AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಜಾನಪದ ಗೀತಗಾಯನ ಮೂಲಕ ವಿನೂತನ ರೀತಿಯಲ್ಲಿ ವಾಯುಮಾಲಿನ್ಯ ಜಾಗೃತಿ ಅಭಿಯಾನ; ಅಧಿಕಾರಿಗಳು ಭಾಗಿ

ನಗರದ ಹೊಸ ಬಸ್ ನಿಲ್ದಾಣ ಹಾಗೂ ಪ್ರಾದೇಶಿಕ ಸಾರಿಗೆ ಕಚೇರಿ ಆವರಣದಲ್ಲಿ ಬುಧವಾರ ಜಾನಪದ ಜಾಗೃತಿ ಗೀತಗಾಯನದ ಮೂಲಕ ವಿನೂತನ ರೀತಿಯಲ್ಲಿ ವಾಯು ಮಾಲಿನ್ಯ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಜೀವ ಸಂಕುಲದಲ್ಲಿ ವಾಸಿಸುವ ಪ್ರತಿಯೊಂದು ಜೀವರಾಶಿಗೂ ಗಾಳಿ ಮುಖ್ಯವಾಗಿದೆ.

ಕೋಲಾರ: ಜಾನಪದ ಗೀತಗಾಯನ ಮೂಲಕ ವಿನೂತನ ರೀತಿಯಲ್ಲಿ ವಾಯುಮಾಲಿನ್ಯ ಜಾಗೃತಿ ಅಭಿಯಾನ; ಅಧಿಕಾರಿಗಳು ಭಾಗಿ
ಜಾನಪದ ಗೀತಗಾಯನ ಮೂಲಕ ವಿನೂತನ ರೀತಿಯಲ್ಲಿ ವಾಯುಮಾಲಿನ್ಯ ಜಾಗೃತಿ ಅಭಿಯಾನ
Follow us
TV9 Web
| Updated By: ಆಯೇಷಾ ಬಾನು

Updated on: Mar 16, 2022 | 6:00 PM

ಕೋಲಾರ: ಪರಿಸರವನ್ನು ವಾಯು ಮಾಲಿನ್ಯದಿಂದ ಕಾಪಾಡಿಕೊಳ್ಳುವ ಮೂಲಕ ಮುಂದಿನ ಪೀಳಿಗೆಯನ್ನು ನಾವುಗಳೇ ರಕ್ಷಿಸಿಕೊಳ್ಳಬೇಕಾದ ಪರಿಸ್ಥಿತಿ ಬಂದಿದೆ ಎಂದು ಅಂತರಾಷ್ಟ್ರೀಯ ಕಲಾವಿದ ಗೋ.ನಾ ಸ್ವಾಮಿ ಮನವಿ ಮಾಡಿದರು. ನಗರದ ಹೊಸ ಬಸ್ ನಿಲ್ದಾಣ ಹಾಗೂ ಪ್ರಾದೇಶಿಕ ಸಾರಿಗೆ ಕಚೇರಿ ಆವರಣದಲ್ಲಿ ಬುಧವಾರ ಜಾನಪದ ಜಾಗೃತಿ ಗೀತಗಾಯನದ ಮೂಲಕ ವಿನೂತನ ರೀತಿಯಲ್ಲಿ ವಾಯು ಮಾಲಿನ್ಯ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಜೀವ ಸಂಕುಲದಲ್ಲಿ ವಾಸಿಸುವ ಪ್ರತಿಯೊಂದು ಜೀವರಾಶಿಗೂ ಗಾಳಿ ಮುಖ್ಯವಾಗಿದೆ. ಗಾಳಿಯನ್ನು ಉತ್ಪಾದಿಸುವ ಗಿಡಮರಗಳನ್ನು ಹೆಚ್ಚಾಗಿ ಬೆಳೆಸುವ ಮೂಲಕ ಹೊಗೆ ಬಿಡದ ಅಥವಾ ವಿದ್ಯುತ್‌ ಚಾಲಿತ ವಾಹನಗಳನ್ನು ಬಳಸುವುದು ಸೂಕ್ತವಾಗಿದೆ ಎಂದು ಕಿವಿ ಮಾತು ಹೇಳಿದರು.

ಮನುಷ್ಯ ಒಬ್ಬರಿಂದ ಒಬ್ಬರಿಗೆ ಸ್ವತಃ ಮಾಲಿನ್ಯದಿಂದಾಗುವ ಅಪಾಯಗಳ ಬಗ್ಗೆ ಅರಿವು ಮೂಡಿಸಬೇಕಾಗಿದೆ. ವಾಹನಗಳು ಹೊರ ಸೂಸುವ ವಿಷಕಾರಿ ಹೊಗೆಯಿಂದ ಪರಿಸರ ನಾಶವಾಗುತ್ತಿದೆ. ವಾಯು ಮಾಲಿನ್ಯದಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಕ್ಕಳಿಗೆ ತಿಳಿ ಹೇಳಬೇಕು. ಮಂದಿನ ದಿನಗಳಲ್ಲಿ ಜನ ಶಾಪ ಹಾಕುವರು ಆದ್ದರಿಂದ ಇವತ್ತಿನಿಂದಲೇ ಪರಿಸರ ಉಳಿಸಬೇಕಿದೆ ಇದೇ ಸಂದರ್ಭದಲ್ಲಿ ಜನಪದ ಜಾಗೃತಿ ಗೀತೆ ಮೂಲಕ ವಾಯು ಮಾಲಿನ್ಯದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. ಈ ಸಂದರ್ಭದಲ್ಲಿ ಕೋಲಾರ ಪ್ರಾದೇಶಿಕ ಸಾರಿಗೆ ಅಧಿಕಾರಿ ಯೋ.ಮು ಕೇಶವಪ್ಪ, ಕೆಜಿಎಫ್ ಪ್ರಾದೇಶಿಕ ಅಧಿಕಾರಿ ನಯಾಜ್ ಪಾಷಾ, ಅಧಿಕಾರಿಗಳಾದ ಆನಂದ್ , ಶ್ರೀನಿವಾಸ್, ಮುಂತಾದವರು ಇದ್ದರು.

ಇದನ್ನೂ ಓದಿ: AgustaWestland case ಮಾಜಿ ರಕ್ಷಣಾ ಕಾರ್ಯದರ್ಶಿ ಶಶಿಕಾಂತ್ ಶರ್ಮಾ ವಿರುದ್ಧ ಸಿಬಿಐ ಆರೋಪಪಟ್ಟಿ

ಒಂಬತ್ತು ದಿನಗಳ ಶಿರಸಿ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವ ಆರಂಭವಾಗಿದೆ, ನೀವಿನ್ನೂ ಹೋಗಿಲ್ವಾ?