AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಅಕ್ಕ-ತಂಗಿಯರನ್ನು ಒಂದೇ ಮುಹೂರ್ತದಲ್ಲಿ ವರಿಸಿದ ವರ; ಯಾವ ಸಿನಿಮಾಗೂ ಕಮ್ಮಿ ಇಲ್ಲಈ ಕಥೆ

ಮದುವೆಯಾದ ಫೋಟೋ ಹಾಗೂ ಮದುವೆ ಆಮಂತ್ರಣ ಪತ್ರ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. ಈ ಮದುವೆ ನೋಡಿದ ಬಗ್ಗೆ ಸಾಕಷ್ಟು ಜನರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಕೋಲಾರದಲ್ಲಿ ಅಕ್ಕ-ತಂಗಿಯರನ್ನು ಒಂದೇ ಮುಹೂರ್ತದಲ್ಲಿ ವರಿಸಿದ ವರ; ಯಾವ ಸಿನಿಮಾಗೂ ಕಮ್ಮಿ ಇಲ್ಲಈ ಕಥೆ
ಕೋಲಾರದಲ್ಲಿ ಅಕ್ಕ ತಂಗಿಯನ್ನು ಮದುವೆಯಾದ ಯುವಕ
Follow us
ರಾಜೇಶ್ ದುಗ್ಗುಮನೆ
|

Updated on:May 16, 2021 | 7:54 PM

ಅಕ್ಕ-ತಂಗಿಯರನ್ನು ಒಂದೇ ಮುಹೂರ್ತದಲ್ಲಿ ಹುಡುಗ ಮದುವೆ ಆಗುವ ದೃಶ್ಯಗಳು ಸಿನಿಮಾದಲ್ಲಿ ಬರುತ್ತವೆ. ಸಿನಿಮಾದಲ್ಲಿ ಇಂಥ ಸನ್ನಿವೇಶಗಳನ್ನು ತಮ್ಮ ಕಲ್ಪನೆಗೆ ತಕ್ಕಂತೆ ಸೃಷ್ಟಿಸಿಕೊಳ್ಳುತ್ತಾರೆ. ಆದರೆ ಇಲ್ಲಿ ಎಲ್ಲವೂ ತಂತಾನೆ ಸೃಷ್ಟಿಯಾಗಿ ಅಪರೂಪದ‌ ಮದುವೆಯೊಂದು‌ ನಡೆದು ಹೋಗಿದೆ. ಈ ಮದುವೆ ನಡೆದಿದ್ದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ವೇಗಮಡುಗು ಗ್ರಾಮದಲ್ಲಿ. ಸುಪ್ರಿಯಾ ಹಾಗೂ ಲಲಿತ ಎಂಬ ಇಬ್ಬರು ಅಕ್ಕ ತಂಗಿಯರನ್ನು ಉಮಾಪತಿ ಎಂಬುವವರು ಒಂದೇ ಮುಹೂರ್ತದಲ್ಲಿ ಮದುವೆ ಮಾಡಿಕೊಂಡಿದ್ದಾರೆ.

ಅಕ್ಕ ಸುಪ್ರಿಯಾಗೆ ಮಾತು ಬರುವುದಿಲ್ಲ. ಅವರಿಗೆ ಮದುವೆಯಾಗದೆ ತಂಗಿ ಲಲಿತಾಗೆ ಮದುವೆಯಾಗೋದಿಲ್ಲ. ಅಕ್ಕನಿಗೆ ಎಲ್ಲಿ  ಮದುವೆಯಾಗುವುದಿಲ್ಲವೋ ಎಂದು ಯೋಚಿಸಿದ ತಂಗಿ ಲಲಿತಾ ನನ್ನನ್ನು ಮದುಯಾಗಬೇಕೆಂದರೆ ತಮ್ಮ ಅಕ್ಕನನ್ನೂ ಮದುವೆ ಮಾಡಿಕೊಳ್ಳಬೇಕು ಎಂಬ ಷರತ್ತನ್ನು ವರ ಉಮಾಪತಿಗೆ ವಿಧಿಸಿದ್ದರು. ಅದಕ್ಕೆ ಒಪ್ಪಿದ ಅವರು ಮೇ 7ರಂದು ಗ್ರಾಮದಲ್ಲಿ ಗುರು ಹಿರಿಯರ ಸಮ್ಮುಖದಲ್ಲಿ ಸಹೋದರಿಯರನ್ನು ‌ಮದುವೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸದ್ಯ, ಮದುವೆಯಾದ ಫೋಟೋ ಹಾಗೂ ಮದುವೆ ಆಮಂತ್ರಣ ಪತ್ರ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. ಈ ಮದುವೆ ನೋಡಿದ ಬಗ್ಗೆ ಸಾಕಷ್ಟು ಜನರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ವಂಶ ಪಾರಂಪರ್ಯವಾಗಿ ಮುಂದುವರೆದ ಎರಡು ಮದುವೆ

ಸುಪ್ರಿಯಾ ಹಾಗೂ ಲಲಿತಾ ಕುಟುಂಬದಲ್ಲಿ ಈ ರೀತಿ ಮದುವೆ ನಡೆದಿದ್ದು ಇದೇ ಮೊದಲಲ್ಲ. ಇವರ ತಂದೆ ಕೂಡಾ ಇದೆ ರೀತಿಯಲ್ಲಿ ಅಕ್ಕ ತಂಗಿಯರನ್ನು ಮದುವೆ ಮಾಡಿಕೊಂಡಿದ್ದರು. ಅಲ್ಲೂ ಒಬ್ಬರಿಗೆ‌ ಮಾತು ಬರುತ್ತಿರಲಿಲ್ಲ ಅನ್ನೋದು ವಿಶೇಷ. ರಾಣೆಮ್ಮ ಹಾಗೂ ಸುಬ್ಬಮ್ಮ ಎಂಬುವರನ್ನು ಇವರ ಸೋದರ ಸಂಬಂಧಿ ನಾಗರಾಜಪ್ಪ ಎಂಬುವರು ಮದುವೆಯಾಗಿದ್ದರು. ಈಗ ಅದೇ ರೀತಿಯಲ್ಲಿ ಮತ್ತೊಂದು ಮದುವೆ ಆಗಿದೆ.

ಇದನ್ನೂ ಓದಿ:ಅರವಿಂದ್​​-ದಿವ್ಯಾ ಉರುಡುಗ ಮದುವೆ ಆಗ್ತಾರಾ? ಚಂದನ್​-ನಿವೇದಿತಾ ಥರ ಇನ್ನೊಂದು ಜೋಡಿ! 

ಚಂದನ್ ಕುಮಾರ್ – ನಟಿ ಕವಿತಾ ಗೌಡ ಸಿಂಪಲ್ ಮದುವೆಯ ಫೋಟೋಗಳು ವೈರಲ್

Published On - 6:47 pm, Sat, 15 May 21

ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್