AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಲದಲ್ಲಿ ರೈತರಿಗೆ ಅಂಚೆ ಇಲಾಖೆ ಸಾಥ್​​; ಕೋಲಾರದ ಮಾವಿನ ಹಣ್ಣನ್ನು ಆನ್​ಲೈನ್ ಮೂಲಕ ಕೊಳ್ಳಲು ಅವಕಾಶ

ತಮ್ಮ ಜಮೀನುಗಳಲ್ಲಿ ಬೆಳೆದಿರುವ ಮಾವಿನ ತಳಿಗಳು, ಬೆಲೆ ಮತ್ತು ಮೊಬೈಲ್‌ ಸಂಖ್ಯೆಯ ವಿವರವನ್ನು ವೆಬ್‌ಸೈಟ್‌ನಲ್ಲಿ ದಾಖಲಿಸಿದ್ದಾರೆ. ಮಾವು ಪ್ರಿಯರು ಈ ವೆಬ್‌ಸೈಟ್‌ ವಿಳಾಸಕ್ಕೆ ಲಾಗಿನ್‌ ಆಗಿ ತಮ್ಮ ಮನೆಯ ವಿಳಾಸ ನಮೂದಿಸಿ ತಮ್ಮಿಷ್ಟದ ಹಣ್ಣಿಗೆ ಬೇಡಿಕೆ ಸಲ್ಲಿಸಬಹುದು.

ಕೊರೊನಾ ಕಾಲದಲ್ಲಿ ರೈತರಿಗೆ ಅಂಚೆ ಇಲಾಖೆ ಸಾಥ್​​; ಕೋಲಾರದ ಮಾವಿನ ಹಣ್ಣನ್ನು ಆನ್​ಲೈನ್ ಮೂಲಕ ಕೊಳ್ಳಲು ಅವಕಾಶ
ಅಂಚೆ ಇಲಾಖೆ ಜತೆಗೆ ಕೆಎಸ್‌ಎಂಡಿಎಂಸಿ ಒಪ್ಪಂದ
Follow us
TV9 Web
| Updated By: preethi shettigar

Updated on:Jun 11, 2021 | 9:23 AM

ಕೋಲಾರ: ಲಾಕ್​ಡೌನ್ ಕಾಲದಲ್ಲಿ ಮಾವಿನ ಬೆಳೆಗಾರರು ನಷ್ಟ ಅನುಭವಿಸಬಾರದು ಎಂಬ ಕಾರಣಕ್ಕೆ ಕೋಲಾರ ಜಿಲ್ಲಾಡಳಿತ ಶ್ರೀನಿವಾಸಪುರದಲ್ಲಿ ಮಾವಿನ ಮಾರುಕಟ್ಟೆ ಆರಂಭಿಸಲು ಅವಕಾಶ ಮಾಡಿಕೊಟ್ಟಿದೆ. ಜತೆಗೆ ಮಾವು ವಹಿವಾಟು ಕೂಡ ಈಗ ಆರಂಭವಾಗಿದೆ. ಈ ಮಧ್ಯೆ ಕೊವಿಡ್​ ಹಿನ್ನೆಲೆಯಲ್ಲಿ ಮಾವು ಬೆಳೆಗಾರರಿಗೆ ಹಾಗೂ ಗ್ರಾಹಕರಿಗೆ ತಮಗಿಷ್ಟ ಬಂದಿರುವ ಗುಣಮಟ್ಟದ ಮಾವಿನ ಹಣ್ಣುಗಳನ್ನು ಖರೀದಿ ಮಾಡಲು ಆನ್​ಲೈನ್​ ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ವೆಬ್​ಸೈಟ್​ ಜತೆಗೆ ಅಂಚೆ ಇಲಾಖೆ ಆನ್​ಲೈನ್​ ವ್ಯಾಪಾರ ವಹಿವಾಟು ಮಾಡಲು ಅನುವು ಮಾಡಿಕೊಟ್ಟಿದೆ.

ಮಾವು ಪ್ರಿಯರಿಗೆ ಅಡ್ಡಿಯಾಗುತ್ತಿಲ್ಲ ಲಾಕ್​ಡೌನ್​ ಪ್ರತಿ ವರ್ಷ ಮಾವಿನ ಋತು ಬಂದಾಗ ಕೆಜಿಗಟ್ಟಲೇ ಹಣ್ಣು ಖರೀದಿಸಿ ಸವಿಯುವ ಮಂದಿಗೆ ಈ ಬಾರಿ ಕೊವಿಡ್‌ ಅಡ್ಡಿಯಾಗಿದೆ. ಲಾಕ್‌ಡೌನ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಜನ ಮನೆಯಿಂದ ಹೊರ ಬಂದು ಮಾವು ಖರೀದಿಸಲು ಸಾಧ್ಯವಾಗುತ್ತಿಲ್ಲ. ಇದನ್ನು ಮನಗಂಡ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮವು (ಕೆಎಸ್‌ಎಂಡಿಎಂಸಿ) ಅಂಚೆ ಇಲಾಖೆ ನೆರವಿನೊಂದಿಗೆ ಜನರ ಮನೆ ಬಾಗಿಲಿಗೆ ಇಷ್ಟದ ಮಾವಿನ ಹಣ್ಣು ತಲುಪಿಸಲು ಮುಂದಾಗಿದೆ. ಹಿಂದಿನ ವರ್ಷ ಮೊದಲ ಲಾಕ್‌ಡೌನ್‌ ಸಂದರ್ಭದಲ್ಲೂ ಅಂಚೆ ಮೂಲಕ ಜನರಿಗೆ ಮಾವಿನ ಹಣ್ಣು ರವಾನಿಸಿ ಯಶಸ್ಸು ಕಂಡಿದ್ದ ಕೆಎಸ್‌ಎಂಡಿಎಂಸಿ ಮತ್ತೊಮ್ಮೆ ಆ ಪ್ರಯತ್ನ ಆರಂಭಿಸಿದೆ.

ಮಾವು ಮಾರುಕಟ್ಟೆ ಬಿಟ್ಟು ಆನ್​ಲೈನ್​ ಮಾರುಕಟ್ಟೆ ಮೊರೆ ಹೋದ ಮಾವು ಬೆಳೆಗಾರರು ಕೋಲಾರ ಜಿಲ್ಲೆಯು ಮಾವು ಬೆಳೆಗೆ ರಾಜ್ಯದಲ್ಲೇ ಹೆಸರುವಾಸಿಯಾಗಿದ್ದು, ಶ್ರೀನಿವಾಸಪುರ ತಾಲ್ಲೂಕು ಮಾವಿನ ನಗರಿ ಎಂದೇ ಖ್ಯಾತಿ ಪಡೆದಿದೆ. ಜಿಲ್ಲೆಯಲ್ಲಿ ಸುಮಾರು 48 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಮಾವು ಬೆಳೆದಿದ್ದು, ರಸಪುರಿ, ಆಲ್ಫಾನ್ಸೊ, ಬಂಗನಪಲ್ಲಿ, ಕೇಸರ್, ಸೆಂಧೂರ, ದಶಹರಿ, ಮಲ್ಲಿಕಾ, ತೋತಾಪುರಿ, ರಾಜ್‌ಗಿರಾ, ಮಲಗೋವಾ, ನೀಲಂ, ಶುಗರ್ ಬೇಬಿ, ಜಿಲ್ಲೆಯಲ್ಲಿ ಬೆಳೆಯುವ ಪ್ರಮುಖ ಮಾವಿನ ತಳಿಗಳಿವೆ.

ಪ್ರಸಕ್ತ ಹಂಗಾಮಿನಲ್ಲಿ ಸುಮಾರು 2.75 ಲಕ್ಷ ಟನ್‌ ಮಾವಿನ ಫಸಲು ನಿರೀಕ್ಷಿಸಲಾಗಿದ್ದು, ಸ್ಥಳೀಯ ಮಾರುಕಟ್ಟೆಯಲ್ಲಿ ಈಗಾಗಲೇ ಮಾವು ವಹಿವಾಟು ಆರಂಭವಾಗಿದೆ. ಆದರೆ, ಕೊವಿಡ್‌ ಮತ್ತು ಲಾಕ್‌ಡೌನ್‌ ಕಾರಣಕ್ಕೆ ನಿರೀಕ್ಷಿತ ಪ್ರಮಾಣದಲ್ಲಿ ವಹಿವಾಟು ನಡೆಯುತ್ತಿಲ್ಲ. ಹೀಗಾಗಿ ಮಾವಿನ ಬೆಲೆ ಇಳಿಕೆಯಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಈಗ ಜಾರಿಗೆ ತಂದ ಈ ವ್ಯವಸ್ಥೆ ಕೊವಿಡ್‌ ಸಂಕಷ್ಟದಲ್ಲಿ ಆನ್‌ಲೈನ್‌ ಮೂಲಕ ನಡೆಯುವ ಮಾವು ವಹಿವಾಟು ರೈತರಿಗೆ ಲಾಭದಾಯಕವಾಗಿದೆ. ಮತ್ತೊಂದೆಡೆ ಗ್ರಾಹಕರಿಗೂ ಅನುಕೂಲವಾಗಿದೆ.

ಅಂಚೆ ಇಲಾಖೆ ಜತೆಗೆ ಕೆಎಸ್‌ಎಂಡಿಎಂಸಿ ಒಪ್ಪಂದ ಕೆಎಸ್‌ಎಂಡಿಎಂಸಿ ಜತೆ ಒಪ್ಪಂದ ಮಾಡಿಕೊಂಡಿರುವ ಅಂಚೆ ಇಲಾಖೆಯು ವಾರದಲ್ಲಿ 2 ದಿನ (ಮಂಗಳವಾರ ಮತ್ತು ಶುಕ್ರವಾರ) ಪಾರ್ಸೆಲ್‌ ಸೇವೆ ಮೂಲಕ ಜನರಿಗೆ ಮಾವಿನ ಹಣ್ಣು ತಲುಪಿಸಲು ಸಿಬ್ಬಂದಿ ವ್ಯವಸ್ಥೆ ಮಾಡಿಕೊಂಡಿದೆ. ಈ ಸೇವೆ ಬೆಂಗಳೂರು ನಗರಕ್ಕೆ ಮಾತ್ರ ಸೀಮಿತವಾಗಿದೆ. ಅಂಚೆ ಸೇವೆ ಮೂಲಕ ಮಾವು ಮಾರಾಟ ಮಾಡಲು ಜಿಲ್ಲೆಯ 100ಕ್ಕೂ ಹೆಚ್ಚು ರೈತರು ಕೆಎಸ್‌ಎಂಡಿಎಂಸಿಯ www.karsirimangoes.karnataka.gov.in ವೆಬ್‌ಸೈಟ್‌ ವಿಳಾಸದಲ್ಲಿ ಹೆಸರು ನೋಂದಾಯಿಸಿದ್ದಾರೆ.

ಗ್ರಾಹಕರು ಹೇಗೆ ಆನ್​ಲೈನ್​ ಖರೀದಿ ಮಾಡುತ್ತಾರೆ ? ಈ ರೈತರು ತಮ್ಮ ಜಮೀನುಗಳಲ್ಲಿ ಬೆಳೆದಿರುವ ಮಾವಿನ ತಳಿಗಳು, ಬೆಲೆ ಮತ್ತು ಮೊಬೈಲ್‌ ಸಂಖ್ಯೆಯ ವಿವರವನ್ನು ವೆಬ್‌ಸೈಟ್‌ನಲ್ಲಿ ದಾಖಲಿಸಿದ್ದಾರೆ. ಮಾವು ಪ್ರಿಯರು ಈ ವೆಬ್‌ಸೈಟ್‌ ವಿಳಾಸಕ್ಕೆ ಲಾಗಿನ್‌ ಆಗಿ ತಮ್ಮ ಮನೆಯ ವಿಳಾಸ ನಮೂದಿಸಿ ತಮ್ಮಿಷ್ಟದ ಹಣ್ಣಿಗೆ ಬೇಡಿಕೆ ಸಲ್ಲಿಸಬಹುದು. ಕನಿಷ್ಠ 3 ಕೆಜಿ ಮಾವು ಖರೀದಿಸಬೇಕಿದ್ದು, ಒಂದೊಂದು ತಳಿಯ ಹಣ್ಣಿನ ಬೆಲೆ ಬೇರೆ ಬೇರೆಯಾಗಿದೆ.

ಗ್ರಾಹಕರು ಆಯ್ಕೆ ಮಾಡುವ ತಳಿ ಮತ್ತು ತೂಕದ ಪ್ರಮಾಣದ ಆಧಾರದಲ್ಲಿ ಬೆಲೆ ನಿಗದಿಯಾಗುತ್ತದೆ. ಇದರಲ್ಲಿ ಪಾರ್ಸಲ್‌ ಸೇವಾ ಶುಲ್ಕವೂ ಸೇರಿರುತ್ತದೆ. ಗ್ರಾಹಕರು ಆನ್‌ಲೈನ್‌ನಲ್ಲೇ ಹಣ ಪಾವತಿಸಬೇಕು. ಗ್ರಾಹಕರು ತಮ್ಮ ಇಷ್ಟದ ಹಣ್ಣು ಆಯ್ಕೆ ಮಾಡಿದಾಗ ಅದರ ದರ ಮತ್ತು ಅಂಚೆ ಸೇವಾ ಶುಲ್ಕದ ಮಾಹಿತಿ ಲಭ್ಯವಾಗುತ್ತದೆ. ಹೀಗೆ ಗ್ರಾಹಕರು ಆಯ್ಕೆ ಮಾಡಿದ ಹಣ್ಣಿನ ತಳಿ, ತೂಕ ಮತ್ತು ಮನೆ ವಿಳಾಸದ ವಿವರವು ಇಮೇಲ್‌ ಮೂಲಕ ಅಂಚೆ ಇಲಾಖೆ ಹಾಗೂ ಸಂಬಂಧಪಟ್ಟ ರೈತರಿಗೆ ರವಾನೆಯಾಗುತ್ತದೆ.

ಬಳಿಕ ರೈತರು ಮಾವಿನ ಹಣ್ಣುಗಳನ್ನು ಪ್ಯಾಕ್‌ ಮಾಡಿ ಬೆಂಗಳೂರಿನ ಪ್ರಧಾನ ಅಂಚೆ ಕಚೇರಿಗೆ ರವಾನಿಸುತ್ತಾರೆ. ಅಲ್ಲಿಂದ ಅಂಚೆಯಣ್ಣನ ಮೂಲಕ ಹಣ್ಣುಗಳು ಗ್ರಾಹಕರ ಕೈ ಸೇರುತ್ತೇವೆ. ಹೀಗೆ ಕೋಲಾರ ಜಿಲ್ಲೆಯ ಮಾವು ಬೆಳೆಗಾರರ ಹಿತದೃಷ್ಟಿಯಿಂದ ಕೆಎಸ್​ಎಂಡಿಎಂಸಿ ಅಂಚೆ ಇಲಾಖೆ ಜೊತೆಗೆ ಒಪ್ಪಂದ ಮಾಡಿಕೊಂಡು ಮಾಡಿದ ಆನ್​ಲೈನ್​ ವಹಿವಾಟು ಮಾವು ಬೆಳೆಗಾರರಿಗೆ ಸಾಕಷ್ಟು ಅನುಕೂವಾಗಿದೆ ಎಂದು ಕೋಲಾರ ತೋಟಗಾರಿಕಾ ಉಪನಿರ್ದೇಶಕಿ ಗಾಯತ್ರಿ ತಿಳಿಸಿದ್ದಾರೆ.

ಇದನ್ನೂ ಓದಿ:

Noor Jahan Mango: ಒಂದು ಮಾವಿನ ಹಣ್ಣಿಗೆ 500ರಿಂದ ಸಾವಿರ ರೂಪಾಯಿ! ಅಬ್ಬಬ್ಬಾ, ಎಲ್ಲಿ ಸಿಗುತ್ತದೆ ಈ ಮಾವು?

ಕೊರೊನಾ ಆತಂಕದ ನಡುವೆಯೂ ವ್ಯಾಪಾರಕ್ಕೆ ಅವಕಾಶ; ಕೋಲಾರದ ವಿಶ್ವ ಪ್ರಸಿದ್ಧ ಮಾವಿನ ಮಾರುಕಟ್ಟೆ ಆರಂಭ

Published On - 8:31 am, Fri, 11 June 21

ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್