AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದ ವಿಸ್ಟ್ರಾನ್​ ಕಂಪನಿಗೆ ಮರುನೇಮಕ: ಪೊಲೀಸ್ ಠಾಣೆಯಲ್ಲಿ ಅಭ್ಯರ್ಥಿಗಳ ದಂಡು!

ವಿಸ್ಟ್ರಾನ್​ ಕಂಪನಿಯಲ್ಲಿ ಮತ್ತೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಈ ಹಿಂದೆ ಕೆಲಸ ಮಾಡುತ್ತಿದ್ದ ಕಾರ್ಮಿಕರನ್ನು ಸಂಸ್ಥೆ ಮತ್ತೆ ಕೆಲಸಕ್ಕೆ ಕರೆದಿದ್ದು, ಪೊಲೀಸರಿಂದ ನಿರಪೇಕ್ಷಣಾ ಪತ್ರ (ಎನ್​ಒಸಿ) ತರುವುದನ್ನು ಕಡ್ಡಾಯಗೊಳಿಸಲಾಗಿದೆ.

ಕೋಲಾರದ ವಿಸ್ಟ್ರಾನ್​ ಕಂಪನಿಗೆ ಮರುನೇಮಕ: ಪೊಲೀಸ್ ಠಾಣೆಯಲ್ಲಿ ಅಭ್ಯರ್ಥಿಗಳ ದಂಡು!
ವಿಸ್ಟ್ರಾನ್​ ಸಂಸ್ಥೆ
Follow us
Ghanashyam D M | ಡಿ.ಎಂ.ಘನಶ್ಯಾಮ
| Updated By: ಸಾಧು ಶ್ರೀನಾಥ್​

Updated on:Jan 18, 2021 | 3:45 PM

ಕೋಲಾರ: ವೇತನ ಸಮಸ್ಯೆಯಿಂದಾಗಿ ಕಾರ್ಮಿಕರು ಸಿಟ್ಟಿಗೆದ್ದು ದಾಂದಲೆ ನಡೆಸಿದ ಕಾರಣಕ್ಕೆ ದೇಶವ್ಯಾಪಿ ಸುದ್ದಿಯಾಗಿದ್ದ ವಿಸ್ಟ್ರಾನ್​ ಕಂಪನಿಯಲ್ಲಿ ಮತ್ತೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಈ ಹಿಂದೆ ಕೆಲಸ ಮಾಡುತ್ತಿದ್ದ ಕಾರ್ಮಿಕರನ್ನು ಸಂಸ್ಥೆ ಮತ್ತೆ ಕೆಲಸಕ್ಕೆ ಕರೆದಿದ್ದು, ಪೊಲೀಸರಿಂದ ನಿರಪೇಕ್ಷಣಾ ಪತ್ರ (ಎನ್​ಒಸಿ) ತರುವುದನ್ನು ಕಡ್ಡಾಯಗೊಳಿಸಲಾಗಿದೆ.

ಕೋಲಾರ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಅಭ್ಯರ್ಥಿಗಳ ದಂಡು ನೆರೆದಿದೆ. ಕಂಪನಿಯಿಂದ ಬಂದಿರುವ ಎಸ್​ಎಂಎಸ್ ತೋರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇದರ ಜೊತೆಗೆ ಆಧಾರ್​ ಕಾರ್ಡ್​, ಪಾನ್​ಕಾರ್ಡ್​ನ ಮೂಲ ಪ್ರತಿಗಳನ್ನು ತರಬೇಕು ಎಂದು ಸೂಚಿಸಲಾಗಿದೆ. ಸಿಬ್ಬಂದಿ ನೆರವಿನೊಂದಿಗೆ ಸಬ್​ ಇನ್​ಸ್ಪೆಕ್ಟರ್ ಕಿರಣ್​ ಸ್ವತಃ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

*Conditions Apply ! ಏನವು? ಪ್ರತಿ ಅಭ್ಯರ್ಥಿಯೂ ತಮ್ಮ ಪರವಾಗಿ ಸಾಕ್ಷಿ ಹಾಕಲು ತಮ್ಮ ಸಂಬಂಧಿಗಳಲ್ಲದ ಇಬ್ಬರು ಸ್ವಗ್ರಾಮ ನಿವಾಸಿಗಳನ್ನು ಕರೆತರಬೇಕು ಎಂದು ತಿಳಿಸಲಾಗಿದೆ. ಅಭ್ಯರ್ಥಿಗಳ ಹಿನ್ನೆಲೆಯನ್ನು ಕೂಲಂಕಶವಾಗಿ ಪರಿಶೀಲಿಸಿದ ನಂತರವಷ್ಟೇ ನಿರಪೇಕ್ಷಣಾ ಪತ್ರ ನೀಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಠಾಣೆ ಆವರಣದಲ್ಲಿ ಟಿವಿ9 ಪ್ರತಿನಿಧಿಯೊಂದಿಗೆ ಮಾತನಾಡಿದ ಅಭ್ಯರ್ಥಿ ಗೀತಾ, ‘ಕಾರ್ಖಾನೆಯಲ್ಲಿ ದಾಂದಲೆ ನಡೆಸಿ, ಆಸ್ತಿಪಾಸ್ತಿ ಹಾನಿ ಮಾಡಿದವರಿಗೆ ಕೆಲಸ ಕೊಡದಿದ್ದರೆ ಒಳ್ಳೆಯದು. ಕೋಲಾರ ಜಿಲ್ಲೆಗೆ ಒಂದು ಬಹುರಾಷ್ಟ್ರೀಯ ಕಂಪನಿ ಬಂದಿತ್ತು ಅನ್ನೋದು ಹೆಮ್ಮೆಯ ವಿಷಯವಾಗಿತ್ತು. ಹಳ್ಳಿಗಳಲ್ಲಿರುವ ಹಲವರಿಗೆ ಕೆಲಸ ಸಿಕ್ಕಿತ್ತು’ ಎಂದು ಹೇಳಿದರು.

ಮತ್ತೋರ್ವ ಅಭ್ಯರ್ಥಿ ವಿಜಯ್ ಮಾತನಾಡಿ, ‘ಗಲಾಟೆ ಆದ ಮೇಲೆ ಸಂಬಳದ ವಿಚಾರ ಇತ್ಯರ್ಥಪಡಿಸಿದ್ದಾರೆ. ನಮಗೆ ಮತ್ತೊಮ್ಮೆ ಕೆಲಸ ಕೊಡುವುದಾಗಿ ಹೇಳಿದ್ದಾರೆ. ಮತ್ತೆ ಕೆಲಸ ಶುರು ಆಗುವ ದಿನಾಂಕ ತಿಳಿಸಿಲ್ಲ. ನಮ್ಮದಲ್ಲದ ತಪ್ಪಿಗೆ ನಾವು ಮನೆಯಲ್ಲಿ ಕುಳಿತುಕೊಳ್ಳುವಂತೆ ಆಯಿತು. ಇದಕ್ಕಾಗಿ ಸಂಸ್ಥೆ ನಮಗೆ ಪರಿಹಾರ ಕೊಡಬೇಕು’ ಎಂದು ಒತ್ತಾಯಿಸಿದರು.

ಗೀತಾ ಮತ್ತು ವಿಜಯ್

ಕೋಲಾರ ಗ್ರಾಮಾಂತರ ಠಾಣೆಯಲ್ಲಿ ದಾಖಲೆ ಪರಿಶೀಲನೆ

ಪೊಲೀಸ್ ಠಾಣೆ ಎದುರು ಅಭ್ಯರ್ಥಿಗಳ ಸಾಲು

Wistron iPhone plant violence ತಪ್ಪು ಎರಡು ಕಡೆಯಿಂದಲೂ ಆಗಿದೆ, ಆದರೆ ಯಾರದೇ ಉದ್ಯೋಗಕ್ಕೂ ಚ್ಯುತಿ ಇಲ್ಲ

ವಿಸ್ಟ್ರಾನ್​ ಸಂಸ್ಥೆ ಪುನಾರಂಭಕ್ಕೆ ಭರದ ಸಿದ್ಧತೆ.. ಕೆಲಸ ಕಳೆದುಕೊಂಡ ಕಾರ್ಮಿಕರಿಗೆ ಮತ್ತೆ ಕೆಲಸ ಸಿಗುವ ನಿರೀಕ್ಷೆ

ಕಾರ್ಮಿಕರ ಗಲಭೆ ಸಂಸ್ಥೆಯ ಮೇಲೆ ಗಂಭೀರ ಪರಿಣಾಮ ಬೀರುವುದಿಲ್ಲ: ವಿಸ್ಟ್ರಾನ್​ ಸ್ಪಷ್ಟನೆ

Published On - 3:13 pm, Mon, 18 January 21

ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ