AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಎರಡು ತಿಂಗಳಿಂದ ವೇತನ ನೀಡಿಲ್ಲವೆಂದು ಪೌರಕಾರ್ಮಿಕ ಆತ್ಮಹತ್ಯೆಗೆ ಯತ್ನ; ಇಲ್ಲಿದೆ ವಿವರ

ಕೋಲಾರ ನಗರಸಭೆ ಕಚೇರಿ ಬಳಿಯೇ ವಿಷ ಕುಡಿದು ಬಿದ್ದಿದ್ದ ಪೌರಕಾರ್ಮಿಕ ಶಿವಕುಮಾರ್​ನನ್ನು ಸದ್ಯ ಎಸ್‌ಎನ್‌ಆರ್‌ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಶಿವಕುಮಾರ್​ಗೆ ಐಸಿಯು ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದೀಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ.

ಕೋಲಾರ: ಎರಡು ತಿಂಗಳಿಂದ ವೇತನ ನೀಡಿಲ್ಲವೆಂದು ಪೌರಕಾರ್ಮಿಕ ಆತ್ಮಹತ್ಯೆಗೆ ಯತ್ನ; ಇಲ್ಲಿದೆ ವಿವರ
ಕೋಲಾರ ನಗರಸಭೆ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Oct 10, 2023 | 9:02 PM

Share

ಕೋಲಾರ,ಅ.10: ಎರಡು ತಿಂಗಳಿಂದ ವೇತನ ನೀಡಿಲ್ಲವೆಂದು ಪೌರಕಾರ್ಮಿಕನೊಬ್ಬ ಕೋಲಾರ (Kolar) ನಗರಸಭೆ ಕಚೇರಿ ಬಳಿಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಶಿವಕುಮಾರ್‌ ಆತ್ಮಹತ್ಯೆಗೆ ಯತ್ನಿಸಿದ ಪೌರ ಕಾರ್ಮಿಕ. ಇನ್ನು ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೋಲಾರಮ್ಮ ಬಡಾವಣೆ ನಿವಾಸಿಯಾಗಿರುವ ಶಿವಕುಮಾರ್‌ ಎರಡು ತಿಂಗಳಿಂದ ವೇತನ ಸಿಕ್ಕಿಲ್ಲ, ಕೆಲಸಕ್ಕೆ ಹೋಗಿದ್ದರೂ ಗೈರು ಹಾಜರಿ ಎಂದು ಹಾಕಿದ್ದಾರೆ. ಜೊತೆಗೆ ಆರೋಗ್ಯ ನಿರೀಕ್ಷಕ ಹಾಗೂ ಆಯುಕ್ತರು ಪತಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆತನ ಪತ್ನಿ ರುಕ್ಮಿಣಿ ಆರೋಪಿಸಿದ್ದಾರೆ.

ಇಂದು ಮಧ್ಯಾಹ್ನ ನಗರಸಭೆ ಕಚೇರಿ ಬಳಿಯೇ ವಿಷ ಕುಡಿದು ಬಿದ್ದಿದ್ದ ಪೌರಕಾರ್ಮಿಕ ಶಿವಕುಮಾರ್​ನನ್ನು ಸದ್ಯ ಎಸ್‌ಎನ್‌ಆರ್‌ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಶಿವಕುಮಾರ್​ಗೆ ಐಸಿಯು ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದೀಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನು ಪತಿ 25 ರಿಂದ 30 ವರ್ಷಗಳಿಂದ ನಗರಸಭೆಯಲ್ಲಿ ಕೆಲಸ ಮಾಡುತ್ತಿದ್ದರೆ, ಇತ್ತ ಆತನ ಪತ್ನಿ ರುಕ್ಮಿಣಿ ಕೂಡ ನಗರಸಭೆ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಈ ಘಟನೆ ಕುರಿತು ವಿಷಯ ತಿಳಿಯುತ್ತಿದ್ದಂತೆ ಕೋಲಾರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ರಾಜಸ್ಥಾನ: ಸಿಕಾರ್​ನಲ್ಲಿ ನೀಟ್​ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ, 3 ದಿನಗಳಲ್ಲಿ ಎರಡನೇ ಸಾವು

ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ವಯೋವೃದ್ಧರಿಗೆ ಕಪಾಳಮೋಕ್ಷ ಮಾಡಿದ ಯುವಕ

ಯಾದಗಿರಿ: ಗಾರ್ಡನ್​ನಲ್ಲಿ ಸಿಗರೇಟ್ ಸೇದಬೇಡಿ ಎಂದು ಹೇಳಿದ್ದಕ್ಕೆ ಯುವಕನೋರ್ವ ವಯೋವೃದ್ಧರಿಗೆ ಕಪಾಳಮೋಕ್ಷ ಮಾಡಿದ ಘಟನೆ ಯಾದಗಿರಿ ನಗರದ ಹೊಸಹಳ್ಳಿ ಕ್ರಾಸ್ ಬಳಿ ನಡೆದಿದೆ. ‘ನಾವು ಏನ್ ಬೇಕಾದ್ರು ಮಾಡುತ್ತೀವಿ, ನೀವು ಯಾರು ಕೇಳುವುದಕ್ಕೆ ಎಂದು ಉದ್ದಟನ ಮೆರೆದಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:01 pm, Tue, 10 October 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ