AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ ಸಾರಿಗೆ ಸಂಸ್ಥೆ ಬಸ್ ಪಲ್ಟಿಯಾಗಿ ದಂಪತಿ ಸಾವು; 15 ಜನರಿಗೆ ಗಾಯ

ಆಂಧ್ರ ಸಾರಿಗೆ ಸಂಸ್ಥೆ ಬಸ್​​ ಪಲ್ಟಿಯಾಗಿ ದಂಪತಿ ಸಾವನ್ನಪ್ಪಿರುವ ಘಟನೆ ಮುಳಬಾಗಿಲು ತಾಲೂಕಿನ ವಿರುಪಾಕ್ಷಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನಡೆದಿದೆ.

ಆಂಧ್ರ ಸಾರಿಗೆ ಸಂಸ್ಥೆ ಬಸ್ ಪಲ್ಟಿಯಾಗಿ ದಂಪತಿ ಸಾವು; 15 ಜನರಿಗೆ ಗಾಯ
ಆಂಧ್ರ ಸಾರಿಗೆ ಸಂಸ್ಥೆ ಬಸ್​ ಅಪಘಾತ
TV9 Web
| Edited By: ವಿವೇಕ ಬಿರಾದಾರ|

Updated on:Aug 17, 2022 | 8:45 AM

Share

ಕೋಲಾರ: ಆಂಧ್ರ ಸಾರಿಗೆ (Andhra State Transport) ಸಂಸ್ಥೆ ಬಸ್​​ ಪಲ್ಟಿಯಾಗಿ ದಂಪತಿ ಸಾವನ್ನಪ್ಪಿರುವ ಘಟನೆ ಮುಳಬಾಗಿಲು ತಾಲೂಕಿನ ವಿರುಪಾಕ್ಷಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನಡೆದಿದೆ. ವಿಜಯವಾಡದ ಷರೀಫ್, ಮೈಮುನ್ನಿಸಾ ಮೃತ ದುರ್ದೈವಿಗಳು. ಬಸ್​​ನಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಹತ್ತಿರದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಆಂಧ್ರದ ಗುಂಟೂರಿನಿಂದ ಬೆಂಗಳೂರಿಗೆ ಬರುತ್ತಿದ್ದಾಗ ಅವಘಡ ಸಂಭವಿಸಿದೆ.

ಅಪಘಾತ ಬಳಿಕ ಬಸ್ ಚಾಲಕ, ಕಂಡಕ್ಟರ್ ಪರಾರಿಯಾಗಿದ್ದಾರೆ. ಮುಳಬಾಗಿಲು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಶೆಡ್​ಗೆ ಲಾರಿ‌ ಡಿಕ್ಕಿ, ಶೆಡ್​ನ ಗೋಡೆ‌ ಕುಸಿದು ಒಂದು ವರ್ಷದ ಹೆಣ್ಣು ‌ಮಗು ಸಾವು

ರಾಮನಗರ: ಶೆಡ್​ಗೆ ಲಾರಿ‌ ಡಿಕ್ಕಿಯಾಗಿ ಶೆಡ್​ನ ಗೋಡೆ‌ ಕುಸಿದು ಒಂದು ವರ್ಷದ ಹೆಣ್ಣು ‌ಮಗು ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣದ ಹೌಸಿಂಗ್ ಬೋರ್ಡ್​ನಲ್ಲಿ ನಡೆದಿದೆ. ಒಂದು ವರ್ಷದ ಮರಿಯಮ್ಮ ಮೃತ ಮಗು. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕುಟುಂಬ ಬಳ್ಳಾರಿ ಜಿಲ್ಲೆ ಶಿರಗುಪ್ಪದಿಂದ ಕಟ್ಟದ ಕೆಲಸಕ್ಕೆಂದು ಚೆನ್ನಪಟ್ಟಣಕ್ಕೆ ಬಂದಿದ್ದರು. ತಡರಾತ್ರಿ ಮಲಗಿದ್ದ ವೇಳೆ ಗ್ರಾನೈಟ್ ತುಂಬಿಕೊಂಡು ಬಂದಿದ್ದ ಲಾರಿ ಶೆಡ್​ನ ಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಶೆಡ್​ನ ಗೋಡೆ ಕುಸಿದದು ಮಲಗಿದ್ದ ಮಗುವಿನ ಮೇಲೆ ಬಿದ್ದಿದೆ.

ಮೈಸೂರಿನಲ್ಲಿ ಚಿರತೆ ದಾಳಿ ಕರು ಸಾವು

ಮೈಸೂರು: ಹುಣಸೂರು ತಾಲೂಕಿನ ಕಾಳೇನಹಳ್ಳಿ ಗ್ರಾಮಕ್ಕೆ ಚಿರತೆ ನುಗ್ಗಿ ರೈತ ಓರ್ವನ ಕರುವನ್ನು ಹೊತ್ತೊಯ್ದಿದೆ. ಕಳೆದ ಎರಡು ತಿಂಗಳಿನಿಂದ ಗ್ರಾಮಕ್ಕೆ ಚಿರತೆ ಬರುತ್ತಿತ್ತು. ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

Published On - 8:31 am, Wed, 17 August 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ