AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುದ್ದಗಳಲ್ಲಿ ಹೋರಾಡಿ ಮಡಿದ ವೀರ ಯೋಧರ ನೆನಪಿನಲ್ಲಿ ನಿರ್ಮಾಣವಾಗುತ್ತಿರುವ ಅಪರೂಪದ ಪಾರ್ಕ್; ಎಲ್ಲಿ ಅಂತೀರಾ? ಈ ಸ್ಟೋರಿ ನೋಡಿ

ಯುದ್ದಗಳಲ್ಲಿ ಹೋರಾಡಿ ಮಡಿದ ವೀರ ಯೋಧರ ನೆನಪಿನಲ್ಲಿ ಇಲ್ಲೊಂದು ಪಾರ್ಕ್​ ನಿರ್ಮಾಣವಾಗುತ್ತಿದೆ. ಈ ಪಾರ್ಕ್​ನಲ್ಲಿ ಕಂಡು ಬರುವ ಹತ್ತಾರು ಬಗೆಯ ವೀರಗಲ್ಲುಗಳು ಹಲವು ಸಂಸ್ಥಾನಗಳ ಹಾಗೂ ರಾಜ ಮನೆತನಗಳ ಇತಿಹಾಸ ನೆನಪಿಸುತ್ತವೆ. ಇಂತಹ ಇತಿಹಾಸ ಹೊಂದಿರುವ ಈ ವೀರಗಲ್ಲುಗಳನ್ನು ಸಂರಕ್ಷಿಸು ಕಾರ್ಯ ಕೋಲಾರದಲ್ಲಿ ನಡೆಯುತ್ತಿದೆ.

ಯುದ್ದಗಳಲ್ಲಿ ಹೋರಾಡಿ ಮಡಿದ ವೀರ ಯೋಧರ ನೆನಪಿನಲ್ಲಿ ನಿರ್ಮಾಣವಾಗುತ್ತಿರುವ ಅಪರೂಪದ ಪಾರ್ಕ್;  ಎಲ್ಲಿ ಅಂತೀರಾ? ಈ ಸ್ಟೋರಿ ನೋಡಿ
ಯುದ್ದದಲ್ಲಿ ಮಡಿದ ವೀರಯೋಧರ ನೆನಪಿಗಾಗಿ ಕೋಲಾರದಲ್ಲಿ ನಿರ್ಮಾಣವಾಗುತ್ತಿರುವ ಪಾರ್ಕ್​
TV9 Web
| Edited By: |

Updated on:Mar 01, 2023 | 7:12 AM

Share

ಕೋಲಾರ: ಜಿಲ್ಲೆಗೆ ಸಾವಿರಾರು ವರ್ಷಗಳ ಇತಿಹಾಸ ಇದೆ, ಇಲ್ಲಿ ಚೋಳರು, ಗಂಗರು, ಚಾಲುಕ್ಯರು ಹೀಗೆ ಹಲವು ರಾಜಮನೆತನಗಳು ಆಳಿರುವ ನೂರಾರು ಕುರುಹುಗಳು ಕೋಲಾರದಲ್ಲಿ ಸಿಗುತ್ತವೆ. ಇಂಥ ಇತಿಹಾಸ ಹೊಂದಿರುವ ಜಿಲ್ಲೆಯಲ್ಲಿ ರಾಜ್ಯದಲ್ಲೇ ಇದೇ ಮೊದಲ ಬಾರಿಗೆ ಕೋಲಾರ ಜಿಲ್ಲಾ ಪಂಚಾಯತಿ ಮಹತ್ವದ ಯೋಜನೆಯೊಂದನ್ನು ರೂಪಿಸಿದೆ. ಅದು ಕೋಲಾರ ಜಿಲ್ಲೆಯಲ್ಲಿರುವ ಇತಿಹಾಸಕ್ಕೆ ಸಾಕ್ಷಿಯಾಗಿ ನಿಲ್ಲುವ ನೂರಾರು ವೀರಗಲ್ಲುಗಳನ್ನು ಸಂರಕ್ಷಿಸುವ ಹಾಗೂ ಅವುಗಳನ್ನು ಒಂದೆಡೆ ಸುರಕ್ಷಿತವಾಗಿ ಇಡುವ ಮೂಲಕ ಆ ವೀರಗಲ್ಲುಗಳ ಇತಿಹಾಸವನ್ನು ಮುಂದಿನ ತಲೆ ತಲೆಮಾರಿಗೆ ತಿಳಿಸುವ ಪ್ರಯತ್ನವೊಂದು ನಡೆಯುತ್ತಿದೆ. ಆ ನಿಟ್ಟಿನಲ್ಲಿ ಕೋಲಾರ ಜಿಲ್ಲಾ ಪಂಚಾಯತಿ ಸಿಇಓ ಯುಕೇಶ್​ ಕುಮಾರ್​ ಜಿಲ್ಲೆಯಲ್ಲಿ ಹಲವೆಡೆ ವೀರಗಲ್ಲು ಪಾರ್ಕ್​ ನಿರ್ಮಾಣ ಮಾಡಿ ಜಿಲ್ಲೆಯ ಹಲವು ಭಾಗಗಳಲ್ಲಿ ಎಲ್ಲೆಂದರಲ್ಲಿ ಬಿದ್ದು ಹಾಳಾಗುತ್ತಿದ್ದ ವೀರಗಲ್ಲುಗಳನ್ನು ಸುರಕ್ಷಿತವಾಗಿ ಒಂದೆಡೆ ಸಂರಕ್ಷಿಸಿ ಅದನ್ನು ಒಂದೊಳ್ಳೆ ಮಾಹಿತಿ ಕೇಂದ್ರವನ್ನಾಗಿ ಮಾಡುವ ಕೆಲಸ ನಡೆಯುತ್ತಿದೆ.

ಸದ್ಯಕ್ಕೆ ಕೋಲಾರ ತಾಲೂಕಿನ ಅರಾಭಿಕೊತ್ತನೂರು, ಮಾಲೂರು ತಾಲೂಕಿನ ದೊಡ್ಡಶಿವಾರ, ಬಂಗಾರಪೇಟೆ ತಾಲೂಕಿನ ಹುನುಕುಂದ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಇಂತಹದೊಂದು ವೀರಗಲ್ಲು ಪಾರ್ಕ್​ ನಿರ್ಮಾಣ ಕಾರ್ಯ ನಡೆಯುತ್ತಿದೆ. ಅದರಲ್ಲೂ ಕೇವಲ ವೀರಗಲ್ಲುಗಳಷ್ಟೇ ಅಲ್ಲದೆ ಅಲ್ಲಿನ ಆ ಗ್ರಾಮಗಳ ಸುತ್ತಮುತ್ತ ಸಿಗುವ ಇತಿಹಾಸವನ್ನು ನೆನಪಿಸುವ ಶಿಲಾ ಶಾಸನಗಳನ್ನು ಹಾಗೂ ಕೆಲವೊಂದು ಇತಿಹಾಸ ಹೇಳುವ ಕುರುಹುಗಳು ಎಲ್ಲವನ್ನೂ ಪಾರ್ಕ್​ನಲ್ಲಿ ಸುರಕ್ಷಿತವಾಗಿ ಒಂದೇ ಸೂರಿನಡಿಯಲ್ಲಿ ನಿರ್ಮಾಣ ಮಾಡುವ ಕೆಲಸ ನಡೆಯುತ್ತಿದೆ.

ಇದನ್ನೂ ಓದಿ:ಬಂಗಾರದ ಗುಡಿ ಕೋಲಾರದಲ್ಲೀಗ ಮಣ್ಣು ಕೂಡ ಚಿನ್ನವಾಗಿದೆ! ಫಲವತ್ತಾದ ಮಣ್ಣು ನಿರಂತರ ಲೂಟಿ, ಆದರೆ ಅಧಿಕಾರಿಗಳು ಮಾಡುತ್ತಿರುವುದು ಏನು?

ಈ ಪಾರ್ಕ್​ ವಿದ್ಯಾರ್ಥಿಗಳಿಗೆ ಭೋದನಾ ಕೇಂದ್ರವನ್ನಾಗಿ ಮಾಡುವ ಸ್ಥಳವಾಗಿ ಕೂಡಾ ನಿರ್ಮಾಣ ಮಾಡಲಾಗುತ್ತಿದೆ. ಸದ್ಯ ಜಿಲ್ಲೆಯಲ್ಲಿ ಮೂರು ಸ್ಥಳಗಳಲ್ಲಿ ಇಂಥಾದೊಂದು ಪಾರ್ಕ್​ ನಿರ್ಮಾಣ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನು ಹಲವು ತಾಲ್ಲೂಕುಗಳಲ್ಲಿ ವೀರಗಲ್ಲು ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದಿದ್ದಾರೆ. ಒಟ್ಟಾರೆ ರಾಜ್ಯದಲ್ಲೇ ಮೊದಲ ಬಾರಿಗೆ ಸಾವಿರಾರು ವರ್ಷಗಳ ಇತಿಹಾಸ ಹೇಳುವ ವೀರಗಲ್ಲುಗಳನ್ನು ಸಂರಕ್ಷಿಸುವ ಮೂಲಕ ಅವುಗಳ ಇತಿಹಾಸವನ್ನು ಮುಂದಿನ ತಲೆ ಮಾರುಗಳಿಗೆ ತಿಳಿಸುವ ಒಂದು ಬೋಧನಾ ಕೇಂದ್ರವನ್ನಾಗಿ ನಿರ್ಮಾಣ ಮಾಡುತ್ತಿರುವುದು ನಿಜಕ್ಕೂ ವಿಭಿನ್ನ ಹಾಗೂ ಅಪರೂಪ ಎನ್ನುವುದರಲ್ಲಿ ಎರಡು ಮಾತಿಲ್ಲ.

ವರದಿ: ರಾಜೇಂದ್ರಸಿಂಹ ಟಿವಿ9 ಕೋಲಾರ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:10 am, Wed, 1 March 23

ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ