AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೀಟಬಾಧೆಗೆ ರಾಮಬಾಣ: ಕೋಲಾರದಲ್ಲಿ ಮೋಹಕ ಬಲೆಯ ಮೊರೆಹೋದ ಮಾವು ಬೆಳೆಗಾರರು

ಕೊಳೆತ ಕಾಯಿಗಳಿಂದ ಹೊರ ಬರುವ ಊಜಿ ನೊಣಗಳು ಆರೋಗ್ಯವಂತ ಕಾಯಿಯನ್ನು ಕಚ್ಚಿ ಮೊಟ್ಟೆ ಇಡುತ್ತವೆ. ಮೋಹಕ ಬಲೆಯನ್ನು ಸಾಂಘಿಕವಾಗಿ ಬಳಸುವುದರಿಂದ ಹೆಚ್ಚು ಪ್ರಯೋಜನವಾಗುತ್ತದೆ.

ಕೀಟಬಾಧೆಗೆ ರಾಮಬಾಣ: ಕೋಲಾರದಲ್ಲಿ ಮೋಹಕ ಬಲೆಯ ಮೊರೆಹೋದ ಮಾವು ಬೆಳೆಗಾರರು
ಕೋಲಾರದಲ್ಲಿ ಬಲೆಯ ಮೊರೆ ಹೋದ ಮಾವು ಬೆಳೆಗಾರರು
Follow us
preethi shettigar
|

Updated on: Apr 07, 2021 | 8:17 AM

ಕೋಲಾರ: ಜಿಲ್ಲೆಯು ಮಾವು ಬೆಳೆ ದೇಶ ಹಾಗೂ ರಾಜ್ಯದಲ್ಲೇ ಹೆಸರುವಾಸಿಯಾಗಿದೆ, ಅದರಲ್ಲೂ ಶ್ರೀನಿವಾಸಪುರ ತಾಲ್ಲೂಕು ಮಾವಿನ ತವರು ಎಂದು ಎಂದು ಖ್ಯಾತಿ ಪಡೆದಿದೆ. ಕೇವಲ ಕೋಲಾರ ಜಿಲ್ಲೆಯೊಂದರಲ್ಲೇ ಸುಮಾರು 52 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಮಾವು ಬೆಳೆಯಿದ್ದು, ರಸಪುರಿ, ಆಲ್ಫಾನ್ಸೊ, ಬಂಗನಪಲ್ಲಿ, ಕೇಸರ್, ಸೆಂಧೂರ, ರಸಪುರಿ, ದಶಹರಿ, ಮಲ್ಲಿಕಾ, ತೋತಾಪುರಿ, ರಾಜ್‌ಗಿರಾ, ಮಲಗೋವಾ, ನೀಲಂ ಮಾವಿನ ತಳಿಗಳನ್ನು ಬೆಳೆಯಲಾಗುತ್ತದೆ.

ಪ್ರತಿ ವರ್ಷ ಏಪ್ರಿಲ್‌ ಮತ್ತು ಮೇ ತಿಂಗಳಲ್ಲಿ ಮಾವಿಗೆ ಊಜಿ ನೊಣಗಳ ಕಾಟ ಹೆಚ್ಚಾಗಿರುತ್ತದೆ. ಊಜಿ ಅಥವಾ ಹಣ್ಣು ನೊಣದ ಬಾಧೆಯಿಂದ ಸರಾಸರಿ ಶೇ.30 ರಷ್ಟು ಇಳುವರಿ ನಷ್ಟವಾಗುತ್ತದೆ. ಮತ್ತೊಂದೆಡೆ ಹಣ್ಣಿನ ಗುಣಮಟ್ಟ ಕುಸಿದು ಮಾರುಕಟ್ಟೆಯಲ್ಲಿ ಬೆಲೆ ಇಳಿಕೆಯಾಗುತ್ತದೆ. ಹಾಗಾಗಿ ಬಹುತೇಕ ರೈತರು ಊಜಿ ನೊಣದ ಹಾವಳಿಯಿಂದ ಪಾರಾಗಲು ಮೋಹಕ ಬಲೆಯ ಮೊರೆ ಹೋಗಿದ್ದಾರೆ.

ಅಕಾಲಿಕ ಮಳೆಯಿಂದ ಬೆಳೆಗೆ ಕೀಟ ಬಾದೆ ಕಳೆದು ತಿಂಗಳು ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದ ಮಾವಿನ ಮರಗಳಲ್ಲಿ ಹೂವು ಹಾಗೂ ಪಿಂದೆಗೆ ಹೆಚ್ಚಿನ ಹಾನಿಯಾಗಿದೆ. ಊಜಿ ನೊಣದ ಹತೋಟಿಗೆ ರೈತರು ಕ್ರಮ ಕೈಗೊಳ್ಳದಿದ್ದರೆ ಮತ್ತಷ್ಟು ಇಳುವರಿ ನಷ್ಟವಾಗುವ ಅಪಾಯವಿದೆ. ಊಜಿ ನೊಣಗಳು ಪೀಚನ್ನು ಕಚ್ಚಿ ತಿಂದು ಮೊಟ್ಟೆ ಇಡುತ್ತವೆ. ಅವು ಹುಳುಗಳಾಗಿ ಮಾರ್ಪಟ್ಟು ಪೀಚನ್ನು ಪ್ರವೇಶಿಸುತ್ತವೆ. ದಿನ ಕಳೆದಂತೆ ಹುಳುಗಳು ಗಾತ್ರದಲ್ಲಿ ದೊಡ್ಡದಾಗಿ ಬೆಳೆಗೆ ಹಾನಿ ಉಂಟು ಮಾಡುತ್ತವೆ. ಎಳೆ ಹಂತದಲ್ಲಿ ಬೀಜ ಸೇರಿದ ಹುಳುಗಳು ಕಾಯಿಯನ್ನು ಕೊರೆದು ಹೊರಬರುತ್ತವೆ. ಅಂತಹ ಕಾಯಿಗಳಿಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆ ಇರುವುದಿಲ್ಲ.

mango

ಮಾವನ್ನು ಕೀಟಬಾಧೆಯಿಮದ ರಕ್ಷಿಸಲು ಹೊಸ ಪ್ರಯತ್ನ

ಕೊಳೆತ ಕಾಯಿಗಳಿಂದ ಹೊರ ಬರುವ ಊಜಿ ನೊಣಗಳು ಆರೋಗ್ಯವಂತ ಕಾಯಿಯನ್ನು ಕಚ್ಚಿ ಮೊಟ್ಟೆ ಇಡುತ್ತವೆ. ಮೊಟ್ಟೆ ಒಡೆದು ಹೊರಬರುವ ಹುಳುಗಳು ಕಾಯಿ ಪ್ರವೇಶಿಸಿ ಕೊಳೆಯುವಂತೆ ಮಾಡುತ್ತವೆ. ಈ ನೊಣಗಳ ಹಾವಳಿಯನ್ನು ವ್ಯವಸ್ಥಿತವಾಗಿ ತಡೆದಲ್ಲಿ ಇಳುವರಿ ಹೆಚ್ಚುತ್ತದೆ. ಮೋಹಕ ಬಲೆಯನ್ನು ಸಾಂಘಿಕವಾಗಿ ಬಳಸುವುದರಿಂದ ಹೆಚ್ಚು ಪ್ರಯೋಜನವಾಗುತ್ತದೆ.

ಏನಿದು ಮೋಹಕ ಬಲೆ? ತಯಾರಿಸೋದು ಹೇಗೆ? ಮೋಹಕ ಬಲೆ ತಯಾರಿಸುವ ವಿಧಾನ ತುಂಬಾ ಸರಳ. ಒಂದು ಲೀಟರ್‌ ಸಾಮರ್ಥ್ಯದ ಖಾಲಿ ಪ್ಲಾಸ್ಟಿಕ್ ಬಾಟಲ್ಗೆ ಸ್ವಲ್ಪ ಕೆಳಭಾಗದಲ್ಲಿ 2 ರಂಧ್ರ ಕೊರೆಯಬೇಕು. ಬಾಟಲ್‌ನ ಒಳಗೆ ಒಂದು ಮರದ ತುಂಡು ಕಟ್ಟಬೇಕು. ಆ ಮರದ ತುಂಡಿನ ಮೇಲೆ 1 ಮಿ.ಲೀ ಮಿಥೈಲ್‌ ಯೂಜಿನಾಲ್ ಮತ್ತು 1 ಮಿ.ಲೀ ನಷ್ಟು ಡೈಕ್ಲೋರಾವಾಸ್‌ ಔಷಧ ಲೇಪಿಸಬೇಕು.

ಬಾಟಲ್‌ನ ಮುಚ್ಚಳ ಹಾಕಿದ ಬಳಿಕ ಅದನ್ನು ಆಳೆತ್ತರದಲ್ಲಿ ಮಾವಿನ ಮರದ ಕೊಂಬೆಗೆ ಕಟ್ಟಬೇಕು. ಔಷಧಿಯ ವಾಸನೆಯಿಂದ ಆಕರ್ಷಿತವಾದ ಊಜಿ ನೊಣಗಳಲ್ಲಿ ಶೇ 90ರಷ್ಟು ಬಾಟಲಿಯನ್ನು ಪ್ರವೇಶಿಸಿ ಸಾಯುತ್ತವೆ. ಮಾರುಕಟ್ಟೆಯಲ್ಲಿ ಸಿದ್ಧ ಮೋಹಕ ಬಲೆಗಳು ಸಿಗುತ್ತವೆ. ಒಂದು ಎಕರೆ ಮಾವಿನ ತೋಟಕ್ಕೆ ಐದರಿಂದ ಆರು ಕಡೆ ಮೋಹಕ ಬಲೆ ಕಟ್ಟಬೇಕು. ಮಾವು ಬೆಳೆಗಾರರ ಅನುಕೂಲಕ್ಕಾಗಿ ಮಾವು ಅಭಿವೃದ್ಧಿ ಮಂಡಳಿಯು ಕೀಟಗಳ ನಿವಾರಣೆಗೆ ಮೋಹಕ ಬಲೆ ತಯಾರಿಸಿದ್ದು, ರೈತರಿಗೆ ಸಬ್ಸಿಡಿ ದರದಲ್ಲಿ ನೀಡುತ್ತಿದೆ.

ಊಜಿ ನೊಣಗಳ ನಿಯಂತ್ರಣದಿಂದ ಫಸಲು ಹೆಚ್ಚುವುದರ ಜತೆಗೆ ಮಾವಿನ ಗುಣಮಟ್ಟ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ. ಹಾಗಾಗಿ ಉತ್ತಮ ಗುಣಮಟ್ಟದ ಮಾವಿಗೆ ಮಾರುಕಟ್ಟೆಯಲ್ಲಿ ಲಾಭದಾಯಕ ಬೆಲೆ ಸಿಗುತ್ತದೆ. ಮಾವನ್ನು ಬಾಧಿಸುವ ಕೀಟಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಮೋಹಕ ಬಲೆ ಬಳಸುವುದು ಸೂಕ್ತ. ಮಾವಿನ ಕಾಯಿಗಳು ಗೋಲಿ ಗಾತ್ರದಲ್ಲೇ ಇದ್ದಾಗ ಮೋಹಕ ಬಲೆ ಕಟ್ಟಬೇಕು. ಆಗ ನಿಯಂತ್ರಣಕ್ಕೆ ಬರುತ್ತದೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಎಂ.ಗಾಯತ್ರಿ ಹೇಳಿದ್ದಾರೆ.

(ವರದಿ: ರಾಜೇಂದ್ರ ಸಿಂಹ-9980914108)

ಇದನ್ನೂ ಓದಿ: ವಾತಾವರಣದ ಏರುಪೇರು ಹಾಗೂ ಕೀಟಬಾಧೆ; ಕೋಲಾರದ ಮಾವು ಬೆಳೆಗಾರರಲ್ಲಿ ಹೆಚ್ಚಿದ ಆತಂಕ

(Kolar Mango Growers fed up of Infects and using infect nets to save fruits)

ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?