ಕೋಲಾರ: ಎರಡು ತಿಂಗಳಿಂದ ವೇತನ ನೀಡಿಲ್ಲವೆಂದು ಪೌರಕಾರ್ಮಿಕ ಆತ್ಮಹತ್ಯೆಗೆ ಯತ್ನ; ಇಲ್ಲಿದೆ ವಿವರ

ಕೋಲಾರ ನಗರಸಭೆ ಕಚೇರಿ ಬಳಿಯೇ ವಿಷ ಕುಡಿದು ಬಿದ್ದಿದ್ದ ಪೌರಕಾರ್ಮಿಕ ಶಿವಕುಮಾರ್​ನನ್ನು ಸದ್ಯ ಎಸ್‌ಎನ್‌ಆರ್‌ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಶಿವಕುಮಾರ್​ಗೆ ಐಸಿಯು ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದೀಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ.

ಕೋಲಾರ: ಎರಡು ತಿಂಗಳಿಂದ ವೇತನ ನೀಡಿಲ್ಲವೆಂದು ಪೌರಕಾರ್ಮಿಕ ಆತ್ಮಹತ್ಯೆಗೆ ಯತ್ನ; ಇಲ್ಲಿದೆ ವಿವರ
ಕೋಲಾರ ನಗರಸಭೆ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 10, 2023 | 9:02 PM

ಕೋಲಾರ,ಅ.10: ಎರಡು ತಿಂಗಳಿಂದ ವೇತನ ನೀಡಿಲ್ಲವೆಂದು ಪೌರಕಾರ್ಮಿಕನೊಬ್ಬ ಕೋಲಾರ (Kolar) ನಗರಸಭೆ ಕಚೇರಿ ಬಳಿಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಶಿವಕುಮಾರ್‌ ಆತ್ಮಹತ್ಯೆಗೆ ಯತ್ನಿಸಿದ ಪೌರ ಕಾರ್ಮಿಕ. ಇನ್ನು ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೋಲಾರಮ್ಮ ಬಡಾವಣೆ ನಿವಾಸಿಯಾಗಿರುವ ಶಿವಕುಮಾರ್‌ ಎರಡು ತಿಂಗಳಿಂದ ವೇತನ ಸಿಕ್ಕಿಲ್ಲ, ಕೆಲಸಕ್ಕೆ ಹೋಗಿದ್ದರೂ ಗೈರು ಹಾಜರಿ ಎಂದು ಹಾಕಿದ್ದಾರೆ. ಜೊತೆಗೆ ಆರೋಗ್ಯ ನಿರೀಕ್ಷಕ ಹಾಗೂ ಆಯುಕ್ತರು ಪತಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆತನ ಪತ್ನಿ ರುಕ್ಮಿಣಿ ಆರೋಪಿಸಿದ್ದಾರೆ.

ಇಂದು ಮಧ್ಯಾಹ್ನ ನಗರಸಭೆ ಕಚೇರಿ ಬಳಿಯೇ ವಿಷ ಕುಡಿದು ಬಿದ್ದಿದ್ದ ಪೌರಕಾರ್ಮಿಕ ಶಿವಕುಮಾರ್​ನನ್ನು ಸದ್ಯ ಎಸ್‌ಎನ್‌ಆರ್‌ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಶಿವಕುಮಾರ್​ಗೆ ಐಸಿಯು ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದೀಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನು ಪತಿ 25 ರಿಂದ 30 ವರ್ಷಗಳಿಂದ ನಗರಸಭೆಯಲ್ಲಿ ಕೆಲಸ ಮಾಡುತ್ತಿದ್ದರೆ, ಇತ್ತ ಆತನ ಪತ್ನಿ ರುಕ್ಮಿಣಿ ಕೂಡ ನಗರಸಭೆ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಈ ಘಟನೆ ಕುರಿತು ವಿಷಯ ತಿಳಿಯುತ್ತಿದ್ದಂತೆ ಕೋಲಾರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ರಾಜಸ್ಥಾನ: ಸಿಕಾರ್​ನಲ್ಲಿ ನೀಟ್​ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ, 3 ದಿನಗಳಲ್ಲಿ ಎರಡನೇ ಸಾವು

ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ವಯೋವೃದ್ಧರಿಗೆ ಕಪಾಳಮೋಕ್ಷ ಮಾಡಿದ ಯುವಕ

ಯಾದಗಿರಿ: ಗಾರ್ಡನ್​ನಲ್ಲಿ ಸಿಗರೇಟ್ ಸೇದಬೇಡಿ ಎಂದು ಹೇಳಿದ್ದಕ್ಕೆ ಯುವಕನೋರ್ವ ವಯೋವೃದ್ಧರಿಗೆ ಕಪಾಳಮೋಕ್ಷ ಮಾಡಿದ ಘಟನೆ ಯಾದಗಿರಿ ನಗರದ ಹೊಸಹಳ್ಳಿ ಕ್ರಾಸ್ ಬಳಿ ನಡೆದಿದೆ. ‘ನಾವು ಏನ್ ಬೇಕಾದ್ರು ಮಾಡುತ್ತೀವಿ, ನೀವು ಯಾರು ಕೇಳುವುದಕ್ಕೆ ಎಂದು ಉದ್ದಟನ ಮೆರೆದಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:01 pm, Tue, 10 October 23

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು