AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ರಾತ್ರೋರಾತ್ರಿ ಬಾಲಕಿಯರ ಹಾಸ್ಟೆಲ್​ಗೆ ನುಗ್ಗಿದ ಯುವಕ, ಮುಂದೇನಾಯ್ತು?

ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಬೇತಮಂಗಲದಲ್ಲಿರುವ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್​ಗೆ ರಾತ್ರಿ ಅಪರಿಚಿತ ಯುವಕನೊಬ್ಬ ನುಗ್ಗಿದ ಘಟನೆ ನಡೆದಿತ್ತು. ಈ ಕುರಿತು ವಾರ್ಡನ್​ ಪೊಲೀಸ್​ ಠಾಣೆಗೆ ದೂರು ಕೊಟ್ಟಿದ್ದರು. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.

ಕೋಲಾರ: ರಾತ್ರೋರಾತ್ರಿ ಬಾಲಕಿಯರ ಹಾಸ್ಟೆಲ್​ಗೆ ನುಗ್ಗಿದ ಯುವಕ, ಮುಂದೇನಾಯ್ತು?
ಬಾಲಕಿಯರ ವಸತಿ ನಿಲಯ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Aug 18, 2023 | 10:53 AM

Share

ಕೋಲಾರ, ಆ.18: ಅಕ್ರಮವಾಗಿ ಬಾಲಕಿಯರ ಹಾಸ್ಟೆಲ್​ಗೆ ನುಗ್ಗಿದ ಯುವಕನನ್ನು ಬಂಧಿಸಿದ ಘಟನೆ ಕೋಲಾರ(Kolar) ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಬೇತಮಂಗಲದಲ್ಲಿರುವ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್​(Hostel)ನಲ್ಲಿ ನಡೆದಿದೆ. ಬೇತಮಂಗಲ ನಿವಾಸಿ ಮುರಳಿ(25) ಬಂಧಿತ ಅರೋಪಿ. ನಿನ್ನೆ (ಆ.17) ಮಧ್ಯರಾತ್ರಿ ಆರೋಪಿ ಯುವಕನೊಬ್ಬ ಬಾಲಕಿಯರ ವಸತಿ ನಿಲಯಕ್ಕೆ ನುಗ್ಗಿದ್ದ. ಈ ಘಟನೆ ಕುರಿತು ಹಾಸ್ಟೆಲ್ ವಾರ್ಡನ್ ಬೇತಮಂಗಲ ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ಈ ಹಿನ್ನಲೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಆರೋಪಿಯನ್ನು ಅರೆಸ್ಟ್​ ಮಾಡಿದ್ದಾರೆ.

ಮಧ್ಯರಾತ್ರಿ ಹಾಸ್ಟೆಲ್​ಗೆ ನುಗ್ಗಿದ ಪರಿಣಾಮ ಭಯಭೀತರಾದ ವಿದ್ಯಾರ್ಥಿಗಳು

ಇನ್ನು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಈ ಹಾಸ್ಟೆಲ್​ನಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ 6 ರಿಂದ 10 ನೇ ತರಗತಿ ಓದುತ್ತಿರುವ 60 ಕ್ಕೂ ಹೆಚ್ವು ವಿದ್ಯಾರ್ಥಿನಿಯರು ದಾಖಲಾಗಿದ್ದು, ಈ ನಡುವೆ ಮಧ್ಯರಾತ್ರಿ ಅಪರಿಚಿತ ಯುವಕ ಹಾಸ್ಟೆಲ್​ಗೆ ನುಗ್ಗಿದ ಪರಿಣಾಮ ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ. ಹಾಸ್ಟೆಲ್​​ನಲ್ಲಿ ಭದ್ರತೆ ಹಾಗೂ ಸುರಕ್ಷತೆ ನೀಡದ ಹಾಸ್ಟೆಲ್ ವಾರ್ಡನ್ ಸೇರಿದಂತೆ ಅಧಿಕಾರಿಗಳ ವಿರುದ್ದ ಸ್ಥಳೀಯರ ವಿರುದ್ದ ಕ್ರಮಕ್ಕೆ ಒತ್ತಾಯಿಸಿದ್ದಾರೆ. ವಿಷಯ ತಿಳಿದು ಬೇತಮಂಗಲ ಗ್ರಾಮ ಪಂಚಾಯತಿ ಅಧ್ಯಕ್ಷ ವಿನೂಕಾರ್ತಿಕ್ ಸ್ಥಳಕ್ಕೆ ಭೇಟಿ ನೀಡಿ, ವಿದ್ಯಾರ್ಥಿನಿಯರಿಗೆ ಧೈರ್ಯ ಹೇಳಿದ್ದಾರೆ.

ಇದನ್ನೂ ಓದಿ:Hassan News: ನರಕಮಯವಾದ ಬಾಲಕಿಯರ ಹಾಸ್ಟೆಲ್​​! ಕನಿಷ್ಠ ಮೂಲ ಸೌಕರ್ಯವಿಲ್ಲದೇ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ ಮಕ್ಕಳು

ಚಲಿಸುತ್ತಿದ್ದ ಸರ್ಕಾರಿ ಬಸ್​ನಿಂದ ಬಿದ್ದು ಕಾಲೇಜು ವಿದ್ಯಾರ್ಥಿಗೆ ಗಾಯ

ಬೆಳಗಾವಿ: ಜಿಲ್ಲೆಯ ಅಥಣಿ ಬಸ್ ನಿಲ್ದಾಣದಲ್ಲಿ ಚಲಿಸುತ್ತಿದ್ದ ಸರ್ಕಾರಿ ಬಸ್​ನಿಂದ ಬಿದ್ದು ಕಾಲೇಜು ವಿದ್ಯಾರ್ಥಿಗೆ ಗಾಯವಾದ ಘಟನೆ ನಿನ್ನೆ(ಆ.17) ಸಂಜೆ ನಡೆದಿತ್ತು. ಅಥಣಿ ತಾಲೂಕಿನ ಅಜೂರ್ ಗ್ರಾಮದ ವಿಠೋಬಾ ಮಾನೆ (19)ಗೆ ಗಾಯಗೊಂಡ ವಿದ್ಯಾರ್ಥಿ. ಶಕ್ತಿ ಯೋಜನೆ ಹಿನ್ನೆಲೆ ಸಾರಿಗೆ ಬಸ್‌ಗಳು ತುಂಬಿ ತುಳುಕುತ್ತಿದ್ದು, ಈ ಹಿನ್ನೆಲೆ ಶಾಲಾ ಕಾಲೇಜು ವಿದ್ಯಾರ್ಥಿಗಳ ಪ್ರಯಾಣಕ್ಕೆ ಸಮಸ್ಯೆಯಾಗಿದೆ. ಬಸ್​ನಲ್ಲಿ ಜಾಗ ಇಲ್ಲದೆ ಬಾಗಿಲಿಗೆ ಜೋತು ಬಿದ್ದು ಪ್ರಯಾಣ ಮಾಡುವ ಪರಿಸ್ಥಿತಿ ಎದುರಾಗಿದೆ. ಇನ್ನು ಕೂಡಲೇ ಅಥಣಿಯ ಖಾಸಗಿ ಆಸ್ಪತ್ರೆಗೆ ಗಾಯಾಳು ವಿದ್ಯಾರ್ಥಿಯನ್ನು ಸೇರಿಸಲಾಗಿತ್ತು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rajendra Simha BL
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More