AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆಗೆ ಅಡ್ಡಿ, MP ಮುನಿಸ್ವಾಮಿ ಸೇರಿ 20ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲು

ಕೋಲಾರದಲ್ಲಿ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆಗೆ ಅಡ್ಡಿ ಪಡಿಸಿದ ಆರೋಪದಲ್ಲಿ ಸಂಸದ ಮುನಿಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ವೇಣುಗೊಪಾಲ್, ಬಿಜೆಪಿ ಮುಖಂಡ ಚಂದ್ರಾರೆಡ್ಡಿ ಸೇರಿದಂತೆ ಹಲವರ ಮೇಲೆ ಪ್ರಕರಣ ದಾಖಲಾಗಿದ್ದು ಶ್ರೀನಿವಾಸಪುರ ಪೊಲೀಸರು ಸುಮಾರು 15ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ.

ಕೋಲಾರ: ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆಗೆ ಅಡ್ಡಿ, MP ಮುನಿಸ್ವಾಮಿ ಸೇರಿ 20ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲು
MP ಮುನಿಸ್ವಾಮಿ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Sep 10, 2023 | 1:27 PM

Share

ಕೋಲಾರ, ಸೆ.10: ಜಿಲ್ಲೆಯಲ್ಲಿ ನಡೆದ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆಗೆ ಅಡ್ಡಿ ಪಡಿಸಿದ ಆರೋಪ ಕೇಳಿ ಬಂದಿದ್ದು ಕೋಲಾರ ಸಂಸದ ಮುನಿಸ್ವಾಮಿ ಸೇರಿ ಸುಮಾರು 20ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲಾಗಿದೆ. ಕೋಲಾರ ಜಿಲ್ಲೆ‌ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ವಿವಿದ ಸೆಕ್ಷನ್ ಅಡಿಯಲ್ಲಿ ಮೂರು ಪ್ರಕರಣ ದಾಖಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳ ಕೆಲಸಕ್ಕೆ ಅಡ್ಡಿ, ಜೀವ ಬೆದರಿಕೆ, ವಾಹನಗಳ ಮೇಲೆ ಕಲ್ಲು ತೂರಾಟ, ಅರಣ್ಯ ಇಲಾಖೆ ಅಧಿಕಾರಿಗಳ ಅವಾಚ್ಯ ಶಬ್ದಗಳಿಂದ ನಿಂದನೆ ಸೇರಿದಂತೆ ಕಾನೂನು ಸುವ್ಯವಸ್ಥೆ ದಕ್ಕೆ ತಂದ ಆರೋಪದಡಿ ಪ್ರಕರಣ ದಾಖಲಾಗಿದೆ,

ಕೋಲಾರದಲ್ಲಿ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆಗೆ ಅಡ್ಡಿ ಪಡಿಸಿದ ಆರೋಪದಲ್ಲಿ ಸಂಸದ ಮುನಿಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ವೇಣುಗೊಪಾಲ್, ಬಿಜೆಪಿ ಮುಖಂಡ ಚಂದ್ರಾರೆಡ್ಡಿ ಸೇರಿದಂತೆ ಹಲವರ ಮೇಲೆ ಪ್ರಕರಣ ದಾಖಲಾಗಿದ್ದು ಶ್ರೀನಿವಾಸಪುರ ಪೊಲೀಸರು ಸುಮಾರು 15ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಜಮೀನು ಒತ್ತುವರಿ ಪತ್ತೆಗೆ ಜಿಪಿಎಸ್​ ಮೂಲಕ ಸರ್ವೆ; ಶಿವಮೊಗ್ಗದಲ್ಲಿ ಕೃಷ್ಣ ಭೈರೇಗೌಡ ಹೇಳಿಕೆ

ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನ

ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕು ಪಾಳ್ಯ ಗ್ರಾಮದ ನಿವಾಸಿಗಳಾದ ಸುಶೀಲಮ್ಮ, ಲಕ್ಷ್ಮಿದೇವಮ್ಮ ಎಂಬ ಇಬ್ಬರು ಮಹಿಳೆಯರು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು. ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆಗೆ ಅಡ್ಡಿ ಪಡಿಸಿದ ಆರೋಪ ಸಂಬಂಧ ಸುಶೀಲಮ್ಮ ಪತಿ ಗೋಪಲರೆಡ್ಡಿ ಮೇಲೆ FIR ದಾಖಲಾಗಿರುವ ಹಿನ್ನಲೆ ಮಹಿಳೆಯರು ಆತ್ಮಹತ್ಯೆಗೆ ಯತ್ನಿಸಿದರು. ಸುಶೀಲಮ್ಮ ಹಾಗು ಕುಟುಂಬ ನಿನ್ನೆ ಅರಣ್ಯ ಇಲಾಖೆಯ ಒತ್ತುವರಿ ತೆರವು ಕಾರ್ಯಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಸದ್ಯ ಈಗ ದೂರು ದಾಖಲಾಗಿದೆ. ಇನ್ನು ಇತ್ತ ಸಂಸದ ಮುನಿಸ್ವಾಮಿ ಮೇಲೂ FIR ದಾಖಲಾಗಿದೆ. ಅತ್ತ ಬೆಂಗಳೂರಿನಲ್ಲಿ B.S ಯಡಿಯೂರಪ್ಪರನ್ನು ಸಂಸದ ಮುನಿಸ್ವಾಮಿ ಭೇಟಿಯಾಗಿದ್ದಾರೆ. ಹೀಗಾಗಿ ರೈತರ ಪರವಾಗಿ ಶ್ರೀನಿವಾಸಪುರದಲ್ಲಿ ಹೋರಾಟಕ್ಕೆ ಆಗಮಿಸುವಂತೆ ಸಂಸದ ಮುನಿಸ್ವಾಮಿ ಅವರಿಗೆ ಮಹಿಳೆಯರು ಮನವಿ ಮಾಡಿದ್ದಾರೆ.

ಕೋಲಾರಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಕಿಕ್ ಮಾಡಿ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ