿರ್ವಹಿಸಿದ್ದಾರೆ ಈ ನರ್ಸ್ ರಾಖಿ ಜಾನ್!

Published On - 7:26 pm, Sun, 9 May 21

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ