Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕ-ತಂಗಿಯನ್ನು ಒಟ್ಟಿಗೆ ಮದುವೆಯಾದ ಪ್ರಕರಣಕ್ಕೆ ಹೊಸ ಟ್ವಿಸ್ಟ್​; ಪತಿ ಉಮಾಪತಿ ಅರೆಸ್ಟ್​, ಕಾರಣ ಏನು?

ಈ ಫೋಟೋ ಸಾಕಷ್ಟು ವೈರಲ್​ ಆಗಿತ್ತು. ಆದರೆ, ಮದುವೆಯಾದ ಹುಡುಗಿಯರ ಪೈಕಿ ಒಬ್ಬರು ಅಪ್ರಾಪ್ತೆಯಂತೆ ಕಂಡು ಬಂದಿದ್ದರು. ಹೀಗಾಗಿ ಈ ಬಗ್ಗೆ ಪರಿಶೀಲನೆ ಮಾಡಲು ಡಿಸಿ ಆರ್.ಸೆಲ್ವಮಣಿ ಆದೇಶಿಸಿದ್ದರು.

ಅಕ್ಕ-ತಂಗಿಯನ್ನು ಒಟ್ಟಿಗೆ ಮದುವೆಯಾದ ಪ್ರಕರಣಕ್ಕೆ ಹೊಸ ಟ್ವಿಸ್ಟ್​; ಪತಿ ಉಮಾಪತಿ ಅರೆಸ್ಟ್​, ಕಾರಣ ಏನು?
ಅಪ್ರಾಪ್ತೆಯನ್ನು ಮದುವೆಯಾದ ವರ
Follow us
ರಾಜೇಶ್ ದುಗ್ಗುಮನೆ
| Updated By: ganapathi bhat

Updated on:May 16, 2021 | 8:08 PM

ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲೂಕಿನ ವೇಗಮಡುಗು ಗ್ರಾಮದಲ್ಲಿ ಸುಪ್ರಿಯಾ ಹಾಗೂ ಲಲಿತ ಎಂಬ ಅಕ್ಕ ತಂಗಿಯರನ್ನು ಉಮಾಪತಿ ಎಂಬುವವರು ಒಂದೇ ಮುಹೂರ್ತದಲ್ಲಿ ಮದುವೆ ಮಾಡಿಕೊಂಡಿದ್ದರು. ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗಿತ್ತು. ಅಷ್ಟೇ ಅಲ್ಲ, ಮದುವೆ ಫೋಟೋಗಳು ಸಾಕಷ್ಟು ವೈರಲ್​ ಆಗಿತ್ತು. ಆದರೆ, ವಿವಾಹ ಆದ ಕೆಲವೇ ದಿನಗಳಲ್ಲಿ ವರ ಅರೆಸ್ಟ್​ ಆಗಿದ್ದಾನೆ.

ಅಕ್ಕ ಸುಪ್ರಿಯಾಗೆ ಮಾತು ಬರುವುದಿಲ್ಲ. ಅವರಿಗೆ ಮದುವೆಯಾಗದೆ ತಂಗಿ ಲಲಿತಾಗೆ ಮದುವೆಯಾಗೋದಿಲ್ಲ. ಅಕ್ಕನಿಗೆ ಎಲ್ಲಿ ಮದುವೆಯಾಗುವುದಿಲ್ಲವೋ ಎಂದು ಯೋಚಿಸಿದ ತಂಗಿ ಲಲಿತಾ ನನ್ನನ್ನು ಮದುಯಾಗಬೇಕೆಂದರೆ ತಮ್ಮ ಅಕ್ಕನನ್ನೂ ಮದುವೆ ಮಾಡಿಕೊಳ್ಳಬೇಕು ಎಂಬ ಷರತ್ತನ್ನು ವರ ಉಮಾಪತಿಗೆ ವಿಧಿಸಿದ್ದರು. ಅದಕ್ಕೆ ಒಪ್ಪಿದ ಅವರು ಮೇ 7ರಂದು ಗ್ರಾಮದಲ್ಲಿ ಗುರು ಹಿರಿಯರ ಸಮ್ಮುಖದಲ್ಲಿ ಸಹೋದರಿಯರನ್ನು ‌ಮದುವೆ ಮಾಡಿಕೊಂಡಿದ್ದರು.

ಈ ಫೋಟೋ ಸಾಕಷ್ಟು ವೈರಲ್​ ಆಗಿತ್ತು. ಆದರೆ, ಮದುವೆಯಾದ ಹುಡುಗಿಯರ ಪೈಕಿ ಒಬ್ಬರು ಅಪ್ರಾಪ್ತೆಯಂತೆ ಕಂಡು ಬಂದಿದ್ದರು. ಹೀಗಾಗಿ ಈ ಬಗ್ಗೆ ಪರಿಶೀಲನೆ ಮಾಡಲು ಡಿಸಿ ಆರ್. ಸೆಲ್ವಮಣಿ ಆದೇಶಿಸಿದ್ದರು. ಪರಿಶೀಲನೆ ನಡೆಸಿದಾಗ ಲಲಿತಾ ಅಪ್ರಾಪ್ತೆ ಅನ್ನೋ ವಿಚಾರ ತಿಳಿದು ಬಂದಿದೆ.

ಅಪ್ರಾಪ್ತೆಯನ್ನು ಮದುವೆ ಆಗೋದು ಕಾನುನು ಪ್ರಕಾರ ಅಪರಾಧ. ಬಾಲ್ಯವಿವಾಹ ನಡೆದಿದೆ ಎನ್ನುವ ಕಾರಣಕ್ಕೆ ಉಮಾಪತಿ ಸೇರಿ ಏಳು ಜನರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ವರ ಅರೆಸ್ಟ್​ ಆಗಿದ್ದಾನೆ.

ವಂಶ ಪಾರಂಪರ್ಯವಾಗಿ ಮುಂದುವರೆದ ಎರಡು ಮದುವೆ

ಸುಪ್ರಿಯಾ ಹಾಗೂ ಲಲಿತಾ ಕುಟುಂಬದಲ್ಲಿ ಈ ರೀತಿ ಮದುವೆ ನಡೆದಿದ್ದು ಇದೇ ಮೊದಲಲ್ಲ. ಇವರ ತಂದೆ ಕೂಡಾ ಇದೆ ರೀತಿಯಲ್ಲಿ ಅಕ್ಕ ತಂಗಿಯರನ್ನು ಮದುವೆ ಮಾಡಿಕೊಂಡಿದ್ದರು. ಅಲ್ಲೂ ಒಬ್ಬರಿಗೆ‌ ಮಾತು ಬರುತ್ತಿರಲಿಲ್ಲ ಅನ್ನೋದು ವಿಶೇಷ. ರಾಣೆಮ್ಮ ಹಾಗೂ ಸುಬ್ಬಮ್ಮ ಎಂಬುವರನ್ನು ಇವರ ಸೋದರ ಸಂಬಂಧಿ ನಾಗರಾಜಪ್ಪ ಎಂಬುವರು ಮದುವೆಯಾಗಿದ್ದರು. ಈಗ ಅದೇ ರೀತಿಯಲ್ಲಿ ಮತ್ತೊಂದು ಮದುವೆ ಆಗಿದೆ.

ಇದನ್ನೂ ಓದಿ: ಕೋಲಾರದಲ್ಲಿ ಅಕ್ಕ-ತಂಗಿಯರನ್ನು ಒಂದೇ ಮುಹೂರ್ತದಲ್ಲಿ ವರಿಸಿದ ವರ; ಯಾವ ಸಿನಿಮಾಗೂ ಕಮ್ಮಿ ಇಲ್ಲಈ ಕಥೆ

Published On - 7:46 pm, Sun, 16 May 21

ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ