AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಗ್ಯಾಂಗ್ ವಾರ್ ಬೆನ್ನಲ್ಲೇ ಕೋಲಾರದಲ್ಲೂ ಆತಂಕಕಾರಿ ಘಟನೆ: ಮಾರಕಾಸ್ತ್ರ ಹಿಡಿದು ಜನರಲ್ಲಿ ಭಯ ಹುಟ್ಟಿಸಿದ ಯುವಕ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಪ್ರತಿಪಕ್ಷಗಳು ಗಂಭೀರ ಆರೋಪ ಮಾಡುತ್ತಿರುವ ಸಂದರ್ಭದಲ್ಲೇ ಅದಕ್ಕೆ ಪುಷ್ಟಿ ನೀಡುವಂತಹ ಘಟನೆಗಳು ಅಲ್ಲಲ್ಲಿ ನಡೆಯುತ್ತಿವೆ. ಉಡುಪಿಯ ಭೀಕರ ಗ್ಯಾಂಗ್ ವಾರ್ ಘಟನೆಯ ನೆನಪು ಮಾಸುವ ಮುನ್ನವೇ ಕೋಲಾರದ ಪಿಚ್ಚಗುಂಟ್ಲಹಳ್ಳಿಯಲ್ಲಿ ಯುವಕನೊಬ್ಬ ತಲ್ವಾರ್ ಝಳಪಿಸಿದ್ದಾನೆ.

ಉಡುಪಿ ಗ್ಯಾಂಗ್ ವಾರ್ ಬೆನ್ನಲ್ಲೇ ಕೋಲಾರದಲ್ಲೂ ಆತಂಕಕಾರಿ ಘಟನೆ: ಮಾರಕಾಸ್ತ್ರ ಹಿಡಿದು ಜನರಲ್ಲಿ ಭಯ ಹುಟ್ಟಿಸಿದ ಯುವಕ
ಸಂದೀಪ್
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:May 27, 2024 | 8:18 AM

Share

ಕೋಲಾರ, ಮೇ 27: ಉಡುಪಿಯಲ್ಲಿ ನಡೆದ ಭೀಕರ ಗ್ಯಾಂಗ್ ವಾರ್​​ (Udupi Gangwar) ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ಜನತೆ ಭೀತಿಗೊಂಡಿರುವ ಸಂದರ್ಭದಲ್ಲೇ ಕೋಲಾರದಲ್ಲಿ (Kolar) ಯುವಕನೊಬ್ಬ ಮಾರಕಾಸ್ತ್ರ (Weapon) ಹಿಡಿದು ಜನರಲ್ಲಿನ ಭಯ ಹುಟ್ಟಿಸಿದ್ದಾನೆ. ಕೋಲಾರ ಜಿಲ್ಲೆಯ ಮುಳಬಾಗಿಲು (Mulabagilu) ತಾಲೂಕಿನ ಪಿಚ್ಚಗುಂಟ್ಲಹಳ್ಳಿಯಲ್ಲಿ ಘಟನೆ ನಡೆದಿದ್ದು, 27 ವರ್ಷ ವಯಸ್ಸಿನ ಸಂದೀಪ್ ಎಂಬಾತನನ್ನು ಬಂಧಿಸಲಾಗಿದೆ. ಆತನಿಂದ ತಲ್ವಾರ್ ವಶಕ್ಕೆ ಪಡೆಯಲಾಗಿದೆ.

ಸಾರ್ವಜನಿಕರಲ್ಲಿ ಭಯ ಹುಟ್ಟಿಸುವ, ಜನರ ನೆಮ್ಮದಿಗೆ ಭಂಗ ತರುವ ಮತ್ತು ಗಲಭೆ ಸೃಷ್ಟಿ ಮಾಡುವ ಉದ್ದೇಶದಿಂದ ಸಂದೀಪ್ ಲಾಂಗ್ ಹಿಡಿದು ಪೋಸ್ ಕೊಡುತ್ತಿದ್ದ ಎನ್ನಲಾಗಿದೆ ಎಂದು ಮುಳಬಾಗಲು ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ತಡರಾತ್ರಿ 2 ಗಂಟೆಯ ಹೊತ್ತಿಗೆ ಎರಡು ಗ್ಯಾಂಗ್​ಗಳ ಮಧ್ಯೆ ಭೀಕರ ಕಾಳಗ ನಡೆದಿತ್ತು. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿ ವೈರಲ್ ಆಗಿತ್ತು. ಇಂಥ ಕೃತ್ಯಗಳು ಹಾಗೂ ವಿಡಿಯೋಗಳಿಂದ ಪ್ರಚೋದನೆ ಪಡೆದು ರಾಜ್ಯದ ಇತರ ಕಡೆಗಳಲ್ಲಿಯೂ ಯುವಕರು ಇಂಥ ಕೃತ್ಯಕ್ಕೆ ಇಳಿಯುತ್ತಿರುವುದು ಇದೀಗ ಸಾರ್ವಜನಿಕರಲ್ಲಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಒಂದೆಡೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಾಗಿ ಪ್ರತಿಪಕ್ಷಗಳು ಗಂಭೀರ ಆರೋಪ ಮಾಡುತ್ತಿವೆ. ಮತ್ತೊಂದೆಡೆ ಗ್ಯಾಂಗ್ ವಾರ್​​, ತಲ್ವಾರ್ ಪ್ರದರ್ಶನ, ಕೊಲೆಯಂಥ ಘಟನೆಗಳು ಎಗ್ಗಿಲ್ಲದೇ ನಡೆಯುತ್ತಿವೆ. ಈ ಮಧ್ಯೆ, ಕೋಲಾರದ ಪಿಚ್ಚಗುಂಟ್ಲಹಳ್ಳಿಯಲ್ಲಿಯೂ ಇದೀಗ ಭಯದ ವಾತಾವರಣ ಸೃಷ್ಟಿಯಾಗಿದೆ.

ಇದನ್ನೂ ನೋಡಿ: ಉಡುಪಿಯಲ್ಲಿ ಮೇ 18ರಂದು ನಡೆದ ಭಯಾನಕ ಗ್ಯಾಂಗ್​ವಾರ್ ದೃಶ್ಯಗಳು ಲಭ್ಯ, ಇಬ್ಬರು ಸೆರೆ

ಜೂಜಾಟದ ಅಡ್ಡೆ ಮೇಲೆ ದಾಳಿ: ಆರು ಮಂದಿಯ ಬಂಧನ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಡುವಲಪಾಳ್ಯ ಗ್ರಾಮದಲ್ಲಿ ಜೂಜಾಟದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಆರು ಜನರನ್ನು ಬಂಧಿಸಿದ್ದಾರೆ. ಬಂಧಿತರಿಂದ  6300 ರೂ ವಶಕ್ಕೆ ಪಡೆಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:13 am, Mon, 27 May 24

Follow Us
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್