ನನ್ನ ಗಂಡ ಒಳ್ಳೆಯವನೆ ಆದ್ರೆ….: ಡೆತ್ ನೊಟ್​ ಬರೆದಿಟ್ಟು ನವವಿವಾಹಿತೆ ಆತ್ಮಹತ್ಯೆ

ಪ್ರೀತಿಸಿ ಒಂದು ವರ್ಷದ ಹಿಂದೆ ಅಷ್ಟೇ ಸಪ್ತಪದಿ ತುಳಿದಿದ್ದ ಮಹಿಳೆ ದುರಂತ ಅಂತ್ಯಕಂಡಿದ್ದಾಳೆ. ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಮಾಡಿಕೊಂಡಿದ್ದಾಳೆ. ಡೆತ್​ನೋಟ್​ನಲ್ಲಿ ನನ್ನ ಪತಿ ಒಳ್ಳೆಯವರು ಎಂದು ತನ್ನ ತಂದೆ-ತಾಯಿಗೆ ಕ್ಷಮೆ ಕೇಳಿ ನೇಣಿಗೆ ಕೊರಳೊಡ್ಡಿದ್ದಾಳೆ. ಹಾಗಾದ್ರೆ, ಸಾವಿಗೆ ಕಾರಣವೇನು| ಮಹಿಳೆ ಬರೆದಿಟ್ಟ ಡೆತ್​ನೋಟ್​ನಲ್ಲೇನಿದೆ? ಎನ್ನುವ ವಿವರ ಇಲ್ಲಿದೆ.

ನನ್ನ ಗಂಡ ಒಳ್ಳೆಯವನೆ ಆದ್ರೆ....: ಡೆತ್ ನೊಟ್​ ಬರೆದಿಟ್ಟು ನವವಿವಾಹಿತೆ ಆತ್ಮಹತ್ಯೆ
Rashmi
Updated By: ರಮೇಶ್ ಬಿ. ಜವಳಗೇರಾ

Updated on: Apr 25, 2025 | 8:22 PM

ಕೋಲಾರ, (ಏಪ್ರಿಲ್ 25): ಪತಿಯ ಕುಟುಂಬಸ್ಥರಿಂದ ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮದುವೆಯಾದ ಒಂದೇ ವರ್ಷದಲ್ಲಿ ಮಹಿಳೆ ಆತ್ಮಹತ್ಯೆ (Woman Suicide) ಮಾಡಿಕೊಂಡಿದ್ದಾಳೆ. ಕೋಲಾರ (Kolar) ಜಿಲ್ಲೆ ಮಾಲೂರು ತಾಲೂಕು ಕಾಡದೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 25 ವರ್ಷದ ರಶ್ಮೀ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಡೆತ್​ನೋಟ್​ನಲ್ಲಿ ತನ್ನ ಪತಿ ಹಾಗೂ ತನ್ನ ತಂದೆ ತಾಯಿಗೂ ಸಾರಿ ಕೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಲ್ಲದೇ ನಿಮ್ಮ ಅಮ್ಮ (ಪತಿಯ ತಾಯಿ), ದೊಡ್ಡಮ್ಮನ ಕಾಟ ತಡೆಯೋಕ್ಕೆ ಆಗುತ್ತಿಲ್ಲ. ಇವರು ಒಳ್ಳೆಯವರಲ್ಲ ಎಂದು ಬರೆದಿಟ್ಟು ಸಾವಿಗೆ ಶರಣಾಗಿದ್ದಾಳೆ.

ದಿನೇಶ್ ಹಾಗೂ ರಶ್ಮಿ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. 1 ವರ್ಷದ ಹಿಂದೆ ಅಷ್ಟೇ ಇಬ್ಬರೂ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಆದ್ರೆ, ಒಂದೇ ವರ್ಷದಲ್ಲಿ ರಶ್ಮಿ ದುರಂತ ಸಾವು ಕಂಡಿದ್ದಾಳೆ. ಪತಿ ಮನೆಯಲ್ಲೇ ಡೆತ್‌ನೋಟ್‌ ಬರೆದಿಟ್ಟು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಇನ್ಸ್ಟಾಗ್ರಾಮ್​ನಲ್ಲಿ ರಾಯಚೂರು-ಚಾಮರಾಜನಗರ ನಂಟು: ಯುವತಿ ಕೊರಳಿಗೆ 3 ಗಂಟು, ಪತಿ ಅರೆಸ್ಟ್

ರಶ್ಮಿ ಡೆತ್​ನೋಟ್​ನಲ್ಲೇನಿದೆ?

ರೀ ಸಾರಿ ನಿಮ್ಮ ಅಮ್ಮ, ದೊಡ್ಡಮ್ಮನ ಕಾಟ ತಡೆಯೋಕ್ಕೆ ಆಗುತ್ತಿಲ್ಲ, ನಾನು ಬಂದಾಗಿನಿಂದ ನೆಮ್ಮದಿಯೆ ಇಲ್ಲ, ನಾನು ಸಹಿಸಿಕೊಳ್ಳೋಕೆ ಆಗುತ್ತಿಲ್ಲ, ನನ್ನ ಗಂಡ ಒಳ್ಳಯವನೆ . ಆದ್ರೆ ಮನೆಯವರು ಒಳ್ಳೆಯವರಲ್ಲ. ಅದಕ್ಕೆ ನೀವು ಬರುವಷ್ಟರಲ್ಲಿ ಸಾಯುತ್ತಿದ್ದೇನೆ ಬಾಯ್​. ಅಮ್ಮ ಇಷ್ಟು ದಿನ ಇಲ್ಲಿನ ಕಷ್ಟ ಸಹಿಸಿಕೊಂಡೆ. ಇಲ್ಲಿನವರು ಒಳ್ಳಯವರಲ್ಲ. ವರದಕ್ಷಿಣೆ ತಂದಿಲ್ಲ ಎಂದು ಹೊಡೆಯುತ್ತಾರೆ ಎಂದು ಉಲ್ಲೇಖ ಮಾಡಿರುವ ರಶ್ಮಿ, ಪತಿ ಹಾಗೂ ತನ್ನ ತಂದೆ ತಾಯಿಗೂಗೂ ಸಾರಿ ಕೇಳಿ ಗಂಡನ ಮನೆಯವರ ಮಾನಸಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾಳೆ

ಇದನ್ನೂ ಓದಿ
ಇನ್ಸ್ಟಾಗ್ರಾಮ್​ನಲ್ಲಿ ರಾಯಚೂರು-ಚಾಮರಾಜನಗರ ನಂಟು: ಯುವತಿ ಕೊರಳಿಗೆ 3 ಗಂಟು!
ಗದಗ: ವಿಡಿಯೋ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್, ಯುವತಿ ಆತ್ಮಹತ್ಯೆ
ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಮಂಗಳಮುಖಿಯ ಬರ್ಬರ ಹತ್ಯೆ
ಪ್ರೀತಿ ದೈಹಿಕ ಸಂಪರ್ಕಕ್ಕೆ ತಿರುಗಿ ಮಗು ಜನನ: ಕಸದ ಬುಟ್ಟಿಗೆ ಶಿಶು!

ಇನ್ನೂ ಮೂರು ತಿಂಗಳ ಹಿಂದೆ ರಶ್ಮಿಗೆ ಗರ್ಭಪಾತವಾಗಿತ್ತು. ಹೀಗಾಗಿ ವರದಕ್ಷಿಣೆ ನೀಡಿಲ್ಲ, ಮಗು ಆಗಿಲ್ಲ ಎಂದು ಮಾನಸಿಕ ಹಿಂಸೆ ನೀಡುತ್ತಿದ್ದರು ಎನ್ನಲಾಗಿದೆ. ಸದ್ಯ ರಶ್ಮಿ ಡೆತ್​ನೋಟ್​ ಆಧರಿಸಿ ದೂರು ದಾಖಲಿಸಿಕೊಂಡಿರುವ ಮಾಲೂರು ಪೊಲೀಸರು, ಪತಿ ಸೇರಿದಂತೆ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.