AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಗಾವಣೆ ಮಾಡಿಸುವುದಾಗಿ 75 ಲಕ್ಷ ರೂ ಹಣ ಪಡೆದು ವಂಚನೆ ಆರೋಪ: ಕೋಲಾರ ನಗರಸಭೆ ಸದಸ್ಯ ವಶಕ್ಕೆ

Kolar News: ವರ್ಗಾವಣೆ ಮಾಡಿಸುವುದಾಗಿ 75 ಲಕ್ಷ ರೂ. ಹಣ ಪಡೆದು ವಂಚನೆ ಆರೋಪ ಕೇಳಿಬಂದ ಹಿನ್ನೆಲೆ ಕೋಲಾರದ ನಗರಸಭೆ ಸದಸ್ಯನನ್ನು ಗಲ್‌ಪೇಟೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ.

ವರ್ಗಾವಣೆ ಮಾಡಿಸುವುದಾಗಿ 75 ಲಕ್ಷ ರೂ ಹಣ ಪಡೆದು ವಂಚನೆ ಆರೋಪ: ಕೋಲಾರ ನಗರಸಭೆ ಸದಸ್ಯ ವಶಕ್ಕೆ
ಗಲ್‌ಪೇಟೆ ಪೊಲೀಸ್​ ಠಾಣೆ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Jul 31, 2023 | 10:06 PM

Share

ಕೋಲಾರ, ಜುಲೈ 31: ವರ್ಗಾವಣೆ ಮಾಡಿಸುವುದಾಗಿ 75 ಲಕ್ಷ ರೂ. ಹಣ ಪಡೆದು ವಂಚನೆ ಆರೋಪ ಕೇಳಿಬಂದ ಹಿನ್ನೆಲೆ ಕೋಲಾರದ ನಗರಸಭೆ ಸದಸ್ಯ (Municipal Council member) ನನ್ನು ಗಲ್‌ಪೇಟೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಬೆಂಗಳೂರಿನ ಆಡುಗೋಡಿಯ ಪ್ರತಾಪ್ ನೀಡಿದ ದೂರಿನ ಮೇರೆಗೆ ನಗರಸಭೆ ಸದಸ್ಯ ಮುಬಾರಕ್‌ನನ್ನು ವಶಕ್ಕೆ ಪಡೆಯಲಾಗಿದೆ.

ಸಿಎಂ ಸಿದ್ಧರಾಮಯ್ಯ ರಾಜಕೀಯ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಎಂಎಲ್‌ಸಿ ನಸೀರ್ ಅಹ್ಮದ್ ಮೂಲಕ ವರ್ಗಾವಣೆ ಮಾಡಿಸುವುದಾಗಿ ಹೇಳಿದ್ದ. ವರ್ಗಾವಣೆ ಮಾಡಿಸಲು ಒಟ್ಟು 1.5 ಕೋಟಿ ರೂಪಾಯಿ ಕೇಳಿದ್ದು, ಮುಂಗಡವಾಗಿ ಎರಡು ಕಂತಿನಲ್ಲಿ 75 ಲಕ್ಷ ರೂಪಾಯಿ ಪಡೆದುಕೊಂಡಿದ್ದ. ವರ್ಗಾವಣೆ ತಡವಾದ್ದರಿಂದ ದೂರು ನೀಡಿದ್ದು, ಹಣ ವಾಪಸ್ ಕೇಳಿದಕ್ಕೆ ಬೆದರಿಕೆ ಹಾಕಿದ್ದಾರೆಂದು ಪ್ರತಾಪ್ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಗದಗ: ತವರಿನಿಂದ ಕೊಟ್ಟ ಬೆಳ್ಳಿ ಉಡುಗೊರೆ ಕಳ್ಳತನ, ಕಣ್ಣೀರು ಹಾಕುತ್ತಿರುವ ತಾಯಿ ಮಗಳು

ಇ ಸ್ಟೋರೇಜ್ ಹೆಸರಿನಲ್ಲಿ ಜನರಿಗೆ ವಂಚನೆ

ದಾವಣಗೆರೆ: ಇ ಸ್ಟೋರೇಜ್ ಹೆಸರಿನಲ್ಲಿ ಹತ್ತಾರು ಜನರಿಗೆ ವಂಚನೆ ಮಾಡಿರುವಂತಹ ಘಟನೆ ಜಿಲ್ಲೆಯ ಚನ್ನಗಿರಿಯಲ್ಲಿ ನಡೆದಿದೆ. ಈಗ ಪ್ರಾಥಮಿಕ‌ ಮಾಹಿತಿ ಪ್ರಕಾರ ಸುಮಾರು ಎರಡು ಕೋಟಿ ವಂಚನೆ ಆಗಿರುವುದು ಬೆಳಕಿಗೆ ಬಂದಿದೆ. ಆರಂಭದಲ್ಲಿ ಕೆಲ ಜನಕ್ಕೆ ಅಂಗಡಿ ಮಾಡಿಕೊಟ್ಟು, ನಂತರ ಹಣ ಹೆಚ್ಚು ಸಂಗ್ರಹವಾದ ಬಳಿಕ ಕಂಪನಿ‌ ಪ್ರತಿನಿಧಿಗಳು ನಾಪತ್ತೆಯಾಗಿದ್ದಾರೆ.

ಚನ್ನಗಿರಿ ಪೊಲೀಸ್ ಠಾಣೆಯಲ್ಲಿ 420 ಅನ್ವಯ ಕೇಸ್ ದಾಖಲಿಸಲಾಗಿದ್ದು, ಹಣ ಪಡೆದವರನ್ನ ಪತ್ತೆ ಹಚ್ಚುವ ಕೆಲಸ ಆರಂಭಿಸಲಾಗಿದೆ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ಮಾಹಿತಿ ನೀಡಿದ್ದಾರೆ.

ಹೊಲದಲ್ಲಿ ಕೆಲಸ ಮಾಡುವಾಗ ವಿದ್ಯುತ್​​​ ಪ್ರವಹಿಸಿ ರೈತ ಸಾವು

ಮೈಸೂರು: ಹೊಲದಲ್ಲಿ ಕೆಲಸ ಮಾಡುವಾಗ ವಿದ್ಯುತ್​​​ ಪ್ರವಹಿಸಿ ರೈತ ಸಾವಪ್ಪಿರುವಂತಹ ಘಟನೆ ಹೆಚ್.ಡಿ‌.ಕೋಟೆ ತಾಲೂಕಿನ ಭಾರತಿಪುರ ಗ್ರಾಮದಲ್ಲಿ‌ ನಡೆದಿದೆ. ನಾಗರಾಜು(37) ಮೃತ ರೈತ. ಹೊಲದಲ್ಲಿ ಅರಿಶಿನ ಬೆಳೆಗೆ ಔಷಧಿ ಸಿಂಪಡಿಸುತ್ತಿದ್ದಾಗ ವಿದ್ಯುತ್ ಕಂಬದ ತಂತಿ ತಾಗಿ ದುರಂತ ಸಂಭವಿಸಿದೆ.

ಇದನ್ನೂ ಓದಿ: ಬೆಂಗಳೂರು: ಮಹಿಳಾ ಟೆಕ್ಕಿಗೆ ಲೈಂಗಿಕ ಕಿರುಕುಳ ಆರೋಪ: FIR ದಾಖಲು

ವಿದ್ಯುತ್ ತಂತಿ‌ ಕೆಳಗೆ ಹಾದು ಹೋಗಿದ್ದರ ಬಗ್ಗೆ ದೂರು ನೀಡಿದ್ದರೂ ಅಧಿಕಾರಿಗಳು ಕ್ರಮಕೈಗೊಂಡಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಗ್ರಾಮಸ್ಥರ ಆರೋಪಿಸಿದ್ದಾರೆ. ಹೆಚ್.ಡಿ‌.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:57 pm, Mon, 31 July 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!