AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆಗೆ ಅಡ್ಡಿ, MP ಮುನಿಸ್ವಾಮಿ ಸೇರಿ 20ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲು

ಕೋಲಾರದಲ್ಲಿ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆಗೆ ಅಡ್ಡಿ ಪಡಿಸಿದ ಆರೋಪದಲ್ಲಿ ಸಂಸದ ಮುನಿಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ವೇಣುಗೊಪಾಲ್, ಬಿಜೆಪಿ ಮುಖಂಡ ಚಂದ್ರಾರೆಡ್ಡಿ ಸೇರಿದಂತೆ ಹಲವರ ಮೇಲೆ ಪ್ರಕರಣ ದಾಖಲಾಗಿದ್ದು ಶ್ರೀನಿವಾಸಪುರ ಪೊಲೀಸರು ಸುಮಾರು 15ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ.

ಕೋಲಾರ: ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆಗೆ ಅಡ್ಡಿ, MP ಮುನಿಸ್ವಾಮಿ ಸೇರಿ 20ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲು
MP ಮುನಿಸ್ವಾಮಿ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ಆಯೇಷಾ ಬಾನು|

Updated on: Sep 10, 2023 | 1:27 PM

Share

ಕೋಲಾರ, ಸೆ.10: ಜಿಲ್ಲೆಯಲ್ಲಿ ನಡೆದ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆಗೆ ಅಡ್ಡಿ ಪಡಿಸಿದ ಆರೋಪ ಕೇಳಿ ಬಂದಿದ್ದು ಕೋಲಾರ ಸಂಸದ ಮುನಿಸ್ವಾಮಿ ಸೇರಿ ಸುಮಾರು 20ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲಾಗಿದೆ. ಕೋಲಾರ ಜಿಲ್ಲೆ‌ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ವಿವಿದ ಸೆಕ್ಷನ್ ಅಡಿಯಲ್ಲಿ ಮೂರು ಪ್ರಕರಣ ದಾಖಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳ ಕೆಲಸಕ್ಕೆ ಅಡ್ಡಿ, ಜೀವ ಬೆದರಿಕೆ, ವಾಹನಗಳ ಮೇಲೆ ಕಲ್ಲು ತೂರಾಟ, ಅರಣ್ಯ ಇಲಾಖೆ ಅಧಿಕಾರಿಗಳ ಅವಾಚ್ಯ ಶಬ್ದಗಳಿಂದ ನಿಂದನೆ ಸೇರಿದಂತೆ ಕಾನೂನು ಸುವ್ಯವಸ್ಥೆ ದಕ್ಕೆ ತಂದ ಆರೋಪದಡಿ ಪ್ರಕರಣ ದಾಖಲಾಗಿದೆ,

ಕೋಲಾರದಲ್ಲಿ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆಗೆ ಅಡ್ಡಿ ಪಡಿಸಿದ ಆರೋಪದಲ್ಲಿ ಸಂಸದ ಮುನಿಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ವೇಣುಗೊಪಾಲ್, ಬಿಜೆಪಿ ಮುಖಂಡ ಚಂದ್ರಾರೆಡ್ಡಿ ಸೇರಿದಂತೆ ಹಲವರ ಮೇಲೆ ಪ್ರಕರಣ ದಾಖಲಾಗಿದ್ದು ಶ್ರೀನಿವಾಸಪುರ ಪೊಲೀಸರು ಸುಮಾರು 15ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಜಮೀನು ಒತ್ತುವರಿ ಪತ್ತೆಗೆ ಜಿಪಿಎಸ್​ ಮೂಲಕ ಸರ್ವೆ; ಶಿವಮೊಗ್ಗದಲ್ಲಿ ಕೃಷ್ಣ ಭೈರೇಗೌಡ ಹೇಳಿಕೆ

ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನ

ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕು ಪಾಳ್ಯ ಗ್ರಾಮದ ನಿವಾಸಿಗಳಾದ ಸುಶೀಲಮ್ಮ, ಲಕ್ಷ್ಮಿದೇವಮ್ಮ ಎಂಬ ಇಬ್ಬರು ಮಹಿಳೆಯರು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು. ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆಗೆ ಅಡ್ಡಿ ಪಡಿಸಿದ ಆರೋಪ ಸಂಬಂಧ ಸುಶೀಲಮ್ಮ ಪತಿ ಗೋಪಲರೆಡ್ಡಿ ಮೇಲೆ FIR ದಾಖಲಾಗಿರುವ ಹಿನ್ನಲೆ ಮಹಿಳೆಯರು ಆತ್ಮಹತ್ಯೆಗೆ ಯತ್ನಿಸಿದರು. ಸುಶೀಲಮ್ಮ ಹಾಗು ಕುಟುಂಬ ನಿನ್ನೆ ಅರಣ್ಯ ಇಲಾಖೆಯ ಒತ್ತುವರಿ ತೆರವು ಕಾರ್ಯಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಸದ್ಯ ಈಗ ದೂರು ದಾಖಲಾಗಿದೆ. ಇನ್ನು ಇತ್ತ ಸಂಸದ ಮುನಿಸ್ವಾಮಿ ಮೇಲೂ FIR ದಾಖಲಾಗಿದೆ. ಅತ್ತ ಬೆಂಗಳೂರಿನಲ್ಲಿ B.S ಯಡಿಯೂರಪ್ಪರನ್ನು ಸಂಸದ ಮುನಿಸ್ವಾಮಿ ಭೇಟಿಯಾಗಿದ್ದಾರೆ. ಹೀಗಾಗಿ ರೈತರ ಪರವಾಗಿ ಶ್ರೀನಿವಾಸಪುರದಲ್ಲಿ ಹೋರಾಟಕ್ಕೆ ಆಗಮಿಸುವಂತೆ ಸಂಸದ ಮುನಿಸ್ವಾಮಿ ಅವರಿಗೆ ಮಹಿಳೆಯರು ಮನವಿ ಮಾಡಿದ್ದಾರೆ.

ಕೋಲಾರಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಕಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ