AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳ ಕೈಗೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಪಿಡಿಒ

ಶ್ರೀನಿವಾಸಪುರ ತಾಲ್ಲೂಕಿನ ‌ಲಕ್ಷ್ಮೀಪುರ ಗ್ರಾಮ‌ಪಂಚಾಯತ ಅಭಿವೃದ್ದಿ ಅಧಿಕಾರಿ ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾನೆ.

ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳ ಕೈಗೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಪಿಡಿಒ
ಭ್ರಷ್ಟಾಚಾರ ನಿಗ್ರಹ ದಳ
TV9 Web
| Edited By: |

Updated on:Jul 26, 2022 | 8:18 PM

Share

ಕೋಲಾರ: ಶ್ರೀನಿವಾಸಪುರ ತಾಲ್ಲೂಕಿನ ‌ಲಕ್ಷ್ಮೀಪುರ ಗ್ರಾಮ‌ಪಂಚಾಯತ ಅಭಿವೃದ್ದಿ ಅಧಿಕಾರಿ ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾನೆ. ಅಧಿಕಾರಿ ಶಂಕರಪ್ಪ, ವೆಂಕಟರಾಜು ಎಂಬುವವರ ಬಳಿ ಖಾತೆ ಬದಲಾವಣೆಗೆ ಹಣಕ್ಕೆ ಬೇಡಿಕೆ ಇಟ್ಟಿದ್ದನು.  ವೆಂಕಟರಾಜು ಎಂಬುವರಿಂದ ೧೫ ಸಾವಿರ ಬೇಡಿಕೆ ಇಟ್ಟು‌ ಮುಂಗಡ ೨ ಪಡೆದಿದ್ದನು. ಇಂದು (ಜುಲೈ 26) ಲಕ್ಣ್ಮೀ ಪುರ ಮಯೂರಿ ಬಾರ್ ಅಂಡ್ ರೆಸ್ಟೋರೆಂಟ್ ಬಳಿ ೧೩ ಸಾವಿರ ಲಂಚ ಪಡೆಯುವ ವೇಳೆ ಎಸಿಬಿ ಡಿವೈಎಸ್ ಸುಧೀರ್ ನೇತೃತ್ವದ ಅಧಿಕಾರಿಳು ದಾಳಿ ನಡೆಸಿದಾಗ ಸಿಕ್ಕಿಹಾಕಿಕೊಂಡಿದ್ದಾನೆ.

ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದ ಡಿಎಚ್​​ಒ ಕಚೇರಿ ಸಿಬ್ಬಂದಿ

ಚಾಮರಾಜನಗರ: ಲಂಚ ಸ್ವೀಕರಿಸುತ್ತಿರುವ ವೇಳೆ ಡಿಎಚ್​ಒ ಕಚೇರಿ ಎಫ್​​ಡಿಎ ಮಹೇಶ್ ಎಸಿಬಿ ಬಲೆಗೆ ಬಿದ್ದಿದ್ದಾನೆ.  ಎಫ್​​ಡಿಎ ಮಹೇಶ್  ಜಿಲ್ಲಾಡಳಿತ ಭವನದ ಆವರಣದ ಹೋಟೆಲ್​ನಲ್ಲಿ 3 ಸಾವಿರ ರೂ. ಹಣ ಪಡೆಯುತ್ತಿದ್ದಾಗ ಸಿಕ್ಕಿ ಹಾಕಿಕೊಂಡಿದ್ದಾನೆ.

ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಲ್ಯಾಬ್ ಟೆಕ್ನಿಷಿಯನ್ ಪ್ರದೀಪ್‌ ಬಳಿ 5 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದನು. ಈ ವೇಳೆ ಮುಂಗಡವಾಗಿ 3 ಸಾವಿರ ರೂ. ಹಣ ಪಡೆಯುವಾಗ ವಶಕ್ಕೆ ಪಡೆಯಲಾಗಿದೆ.

ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಎಫ್​ಡಿಎ ಅಧಿಕಾರಿ

ತುಮಕೂರು: ಎಫ್​ಡಿಎ ಅಧಿಕಾರಿ ಮಧುಗಿರಿ ಎಸಿ ಕಛೇರಿಯಲ್ಲಿ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾನೆ. ಮೋಹನ್ ಕುಮಾರ್, ಎಸಿಬಿ ಬಲೆಗೆ ಬಿದ್ದ ಎಫ್ ಡಿಎ ಅಧಿಕಾರಿ. ಶಿರಾ ತಾಲ್ಲೂಕು ಬುಕ್ಕಾಪಟ್ಟಣ ಹೋಬಳಿಯ ಮಾದೇನಹಳ್ಳಿ ಗ್ರಾಮದ ಜಮೀನು ಖಾತೆ ಮಾಡಿಕೊಡುವ ವಿಚಾರಕ್ಕೆ ಮೋಹನ್ ಕುಮಾರ್ 3 ಸಾವಿರಕ್ಕೆ ಬೇಡಿಕೆಯಿಟ್ಟಿದ್ದನು.

ಈ ಸಂಬಂಧ ತುಮಕೂರು ರೈತ ಎಸಿಬಿಗೆ ದೂರು ನೀಡಿದ್ದರು. ದೂರಿನನ್ವಯ ಇಂದು (ಜುಲೈ 26) ಎಸಿಬಿ ಟ್ರ್ಯಾಪ್‌ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದಿದ್ದಾನೆ.

Published On - 4:10 pm, Tue, 26 July 22

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್