AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಅಕ್ಕ-ತಂಗಿಯರನ್ನು ಒಂದೇ ಮುಹೂರ್ತದಲ್ಲಿ ವರಿಸಿದ ವರ; ಯಾವ ಸಿನಿಮಾಗೂ ಕಮ್ಮಿ ಇಲ್ಲಈ ಕಥೆ

ಮದುವೆಯಾದ ಫೋಟೋ ಹಾಗೂ ಮದುವೆ ಆಮಂತ್ರಣ ಪತ್ರ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. ಈ ಮದುವೆ ನೋಡಿದ ಬಗ್ಗೆ ಸಾಕಷ್ಟು ಜನರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಕೋಲಾರದಲ್ಲಿ ಅಕ್ಕ-ತಂಗಿಯರನ್ನು ಒಂದೇ ಮುಹೂರ್ತದಲ್ಲಿ ವರಿಸಿದ ವರ; ಯಾವ ಸಿನಿಮಾಗೂ ಕಮ್ಮಿ ಇಲ್ಲಈ ಕಥೆ
ಕೋಲಾರದಲ್ಲಿ ಅಕ್ಕ ತಂಗಿಯನ್ನು ಮದುವೆಯಾದ ಯುವಕ
ರಾಜೇಶ್ ದುಗ್ಗುಮನೆ
|

Updated on:May 16, 2021 | 7:54 PM

Share

ಅಕ್ಕ-ತಂಗಿಯರನ್ನು ಒಂದೇ ಮುಹೂರ್ತದಲ್ಲಿ ಹುಡುಗ ಮದುವೆ ಆಗುವ ದೃಶ್ಯಗಳು ಸಿನಿಮಾದಲ್ಲಿ ಬರುತ್ತವೆ. ಸಿನಿಮಾದಲ್ಲಿ ಇಂಥ ಸನ್ನಿವೇಶಗಳನ್ನು ತಮ್ಮ ಕಲ್ಪನೆಗೆ ತಕ್ಕಂತೆ ಸೃಷ್ಟಿಸಿಕೊಳ್ಳುತ್ತಾರೆ. ಆದರೆ ಇಲ್ಲಿ ಎಲ್ಲವೂ ತಂತಾನೆ ಸೃಷ್ಟಿಯಾಗಿ ಅಪರೂಪದ‌ ಮದುವೆಯೊಂದು‌ ನಡೆದು ಹೋಗಿದೆ. ಈ ಮದುವೆ ನಡೆದಿದ್ದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ವೇಗಮಡುಗು ಗ್ರಾಮದಲ್ಲಿ. ಸುಪ್ರಿಯಾ ಹಾಗೂ ಲಲಿತ ಎಂಬ ಇಬ್ಬರು ಅಕ್ಕ ತಂಗಿಯರನ್ನು ಉಮಾಪತಿ ಎಂಬುವವರು ಒಂದೇ ಮುಹೂರ್ತದಲ್ಲಿ ಮದುವೆ ಮಾಡಿಕೊಂಡಿದ್ದಾರೆ.

ಅಕ್ಕ ಸುಪ್ರಿಯಾಗೆ ಮಾತು ಬರುವುದಿಲ್ಲ. ಅವರಿಗೆ ಮದುವೆಯಾಗದೆ ತಂಗಿ ಲಲಿತಾಗೆ ಮದುವೆಯಾಗೋದಿಲ್ಲ. ಅಕ್ಕನಿಗೆ ಎಲ್ಲಿ  ಮದುವೆಯಾಗುವುದಿಲ್ಲವೋ ಎಂದು ಯೋಚಿಸಿದ ತಂಗಿ ಲಲಿತಾ ನನ್ನನ್ನು ಮದುಯಾಗಬೇಕೆಂದರೆ ತಮ್ಮ ಅಕ್ಕನನ್ನೂ ಮದುವೆ ಮಾಡಿಕೊಳ್ಳಬೇಕು ಎಂಬ ಷರತ್ತನ್ನು ವರ ಉಮಾಪತಿಗೆ ವಿಧಿಸಿದ್ದರು. ಅದಕ್ಕೆ ಒಪ್ಪಿದ ಅವರು ಮೇ 7ರಂದು ಗ್ರಾಮದಲ್ಲಿ ಗುರು ಹಿರಿಯರ ಸಮ್ಮುಖದಲ್ಲಿ ಸಹೋದರಿಯರನ್ನು ‌ಮದುವೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸದ್ಯ, ಮದುವೆಯಾದ ಫೋಟೋ ಹಾಗೂ ಮದುವೆ ಆಮಂತ್ರಣ ಪತ್ರ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. ಈ ಮದುವೆ ನೋಡಿದ ಬಗ್ಗೆ ಸಾಕಷ್ಟು ಜನರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ವಂಶ ಪಾರಂಪರ್ಯವಾಗಿ ಮುಂದುವರೆದ ಎರಡು ಮದುವೆ

ಸುಪ್ರಿಯಾ ಹಾಗೂ ಲಲಿತಾ ಕುಟುಂಬದಲ್ಲಿ ಈ ರೀತಿ ಮದುವೆ ನಡೆದಿದ್ದು ಇದೇ ಮೊದಲಲ್ಲ. ಇವರ ತಂದೆ ಕೂಡಾ ಇದೆ ರೀತಿಯಲ್ಲಿ ಅಕ್ಕ ತಂಗಿಯರನ್ನು ಮದುವೆ ಮಾಡಿಕೊಂಡಿದ್ದರು. ಅಲ್ಲೂ ಒಬ್ಬರಿಗೆ‌ ಮಾತು ಬರುತ್ತಿರಲಿಲ್ಲ ಅನ್ನೋದು ವಿಶೇಷ. ರಾಣೆಮ್ಮ ಹಾಗೂ ಸುಬ್ಬಮ್ಮ ಎಂಬುವರನ್ನು ಇವರ ಸೋದರ ಸಂಬಂಧಿ ನಾಗರಾಜಪ್ಪ ಎಂಬುವರು ಮದುವೆಯಾಗಿದ್ದರು. ಈಗ ಅದೇ ರೀತಿಯಲ್ಲಿ ಮತ್ತೊಂದು ಮದುವೆ ಆಗಿದೆ.

ಇದನ್ನೂ ಓದಿ:ಅರವಿಂದ್​​-ದಿವ್ಯಾ ಉರುಡುಗ ಮದುವೆ ಆಗ್ತಾರಾ? ಚಂದನ್​-ನಿವೇದಿತಾ ಥರ ಇನ್ನೊಂದು ಜೋಡಿ! 

ಚಂದನ್ ಕುಮಾರ್ – ನಟಿ ಕವಿತಾ ಗೌಡ ಸಿಂಪಲ್ ಮದುವೆಯ ಫೋಟೋಗಳು ವೈರಲ್

Published On - 6:47 pm, Sat, 15 May 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು