AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಯೂಸ್​ ಕುಡಿದ ತಕ್ಷಣ ವ್ಯಕ್ತಿಯೊಬ್ಬರ ಆರೋಗ್ಯದಲ್ಲಿ ಏರುಪೇರು: ಸಾಲ ವಾಪಸ್ ಕೇಳಿದ್ದಕ್ಕೆ ವಿಷ ಹಾಕಿದ್ರಾ?

ಜ್ಯೂಸ್ ಕುಡಿದ ವ್ಯಕ್ತಿ ಆರೋಗ್ಯದಲ್ಲಿ ಏರುಪೇರಾಗಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಯಲ್ಲೂರು ಗ್ರಾಮದಲ್ಲಿ ನಡೆದಿದೆ. ಕೊಟ್ಟ ಸಾಲ ವಾಪಾಸ್ ಕೇಳಿದ್ದಕ್ಕೆ ಜ್ಯೂಸ್ ಪಾಕೆಟ್‌ನಲ್ಲಿ ವಿಷ ಬೆರೆಸಿ ಕುಡಿಸಿದ್ದಾನೆ ಎಂಬ ಆರೋಪಿಸಲಾಗಿದೆ.

ಜ್ಯೂಸ್​ ಕುಡಿದ ತಕ್ಷಣ ವ್ಯಕ್ತಿಯೊಬ್ಬರ ಆರೋಗ್ಯದಲ್ಲಿ ಏರುಪೇರು: ಸಾಲ ವಾಪಸ್ ಕೇಳಿದ್ದಕ್ಕೆ ವಿಷ ಹಾಕಿದ್ರಾ?
TV9 Web
| Edited By: |

Updated on: Apr 02, 2024 | 11:00 PM

Share

ಕೋಲಾರ (ಏಪ್ರಿಲ್ 03): ಜ್ಯೂಸ್​ ಕುಡಿದ ತಕ್ಷಣ ವ್ಯಕ್ತಿಯೋಬ್ಬರ ಆರೋಗ್ಯದಲ್ಲಿ ಏರುಪೇರಾಗಿದೆ. ಕೊಟ್ಟ ಸಾಲ ವಾಪಾಸ್ ಕೇಳಿದ್ದಕ್ಕೆ ಜ್ಯೂಸ್  ಕುಡಿದ  ಪಾಕೆಟ್‌ನಲ್ಲಿ ವಿಷ ಬೆರೆಸಿ ಕುಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಯಲ್ಲೂರು ಗ್ರಾಮದಲ್ಲಿ ನಡೆದಿದೆ. ಸಾಲ ನೀಡಿರುವ ಆಚಂಪಲ್ಲಿ ಗ್ರಾಮದ ಗೋಪಾಲಪ್ಪ ಜ್ಯೂಸ್ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾಲ ಪಡೆದಿರುವ ಕೊಳತೂರು ಗ್ರಾಮದ ಶಿವಣ್ಣಕೊಳತೂರು ಗ್ರಾಮದ ಶಿವಣ್ಣ ಜ್ಯೂಸ್​ನಲ್ಲಿ ವಿಷ ಹಾಕಿ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ದೂರು ದಾಖಲಾಗಿದೆ.

ಸಾಲ ನೀಡಿರುವ ಆಚಂಪಲ್ಲಿ ಗ್ರಾಮದ ಗೋಪಾಲಪ್ಪ ವಿಷಯುಕ್ತ ಜ್ಯೂಸ್ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಳತೂರು ಗ್ರಾಮದ ಶಿವಣ್ಣ ಎಂಬುವವರಿಗೆ ಗೋಪಾಲಪ್ಪ ಎನ್ನುವರು 1 ಲಕ್ಷದ 11 ಸಾವಿರ ರೂಪಾಯಿ ಸಾಲ ನೀಡಿದ್ದರು. ಆದರೆ ಸಾಲ ಪಡೆದು ವಾಪಸ್ ನೀಡಲು ಶಿವಣ್ಣ ವಿಳಂಬ ಮಾಡಿದ್ದಾರೆ. ಇದರಿಂದ ಇಂದು(ಏಪ್ರಿಲ್ 03) ಗೋಪಾಲಕೃಷ್ಣ ಸಾಲ ವಾಪಸ್ ಕೇಳಲು ಯಲ್ಲೂರು ಗ್ರಾಮಕ್ಕೆ ಬಂದಿದ್ದಾನೆ.

ಸಾಲ ಕೊಡುವುದಾಗಿ ಸ್ವಲ್ಪ ಕಾಲಾವಕಾಶ ಕೊಡು ಎಂದು ಕೇಳಿ ಬಸ್ ನಿಲ್ದಾಣಕ್ಕೆ ತನ್ನ ಬೈಕ್​ನಲ್ಲೇ ಡ್ರಾಪ್ ಮಾಡಿದ ಶಿವಣ್ಣ. ಬಸ್ ನಿಲ್ದಾಣದ ಬಳಿ ಗೋಪಾಲಪ್ಪಗೆ ಜ್ಯುಸ್ ಪ್ಯಾಕೇಟ್ ಕೊಡಿಸಿದ್ದಾನೆ. ಆದ್ರೆ, ಜ್ಯೂಸ್ ಸೇವಿಸಿದ ತಕ್ಷಣ ಗೋಪಾಲಪ್ಪಗೆ ಬಾಯಿ ಉರಿ, ಎದೆಯುರಿ ಶುರುವಾಗಿದೆ. ತಕ್ಷಣ ಗೋಪಾಲಪ್ಪ ಜ್ಯೂಸ್ ಪಾಕೆಟ್ ಸಮೇತ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನು ಬಗ್ಗೆ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ 307 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ